AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈಟ್​ ಶಿಫ್ಟ್​ ಮಾಡ್ತೀರಾ? ಹಾಗಿದ್ರೆ ಈ ತೊಂದರೆಗಳನ್ನು ಎದುರಿಸೋಕೆ ಮಾನಸಿಕವಾಗಿ ಸಿದ್ಧರಾಗಿ 

ವಾಷಿಂಗ್ಟನ್​​ ವಿಶ್ವವಿದ್ಯಾಲಯವು ರಾತ್ರಿ ಪಾಳಿಯಿಂದ ಉಂಟಾಗುವ ತೊಂದರೆಗಳು ಏನು ಎನ್ನುವುದನ್ನು ಪಟ್ಟಿ ಮಾಡಿದೆ ಮತ್ತು ಅದಕ್ಕೆ ಕಾರಣವನ್ನೂ ನೀಡಿದೆ.

ನೈಟ್​ ಶಿಫ್ಟ್​ ಮಾಡ್ತೀರಾ? ಹಾಗಿದ್ರೆ ಈ ತೊಂದರೆಗಳನ್ನು ಎದುರಿಸೋಕೆ ಮಾನಸಿಕವಾಗಿ ಸಿದ್ಧರಾಗಿ 
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: ಆಯೇಷಾ ಬಾನು|

Updated on: Mar 12, 2021 | 6:46 AM

Share

ಜಾಬ್​ಗೆ ಸೇರಿದ ಮೇಲೆ ಜೀವನವೇ ಮುಗಿಯಿತು ಎಂಬುದು ಅನೇಕರ ಭಾವನೆ. ಕೆಲವರ ಪಾಲಿಗೆ ಇದು ನಿಜವೂ ಹೌದು. ಏಕೆಂದರೆ, ಕೆಲಸಕ್ಕೆ ಸೇರಿದ ಮೇಲೆ ಬಾಸ್​ ಹೇಳಿದಂತೆ ಕೇಳಬೇಕು. ರಾತ್ರಿ ಪಾಳಿಗೆ ಬರುವಂತೆ ಹೇಳಿದರೆ ಮರುಮಾತನಾಡದೆ ಬರಬೇಕು. ಆದರೆ, ಇನ್ನುಮುಂದೆ ನೈಟ್​ ಶಿಫ್ಟ್​ಗೆ ಓಕೆ ಎನ್ನುವ ಮೊದಲು ಸಾಕಷ್ಟು ಬಾರಿ ಯೋಚನೆ ಮಾಡಿ. ಏಕೆಂದರೆ, ನಿರಂತರ ರಾತ್ರಿ ಪಾಳಿಯಿಂದ ನಿಮ್ಮ ಆರೋಗ್ಯ ಸಂಪೂರ್ಣವಾಗಿ ಹದಗೆಡಬಹುದಂತೆ! ಹೀಗೊಂದು ಎಚ್ಚರಿಕೆಯನ್ನು ಹೊಸ ಅಧ್ಯಯನ ನೀಡಿದೆ. ವಾಷಿಂಗ್ಟನ್​​ ವಿಶ್ವವಿದ್ಯಾಲಯ ಈ ಆತಂಕಕಾರಿ ಮಾಹಿತಿ ಹೊರ ಹಾಕಿದೆ. ಅಷ್ಟೇ ಅಲ್ಲ, ರಾತ್ರಿ ಪಾಳಿಯಿಂದ ಉಂಟಾಗುವ ತೊಂದರೆಗಳು ಏನು ಎನ್ನುವುದನ್ನು ಪಟ್ಟಿ ಮಾಡಿ,  ಅದಕ್ಕೆ ಕಾರಣವನ್ನೂ ನೀಡಿದೆ. ಈ ಅಧ್ಯಯನ ಹೇಳುವ ಪ್ರಕಾರ ದೀರ್ಘಕಾಲ ರಾತ್ರಿ ಪಾಳಿ ಮಾಡಿದರೆ ಕ್ಯಾನ್ಸರ್​ ವಕ್ಕರಿಸಬಹುದಂತೆ!

ಪ್ರತಿ ವ್ಯಕ್ತಿ ರಾತ್ರಿ ಹೊತ್ತು ನಿದ್ರಿಸಬೇಕು ಮತ್ತು ಮುಂಜಾನೆ ಏಳಬೇಕು. ಆದರೆ, ರಾತ್ರಿ ಪಾಳಿಯಿಂದ ಇದು ತಲೆಕೆಳಗಾಗುತ್ತದೆ. ನೈಟ್​ ಶಿಫ್ಟ್​ ಮಾಡುವ ವ್ಯಕ್ತಿ ಹಗಲು ನಿದ್ರಿಸಿ ರಾತ್ರಿ ಎಚ್ಚರ ಇರುತ್ತಾನೆ. ಇದು ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತದೆ. ಇನ್ನು, ಈ ಪದ್ಧತಿ ರೂಢಿಸಿಕೊಳ್ಳುವುದರಿಂದ ಡಿಎನ್​ಎ ಕೂಡ ಹಾನಿಗೆ ತುತ್ತಾಗುತ್ತದೆ. ಇದು ಕ್ಯಾನ್ಸರ್​​ಗೆ ಎಡೆಮಾಡಿಕೊಡಬಹುದು ಎನ್ನುತ್ತಿದೆ ಅಧ್ಯಯನ.

ಈ ರೀತಿ ರಾತ್ರಿ ಪಾಳಿ ಮಾಡುವವರನ್ನು ತಜ್ಞರ ತಂಡ ಪರೀಕ್ಷೆಗೆ ಒಳಪಡಿಸಿತ್ತು. ಈ ವೇಳೆ ಅವರಲ್ಲಿ ಕ್ಯಾನ್ಸರ್​ ಕಾಣಿಸಿಕೊಂಡವರ ಪ್ರಮಾಣ ಹೆಚ್ಚಿದೆಯಂತೆ. ನಿದ್ರೆಯ ಅಸಮತೋಲನವೇ ಇದಕ್ಕೆ ನೇರ ಕಾರಣ ಎಂದು ಅಧ್ಯಯನ ತಿಳಿಸಿದೆ. ಇದರ ಜತೆಗೆ ಇನ್ನೂ ಅನೇಕ ಅಸಮತೋಲನಗಳು ನೈಟ್​ಶಿಫ್ಟ್​ನಿಂದ ಉಂಟಾಗಬಹುದು ಎಂದು ಅಧ್ಯಯನ ತಿಳಿಸಿದೆ.

ಹಗಲು ನಿದ್ರೆ ಮಾಡುವುದರಿಂದ ಸೂರ್ಯನ ಕಿರಣಗಳು ದೇಹದ ಮೇಲೆ ಬೀಳುವುದಿಲ್ಲ. ಹೀಗಾದಾಗ, ವಿಟಮಿನ್​ ಕೊರತೆ ಕೂಡ ಉಂಟಾಗಲಿದ್ದು, ಇದರಿಂದ ಚರ್ಮಕ್ಕೆ ಸಂಬಂಧಿಸಿದ ಕಾಯಿಲೆಗಳು ಎದುರಾಗುವ ಸಾಧ್ಯತೆ ಇರುತ್ತದೆ.

ಇದನ್ನೂ ಓದಿ: ವರ್ಕ್​ ಫ್ರಂ ಹೋಮ್​​ ಪರಿಣಾಮ: ಕಚೇರಿ ಕೆಲಸ ಮತ್ತು ವೈಯಕ್ತಿಕ ಜೀವನ ನಿಭಾಯಿಸುವಲ್ಲಿ ಪುರುಷರಿಗಿಂತ ಮಹಿಳೆಯರಿಗೇ ಹೆಚ್ಚು ಒತ್ತಡ

ಬೆಳಗೆದ್ದು ಗ್ರೀನ್​ ಟೀ ಅಥವಾ ಬ್ಲಾಕ್​ ಟೀ ಕುಡಿತೀರಾ? ಹಾಗಿದ್ರೆ ಈ ರೋಗಗಳು ನಿಮ್ಮ ಬಳಿ ಸುಳಿಯಲ್ಲ

Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!