Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Rain: ಬೆಂಗಳೂರಿನಲ್ಲಿ ರಾತ್ರಿ ಸುರಿದ ಭಾರಿ ಮಳೆ: ಭಾಗಶಃ ಐಟಿ-ಬಿಟಿ ಕಂಪನಿಗಳಿಗೆ ರಜೆ ಘೋಷಣೆ

ನಗರದಲ್ಲಿ ರಾತ್ರಿ ಸುರಿದ ಭಾರಿ ಮಳೆಯಿಂದ ಸರ್ಜಾಪುರ, ಮಾರತ್ತಹಳ್ಳಿ ಭಾಗದಲ್ಲಿ ರಸ್ತೆಗಳು ಜಲಾವೃತವಾಗಿದ್ದು, ಈ ಹಿನ್ನೆಲೆ ಐಟಿ-ಬಿಟಿ ಕಂಪನಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Bangalore Rain: ಬೆಂಗಳೂರಿನಲ್ಲಿ ರಾತ್ರಿ ಸುರಿದ ಭಾರಿ ಮಳೆ: ಭಾಗಶಃ ಐಟಿ-ಬಿಟಿ ಕಂಪನಿಗಳಿಗೆ ರಜೆ ಘೋಷಣೆ
ಮಳೆ( ಸಂಗ್ರಹ ಚಿತ್ರ)
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Sep 05, 2022 | 10:31 AM

ಬೆಂಗಳೂರು: ನಗರದಲ್ಲಿ ರಾತ್ರಿ ಸುರಿದ ಭಾರಿ ಮಳೆಯಿಂದ ಸರ್ಜಾಪುರ, ಮಾರತ್ತಹಳ್ಳಿ ಭಾಗದಲ್ಲಿ ರಸ್ತೆಗಳು ಜಲಾವೃತವಾಗಿದ್ದು, ಈ ಹಿನ್ನೆಲೆ ಐಟಿ-ಬಿಟಿ ಕಂಪನಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ರಸ್ತೆಗಳು ಜಲಾವೃತ, ಟ್ರಾಫಿಕ್ ಜಾಮ್​ನಿಂದಾಗಿ ಸರ್ಜಾಪುರ, ಮಾರತಹಳ್ಳಿ ಭಾಗದ ಭಾಗಶಃ ಐಟಿ ಬಿಟಿ ಕಂಪನಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಭಾರಿ ಮಳೆಗೆ ಬೆಂಗಳೂರು-ತುಮಕೂರು ಸರ್ವಿಸ್ ರಸ್ತೆ ಜಲಾವೃತವಾಗಿದ್ದು, ಸರ್ವಿಸ್​ ರಸ್ತೆ ಜಲಾವೃತಗೊಂಡ ಪರಿಣಾಮ ಟ್ರಾಫಿಕ್​ಜಾಮ್ ಉಂಟಾಗಿದ್ದು,​​​​​​ ತುಮಕೂರು-ಬೆಂಗಳೂರು ರಸ್ತೆಯಲ್ಲಿ ವಾಹನ ಸವಾರರು ಪರದಾಡುವಂತ್ತಾಗಿದೆ. ನೆಲಮಂಗಲದ ಶಾಲೆಗೂ  ಮಳೆ ನೀರು ನುಗ್ಗಿದ್ದು, ಶಾಲೆಯ ಕಾಂಪೌಂಡ್​ಗೆ ಹಾನಿಯಾಗಿದ್ದು, ಕೊಠಡಿಗಳಿಗೂ ನೀರು ನುಗ್ಗಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು, ವಾಜರಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಗೆ ನೀರು ನುಗ್ಗಿದ್ದು, ಪ್ರಾಥಮಿಕ ಶಾಲಾ ಕೊಠಡಿಯಲ್ಲಿದ್ದ ಕಲಿಕಾ ಸಾಮಾಗ್ರಿ ಹಾನಿಯಾಗಿವೆ. ಸರ್ಕಾರಿ ಶಾಲೆಯಿಂದ ನೀರು ಹೊರಹಾಕಲು ಹರಸಾಹಸ ಪಡುವಂತ್ತಾಗಿದೆ.

ನೆರೆ ಯಾವ ದೇಶಕ್ಕೂ ಯಾವ ರಾಜಧಾನಿಗೂ ತಪ್ಪಿಲ್ಲ: ಅಶ್ವಥ್ ನಾರಯಣ್ 

ಮಳೆ ಹಾನಿಯಿಂದಾಗಿ ಐಟಿಬಿಟಿಯವರು ಸಿಎಂಗೆ ಪತ್ರ ಬರೆದ ವಿಚಾರವಾಗಿ ನಗದರಲ್ಲಿ ಮಾಧ್ಯಮದವರೊಂದಿಗೆ ಡಾ.ಸಿ ಎನ್ ಅಶ್ವಥ್ ನಾರಯಣ್ ಮಾತನಾಡಿದ್ದು, ನೆರೆ ಯಾವ ದೇಶಕ್ಕೂ ಯಾವ ರಾಜಧಾನಿಗೂ ತಪ್ಪಿಲ್ಲ. ಎಲ್ಲಾ ದೊಡ್ಡ ದೊಡ್ಡ ನಗರಗಳಲ್ಲಿ ನೆರೆಯ ಸಮಸ್ಯೆಯಾಗಿದೆ. ಈ ದಿಕ್ಕಿನಲ್ಲಿ 50 ವರ್ಷದಲ್ಲಿ ಇಂಥಹ ಮಳೆ ಕಂಡಿಲ್ಲ. ಈ ಸಲ ಬೇಸಿಗೆ ಕೂಡ ಕಾಣಲಿಲ್ಲ. ನೀರು ಹಿಂಗಲು ಅವಕಾಶವಾಗ್ತಿಲ್ಲ. ನಮ್ಮ ಮುಖ್ಯಮಂತ್ರಿಗಳು ನೀರಾವರಿ ಸಚಿವರಾಗಿ ಕೆಲಸ ಮಾಡಿದ್ರು. ಕೆರೆ ನೀರನ್ನ ಮಳೆ ನೀರನ್ನು ಒಟ್ಟಿಗೆ ಸೇರ್ತಿದೆ. ಸ್ಲ್ಯೀವ್ ಗ್ಯಾಟ್ ಹಾಕಿ ವಾಟರ್ ಲೆವಲ್ ಮೈಂಟೇನ್ ಮಾಡಲಾಗಿತ್ತು. ಏನ್ ಕ್ರಮ ವಹಿಸಬೇಕಾಗಿದೆಯೋ ಅದನ್ನ ಮಾಡುತ್ರಿದ್ದೇವೆ. SWM ಅದನ್ನೆಲ್ಲ ಸರಿಯಾಗಿ ಕೆಲಸ ಆಗುವಂತೆ ಮಾಡುತ್ತಿದ್ದೇವೆ. ಒತ್ತುವರಿ ತೆರುವುಗೊಳಿಸಲಾಗುತ್ತಿದೆ ಎಂದು ಹೇಳಿದರು.

ಇನ್ಮುಂದೆ ಎಂಥಹ ಮಳೆ ಬಂದ್ರು ಎದುರಿಸಬೇಕಾಗುವ ನಿಟ್ಟಿನಲ್ಲಿ ನಮ್ಮ ಸರ್ಕಾರ ತಯಾರಿ ಮಾಡಲಾಗುತ್ತೆ. ತಿಳುವಳಿಕೆ ಮನವರಿಕೆ ಇರುವವರು ಬಣ್ಣ ಕಟ್ಟೋಕೆ ಹೋಗಬಾರದು. ಜನಪರವಾದ ಸರ್ಕಾರ ನಮ್ಮದು. ಈ ಸಮಸ್ಯೆಯನ್ನ ಬಗೆಹರಿಸಲು ತಕ್ಷಣವೂ ಮಾಡ್ತಿವಿ. ಶಾಶ್ವತವಾಗಿಯೂ ಮಾಡುತ್ತೇವೆ. ಓಆರ್​ಆರ್ ರಸ್ತೆಯಲ್ಲಿ ಯಾರು ಕೆಲಸ ಮಾಡಿದ್ದು. ಐದು ವರ್ಷ ಕಸ ನಿರ್ವಹಣೆ ಮಾಡದವರು ಇವತ್ತು ಮಾತನಾಡುತ್ತಿದ್ದಾರೆ. ಕಾಂಗ್ರೆಸ್​ನವರು ಮೂಲ ಇದಕ್ಕೆಲ್ಲ ಕಾರಣಕರ್ತರು. ಆರೋಪ ಮಾಡ್ತಿರೋದು ಸರಿಯಿಲ್ಲ. ಸಿದ್ದರಾಮಯ್ಯನವರಿಗೆ ದಿಟ್ಟವಾದ ಕ್ರಮ ತೆಗೆದುಕೊಳ್ಳೋಕೆ ಆಗ್ತಿರಲಿಲ್ಲ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:18 am, Mon, 5 September 22

ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ