ಧಾರವಾಡದಲ್ಲಿ ಭಾರಿ ಮಳೆ, ತುಪ್ಪರಿ ಹಳ್ಳದಲ್ಲಿ ಸಿಲುಕಿಕೊಂಡ ಲಾರಿ

ಧಾರವಾಡ: ಜಿಲ್ಲೆಯಾದ್ಯಂತ ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಧಾರವಾಡ-ಸವದತ್ತಿ ಮಾರ್ಗದ ಸೇತುವೆ ಮುಳುಗಡೆಯಾಗಿದೆ. ಇದರಿಂದಾಗಿ ತುಪ್ಪರಿ ಹಳ್ಳದ ನೀರಿನಲ್ಲಿ ಲಾರಿಯೊಂದು ಸಿಲುಕಿಕೊಂಡಿದೆ. ಧಾರವಾಡ ಜಿಲ್ಲೆಯಾದ್ಯಂತ ನಿನ್ನೆ ರಾತ್ರಿ ಭಾರಿ ಮಳೆಯಾಗಿದ್ದು, ಇದರಿಂದಾಗಿ ಈ ಭಾಗದ ನದಿಗಳು ತುಂಬಿ ಹರಿಯುತ್ತವೆ. ಜೊತೆಗೆ ಧಾರವಾಡ-ಸವದತ್ತಿ ಮಾರ್ಗದ ಸೇತುವೆ ಮುಳುಗಡೆಯಾಗಿದ್ದು. ಸೇತುವೆ ಮೇಲೆ ನೀರು ಹರಿಯುತ್ತಿದೆ. ಹೀಗಾಗಿ ಧಾರವಾಡ-ಸವದತ್ತಿ ಮಾರ್ಗದ ಸಂಚಾರವನ್ನು ಬಂದ್ ಮಾಡಲಾಗಿದೆ. ಜೊತೆಗೆ ಹಾರೋಬೆಳವಡಿ ಸೇತುವೆ ಮೇಲೆ ನೀರು ಹರಿಯುತ್ತಿದೆ. ಹೀಗಾಗಿ ತುಪ್ಪರಿ ಹಳ್ಳದಲ್ಲಿ ನೀರಿನ ಹರಿವು […]

ಧಾರವಾಡದಲ್ಲಿ ಭಾರಿ ಮಳೆ, ತುಪ್ಪರಿ ಹಳ್ಳದಲ್ಲಿ ಸಿಲುಕಿಕೊಂಡ ಲಾರಿ
ಸಾಧು ಶ್ರೀನಾಥ್​

Updated on: Sep 03, 2020 | 11:25 AM

ಧಾರವಾಡ: ಜಿಲ್ಲೆಯಾದ್ಯಂತ ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಧಾರವಾಡ-ಸವದತ್ತಿ ಮಾರ್ಗದ ಸೇತುವೆ ಮುಳುಗಡೆಯಾಗಿದೆ. ಇದರಿಂದಾಗಿ ತುಪ್ಪರಿ ಹಳ್ಳದ ನೀರಿನಲ್ಲಿ ಲಾರಿಯೊಂದು ಸಿಲುಕಿಕೊಂಡಿದೆ.

ಧಾರವಾಡ ಜಿಲ್ಲೆಯಾದ್ಯಂತ ನಿನ್ನೆ ರಾತ್ರಿ ಭಾರಿ ಮಳೆಯಾಗಿದ್ದು, ಇದರಿಂದಾಗಿ ಈ ಭಾಗದ ನದಿಗಳು ತುಂಬಿ ಹರಿಯುತ್ತವೆ. ಜೊತೆಗೆ ಧಾರವಾಡ-ಸವದತ್ತಿ ಮಾರ್ಗದ ಸೇತುವೆ ಮುಳುಗಡೆಯಾಗಿದ್ದು. ಸೇತುವೆ ಮೇಲೆ ನೀರು ಹರಿಯುತ್ತಿದೆ. ಹೀಗಾಗಿ ಧಾರವಾಡ-ಸವದತ್ತಿ ಮಾರ್ಗದ ಸಂಚಾರವನ್ನು ಬಂದ್ ಮಾಡಲಾಗಿದೆ.

ಜೊತೆಗೆ ಹಾರೋಬೆಳವಡಿ ಸೇತುವೆ ಮೇಲೆ ನೀರು ಹರಿಯುತ್ತಿದೆ. ಹೀಗಾಗಿ ತುಪ್ಪರಿ ಹಳ್ಳದಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಹಳ್ಳದಲ್ಲಿ ಲಾರಿಯೊಂದು ಸಿಲುಕಿಕೊಂಡಿದೆ. ಲಾರಿ ಚಾಲಕ ಹೇಗೋ ನೀರಿನಿಂದ ಹೊರ ಬಂದಿದ್ದು, ಲಾರಿಯನ್ನು ದಡ ಸೇರಿಸಲು ಹರಸಾಹಸ ಪಡುತ್ತಿದ್ದಾರೆ.

Published On - 11:12 am, Thu, 3 September 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us