AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈಟ್​ ಶಿಫ್ಟ್​ ಮಾಡ್ತೀರಾ? ಹಾಗಿದ್ರೆ ಈ ತೊಂದರೆಗಳನ್ನು ಎದುರಿಸೋಕೆ ಮಾನಸಿಕವಾಗಿ ಸಿದ್ಧರಾಗಿ 

ವಾಷಿಂಗ್ಟನ್​​ ವಿಶ್ವವಿದ್ಯಾಲಯವು ರಾತ್ರಿ ಪಾಳಿಯಿಂದ ಉಂಟಾಗುವ ತೊಂದರೆಗಳು ಏನು ಎನ್ನುವುದನ್ನು ಪಟ್ಟಿ ಮಾಡಿದೆ ಮತ್ತು ಅದಕ್ಕೆ ಕಾರಣವನ್ನೂ ನೀಡಿದೆ.

ನೈಟ್​ ಶಿಫ್ಟ್​ ಮಾಡ್ತೀರಾ? ಹಾಗಿದ್ರೆ ಈ ತೊಂದರೆಗಳನ್ನು ಎದುರಿಸೋಕೆ ಮಾನಸಿಕವಾಗಿ ಸಿದ್ಧರಾಗಿ 
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: ಆಯೇಷಾ ಬಾನು|

Updated on: Mar 12, 2021 | 6:46 AM

Share

ಜಾಬ್​ಗೆ ಸೇರಿದ ಮೇಲೆ ಜೀವನವೇ ಮುಗಿಯಿತು ಎಂಬುದು ಅನೇಕರ ಭಾವನೆ. ಕೆಲವರ ಪಾಲಿಗೆ ಇದು ನಿಜವೂ ಹೌದು. ಏಕೆಂದರೆ, ಕೆಲಸಕ್ಕೆ ಸೇರಿದ ಮೇಲೆ ಬಾಸ್​ ಹೇಳಿದಂತೆ ಕೇಳಬೇಕು. ರಾತ್ರಿ ಪಾಳಿಗೆ ಬರುವಂತೆ ಹೇಳಿದರೆ ಮರುಮಾತನಾಡದೆ ಬರಬೇಕು. ಆದರೆ, ಇನ್ನುಮುಂದೆ ನೈಟ್​ ಶಿಫ್ಟ್​ಗೆ ಓಕೆ ಎನ್ನುವ ಮೊದಲು ಸಾಕಷ್ಟು ಬಾರಿ ಯೋಚನೆ ಮಾಡಿ. ಏಕೆಂದರೆ, ನಿರಂತರ ರಾತ್ರಿ ಪಾಳಿಯಿಂದ ನಿಮ್ಮ ಆರೋಗ್ಯ ಸಂಪೂರ್ಣವಾಗಿ ಹದಗೆಡಬಹುದಂತೆ! ಹೀಗೊಂದು ಎಚ್ಚರಿಕೆಯನ್ನು ಹೊಸ ಅಧ್ಯಯನ ನೀಡಿದೆ. ವಾಷಿಂಗ್ಟನ್​​ ವಿಶ್ವವಿದ್ಯಾಲಯ ಈ ಆತಂಕಕಾರಿ ಮಾಹಿತಿ ಹೊರ ಹಾಕಿದೆ. ಅಷ್ಟೇ ಅಲ್ಲ, ರಾತ್ರಿ ಪಾಳಿಯಿಂದ ಉಂಟಾಗುವ ತೊಂದರೆಗಳು ಏನು ಎನ್ನುವುದನ್ನು ಪಟ್ಟಿ ಮಾಡಿ,  ಅದಕ್ಕೆ ಕಾರಣವನ್ನೂ ನೀಡಿದೆ. ಈ ಅಧ್ಯಯನ ಹೇಳುವ ಪ್ರಕಾರ ದೀರ್ಘಕಾಲ ರಾತ್ರಿ ಪಾಳಿ ಮಾಡಿದರೆ ಕ್ಯಾನ್ಸರ್​ ವಕ್ಕರಿಸಬಹುದಂತೆ!

ಪ್ರತಿ ವ್ಯಕ್ತಿ ರಾತ್ರಿ ಹೊತ್ತು ನಿದ್ರಿಸಬೇಕು ಮತ್ತು ಮುಂಜಾನೆ ಏಳಬೇಕು. ಆದರೆ, ರಾತ್ರಿ ಪಾಳಿಯಿಂದ ಇದು ತಲೆಕೆಳಗಾಗುತ್ತದೆ. ನೈಟ್​ ಶಿಫ್ಟ್​ ಮಾಡುವ ವ್ಯಕ್ತಿ ಹಗಲು ನಿದ್ರಿಸಿ ರಾತ್ರಿ ಎಚ್ಚರ ಇರುತ್ತಾನೆ. ಇದು ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತದೆ. ಇನ್ನು, ಈ ಪದ್ಧತಿ ರೂಢಿಸಿಕೊಳ್ಳುವುದರಿಂದ ಡಿಎನ್​ಎ ಕೂಡ ಹಾನಿಗೆ ತುತ್ತಾಗುತ್ತದೆ. ಇದು ಕ್ಯಾನ್ಸರ್​​ಗೆ ಎಡೆಮಾಡಿಕೊಡಬಹುದು ಎನ್ನುತ್ತಿದೆ ಅಧ್ಯಯನ.

ಈ ರೀತಿ ರಾತ್ರಿ ಪಾಳಿ ಮಾಡುವವರನ್ನು ತಜ್ಞರ ತಂಡ ಪರೀಕ್ಷೆಗೆ ಒಳಪಡಿಸಿತ್ತು. ಈ ವೇಳೆ ಅವರಲ್ಲಿ ಕ್ಯಾನ್ಸರ್​ ಕಾಣಿಸಿಕೊಂಡವರ ಪ್ರಮಾಣ ಹೆಚ್ಚಿದೆಯಂತೆ. ನಿದ್ರೆಯ ಅಸಮತೋಲನವೇ ಇದಕ್ಕೆ ನೇರ ಕಾರಣ ಎಂದು ಅಧ್ಯಯನ ತಿಳಿಸಿದೆ. ಇದರ ಜತೆಗೆ ಇನ್ನೂ ಅನೇಕ ಅಸಮತೋಲನಗಳು ನೈಟ್​ಶಿಫ್ಟ್​ನಿಂದ ಉಂಟಾಗಬಹುದು ಎಂದು ಅಧ್ಯಯನ ತಿಳಿಸಿದೆ.

ಹಗಲು ನಿದ್ರೆ ಮಾಡುವುದರಿಂದ ಸೂರ್ಯನ ಕಿರಣಗಳು ದೇಹದ ಮೇಲೆ ಬೀಳುವುದಿಲ್ಲ. ಹೀಗಾದಾಗ, ವಿಟಮಿನ್​ ಕೊರತೆ ಕೂಡ ಉಂಟಾಗಲಿದ್ದು, ಇದರಿಂದ ಚರ್ಮಕ್ಕೆ ಸಂಬಂಧಿಸಿದ ಕಾಯಿಲೆಗಳು ಎದುರಾಗುವ ಸಾಧ್ಯತೆ ಇರುತ್ತದೆ.

ಇದನ್ನೂ ಓದಿ: ವರ್ಕ್​ ಫ್ರಂ ಹೋಮ್​​ ಪರಿಣಾಮ: ಕಚೇರಿ ಕೆಲಸ ಮತ್ತು ವೈಯಕ್ತಿಕ ಜೀವನ ನಿಭಾಯಿಸುವಲ್ಲಿ ಪುರುಷರಿಗಿಂತ ಮಹಿಳೆಯರಿಗೇ ಹೆಚ್ಚು ಒತ್ತಡ

ಬೆಳಗೆದ್ದು ಗ್ರೀನ್​ ಟೀ ಅಥವಾ ಬ್ಲಾಕ್​ ಟೀ ಕುಡಿತೀರಾ? ಹಾಗಿದ್ರೆ ಈ ರೋಗಗಳು ನಿಮ್ಮ ಬಳಿ ಸುಳಿಯಲ್ಲ

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ