AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈಟ್​ ಶಿಫ್ಟ್​ ಮಾಡ್ತೀರಾ? ಹಾಗಿದ್ರೆ ಈ ತೊಂದರೆಗಳನ್ನು ಎದುರಿಸೋಕೆ ಮಾನಸಿಕವಾಗಿ ಸಿದ್ಧರಾಗಿ 

ವಾಷಿಂಗ್ಟನ್​​ ವಿಶ್ವವಿದ್ಯಾಲಯವು ರಾತ್ರಿ ಪಾಳಿಯಿಂದ ಉಂಟಾಗುವ ತೊಂದರೆಗಳು ಏನು ಎನ್ನುವುದನ್ನು ಪಟ್ಟಿ ಮಾಡಿದೆ ಮತ್ತು ಅದಕ್ಕೆ ಕಾರಣವನ್ನೂ ನೀಡಿದೆ.

ನೈಟ್​ ಶಿಫ್ಟ್​ ಮಾಡ್ತೀರಾ? ಹಾಗಿದ್ರೆ ಈ ತೊಂದರೆಗಳನ್ನು ಎದುರಿಸೋಕೆ ಮಾನಸಿಕವಾಗಿ ಸಿದ್ಧರಾಗಿ 
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: ಆಯೇಷಾ ಬಾನು|

Updated on: Mar 12, 2021 | 6:46 AM

Share

ಜಾಬ್​ಗೆ ಸೇರಿದ ಮೇಲೆ ಜೀವನವೇ ಮುಗಿಯಿತು ಎಂಬುದು ಅನೇಕರ ಭಾವನೆ. ಕೆಲವರ ಪಾಲಿಗೆ ಇದು ನಿಜವೂ ಹೌದು. ಏಕೆಂದರೆ, ಕೆಲಸಕ್ಕೆ ಸೇರಿದ ಮೇಲೆ ಬಾಸ್​ ಹೇಳಿದಂತೆ ಕೇಳಬೇಕು. ರಾತ್ರಿ ಪಾಳಿಗೆ ಬರುವಂತೆ ಹೇಳಿದರೆ ಮರುಮಾತನಾಡದೆ ಬರಬೇಕು. ಆದರೆ, ಇನ್ನುಮುಂದೆ ನೈಟ್​ ಶಿಫ್ಟ್​ಗೆ ಓಕೆ ಎನ್ನುವ ಮೊದಲು ಸಾಕಷ್ಟು ಬಾರಿ ಯೋಚನೆ ಮಾಡಿ. ಏಕೆಂದರೆ, ನಿರಂತರ ರಾತ್ರಿ ಪಾಳಿಯಿಂದ ನಿಮ್ಮ ಆರೋಗ್ಯ ಸಂಪೂರ್ಣವಾಗಿ ಹದಗೆಡಬಹುದಂತೆ! ಹೀಗೊಂದು ಎಚ್ಚರಿಕೆಯನ್ನು ಹೊಸ ಅಧ್ಯಯನ ನೀಡಿದೆ. ವಾಷಿಂಗ್ಟನ್​​ ವಿಶ್ವವಿದ್ಯಾಲಯ ಈ ಆತಂಕಕಾರಿ ಮಾಹಿತಿ ಹೊರ ಹಾಕಿದೆ. ಅಷ್ಟೇ ಅಲ್ಲ, ರಾತ್ರಿ ಪಾಳಿಯಿಂದ ಉಂಟಾಗುವ ತೊಂದರೆಗಳು ಏನು ಎನ್ನುವುದನ್ನು ಪಟ್ಟಿ ಮಾಡಿ,  ಅದಕ್ಕೆ ಕಾರಣವನ್ನೂ ನೀಡಿದೆ. ಈ ಅಧ್ಯಯನ ಹೇಳುವ ಪ್ರಕಾರ ದೀರ್ಘಕಾಲ ರಾತ್ರಿ ಪಾಳಿ ಮಾಡಿದರೆ ಕ್ಯಾನ್ಸರ್​ ವಕ್ಕರಿಸಬಹುದಂತೆ!

ಪ್ರತಿ ವ್ಯಕ್ತಿ ರಾತ್ರಿ ಹೊತ್ತು ನಿದ್ರಿಸಬೇಕು ಮತ್ತು ಮುಂಜಾನೆ ಏಳಬೇಕು. ಆದರೆ, ರಾತ್ರಿ ಪಾಳಿಯಿಂದ ಇದು ತಲೆಕೆಳಗಾಗುತ್ತದೆ. ನೈಟ್​ ಶಿಫ್ಟ್​ ಮಾಡುವ ವ್ಯಕ್ತಿ ಹಗಲು ನಿದ್ರಿಸಿ ರಾತ್ರಿ ಎಚ್ಚರ ಇರುತ್ತಾನೆ. ಇದು ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತದೆ. ಇನ್ನು, ಈ ಪದ್ಧತಿ ರೂಢಿಸಿಕೊಳ್ಳುವುದರಿಂದ ಡಿಎನ್​ಎ ಕೂಡ ಹಾನಿಗೆ ತುತ್ತಾಗುತ್ತದೆ. ಇದು ಕ್ಯಾನ್ಸರ್​​ಗೆ ಎಡೆಮಾಡಿಕೊಡಬಹುದು ಎನ್ನುತ್ತಿದೆ ಅಧ್ಯಯನ.

ಈ ರೀತಿ ರಾತ್ರಿ ಪಾಳಿ ಮಾಡುವವರನ್ನು ತಜ್ಞರ ತಂಡ ಪರೀಕ್ಷೆಗೆ ಒಳಪಡಿಸಿತ್ತು. ಈ ವೇಳೆ ಅವರಲ್ಲಿ ಕ್ಯಾನ್ಸರ್​ ಕಾಣಿಸಿಕೊಂಡವರ ಪ್ರಮಾಣ ಹೆಚ್ಚಿದೆಯಂತೆ. ನಿದ್ರೆಯ ಅಸಮತೋಲನವೇ ಇದಕ್ಕೆ ನೇರ ಕಾರಣ ಎಂದು ಅಧ್ಯಯನ ತಿಳಿಸಿದೆ. ಇದರ ಜತೆಗೆ ಇನ್ನೂ ಅನೇಕ ಅಸಮತೋಲನಗಳು ನೈಟ್​ಶಿಫ್ಟ್​ನಿಂದ ಉಂಟಾಗಬಹುದು ಎಂದು ಅಧ್ಯಯನ ತಿಳಿಸಿದೆ.

ಹಗಲು ನಿದ್ರೆ ಮಾಡುವುದರಿಂದ ಸೂರ್ಯನ ಕಿರಣಗಳು ದೇಹದ ಮೇಲೆ ಬೀಳುವುದಿಲ್ಲ. ಹೀಗಾದಾಗ, ವಿಟಮಿನ್​ ಕೊರತೆ ಕೂಡ ಉಂಟಾಗಲಿದ್ದು, ಇದರಿಂದ ಚರ್ಮಕ್ಕೆ ಸಂಬಂಧಿಸಿದ ಕಾಯಿಲೆಗಳು ಎದುರಾಗುವ ಸಾಧ್ಯತೆ ಇರುತ್ತದೆ.

ಇದನ್ನೂ ಓದಿ: ವರ್ಕ್​ ಫ್ರಂ ಹೋಮ್​​ ಪರಿಣಾಮ: ಕಚೇರಿ ಕೆಲಸ ಮತ್ತು ವೈಯಕ್ತಿಕ ಜೀವನ ನಿಭಾಯಿಸುವಲ್ಲಿ ಪುರುಷರಿಗಿಂತ ಮಹಿಳೆಯರಿಗೇ ಹೆಚ್ಚು ಒತ್ತಡ

ಬೆಳಗೆದ್ದು ಗ್ರೀನ್​ ಟೀ ಅಥವಾ ಬ್ಲಾಕ್​ ಟೀ ಕುಡಿತೀರಾ? ಹಾಗಿದ್ರೆ ಈ ರೋಗಗಳು ನಿಮ್ಮ ಬಳಿ ಸುಳಿಯಲ್ಲ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!