AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಅಲೆ ಹೆಚ್ಚಿದ್ದರೂ ಏರ್​​ಪೋರ್ಟ್​​​ನಲ್ಲಿ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (KIA) ನಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ನಿರ್ಲಕ್ಷ್ಯಎದ್ದು ಕಾಣುತ್ತಿದೆ. ಕೇರಳ ಮತ್ತು ಮಹಾರಾಷ್ಟ್ರದಿಂದ ಬಂದ ಪ್ರಯಾಣಿಕರಿಗೆ ಆರ್‌ಟಿಪಿಸಿಆರ್ ಟೆಸ್ಟ್ ಮಾಡುತ್ತಿದ್ದಾರೆ. ಆದ್ರೆ ಟೆಸ್ಟ್ ರಿಪೋರ್ಟ್ ಬರುವುದಕ್ಕೂ ಮುನ್ನವೇ ಅವರನ್ನು ಕಳಿಸಲಾಗುತ್ತಿದೆ.

ಕೊರೊನಾ ಅಲೆ ಹೆಚ್ಚಿದ್ದರೂ ಏರ್​​ಪೋರ್ಟ್​​​ನಲ್ಲಿ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ
ಕೆಂಪೇಗೌಡ ವಿಮಾನ ನಿಲ್ದಾಣ
ಆಯೇಷಾ ಬಾನು
|

Updated on: Mar 02, 2021 | 10:56 AM

Share

ದೇವನಹಳ್ಳಿ: ಮಹಾಮಾರಿ ಕೊರೊನಾ ಮತ್ತೆ ತನ್ನ ಆರ್ಭಟ ಶುರು ಮಾಡಿದೆ. ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಕೊರೊನಾ ಎರಡನೆ ಅಲೆ ಹಿನ್ನೆಲೆಯಲ್ಲಿ ಎರಡೂ ರಾಜ್ಯಗಳಿಂದ ಬಂದವರಿಗೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (KIA) ನಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಕೇರಳ ಮತ್ತು ಮಹಾರಾಷ್ಟ್ರದಿಂದ ಬಂದ ಪ್ರಯಾಣಿಕರಿಗೆ ಆರ್‌ಟಿಪಿಸಿಆರ್ ಟೆಸ್ಟ್ ಮಾಡುತ್ತಿದ್ದಾರೆ. ಆದ್ರೆ ಟೆಸ್ಟ್ ರಿಪೋರ್ಟ್ ಬರುವುದಕ್ಕೂ ಮುನ್ನವೇ ಅವರನ್ನು ಕಳಿಸಲಾಗುತ್ತಿದೆ.

ಹೆಸರಿಗಷ್ಟೆ ಸೀಮಿತವಾಯ್ತ ಕೊರೊನಾ ಟೆಸ್ಟಿಂಗ್? ಕೇರಳ ಮತ್ತು ಮಹಾರಾಷ್ಟ್ರದಿಂದ ನೆಗೆಟಿವ್ ರಿಪೋರ್ಟ್ ಇಲ್ಲದೆ ಬಂದವರಿಗೆ ಏರ್​​ಪೋರ್ಟ್​​​ನಲ್ಲಿ ಆರ್‌ಟಿಪಿಸಿಆರ್ ಟೆಸ್ಟ್ ಮಾಡಲಾಗುತ್ತಿದೆ. ಆದ್ರೆ ಟೆಸ್ಟ್ ಮಾಡಿದ ನಂತರ ರಿಪೋರ್ಟ್ ಬರುವುದಕ್ಕೂ ಮುನ್ನವೇ ಮನೆಗೆ ಕಳಿಸಲಾಗುತ್ತಿದೆ. ವ್ಯಕ್ತಿಯ ವಿಳಾಸ ಫೋನ್ ನಂಬರ್ ಪಡೆದು ಏರ್​​ಪೋರ್ಟ್​ನಿಂದ ಖಾಸಗಿ ಅಥವಾ ಟ್ಯಾಕ್ಸಿಗಳಲ್ಲಿ ಮನೆಗೆ ವಾಪಸ್ ಕಳಿಸಲಾಗುತ್ತಿದೆ. ಆದ್ರೆ ಟೆಸ್ಟ್ ಮಾಡಿಸಿದ ವ್ಯಕ್ತಿಗೆ ಯಾವುದೇ ಸೀಲ್ ಹಾಕುತ್ತಿಲ್ಲ.

ಆ ವ್ಯಕ್ತಿ ಏನಾದರೂ ಕ್ವಾರಂಟೈನ್ ಆಗದೇ ಓಡಾಡ್ತಾ ಇದ್ದು ಅವರ ಟೆಸ್ಟ್ ರಿಪೋರ್ಟ್ ಪಾಸಿಟಿವ್ ಬಂದ್ರೆ ಕೊರೊನಾ ಹರಡುವ ಭೀತಿ ಹೆಚ್ಚಿದೆ. ಕೇವಲ ಹೆಸರಿಗಷ್ಟೆ ಏರ್ಪೋಟ್​ನಲ್ಲಿ ಟೆಸ್ಟಿಂಗ್ ಮಾಡ್ತಿದ್ದಾರಾ ಅನ್ನೂ ಅನುಮಾನ ವ್ಯಕ್ತವಾಗುತ್ತಿದೆ. ಪ್ರತಿನಿತ್ಯ ಕೇರಳ ಮತ್ತು ಮಹಾರಾಷ್ಟ್ರದಿಂದ ಬೆಂಗಳೂರಿಗೆ ನೂರಾರು ಜನ ಬರ್ತಿದ್ದಾರೆ. ಸ್ಬಲ್ಪ ಯಾಮಾರಿದ್ರು ರಾಜಧಾನಿಯಲ್ಲಿ ಕೊರೊನಾ ಎರಡನೆ ಅಲೆ ಹರಡಬಹುದು. ನಿನ್ನೆಯಷ್ಟೆ ಕೇಂದ್ರದ ಕೋವಿಡ್ ಟಾಸ್ಕ್ ಫೋರ್ಸ್ ತಂಡ ಬೆಂಗಳೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ಆದ್ರು ಸಹ ಎಚ್ಚೆತ್ತುಕೊಳ್ಳದೆ ಆರೋಗ್ಯ ಇಲಾಖೆ ನಿರ್ಲಕ್ಷ್ಯ ಮುಂದುವರೆಸಿದೆ. ಇದೇನಾದ್ರೂ ಹೀಗೆ ಸಾಗಿದ್ರೆ ಖಂಡಿತವಾಗಿಯೂ ಈ ನಿರ್ಲಕ್ಷ್ಯ ದೊಡ್ಡ ಅನಾಹುತಕ್ಕೆ ಕಾರಣವಾಗಲಿದೆ.

ಇದನ್ನೂ ಓದಿ: ಮುನ್ನೆಚ್ಚರಿಕಾ ಕ್ರಮ: ಕೆಂಪೇಗೌಡ ಮೆಟ್ರೋ ನಿಲ್ದಾಣದ ಗೇಟ್ ಬಂದ್

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ