AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡೂರಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ! ಧರೆಗುರುಳಿದ ಮರಗಳು, ಮುರಿದ ಬಿತ್ತು ಟವರ್..

ಚಿಕ್ಕಮಗಳೂರು: ಜಿಲ್ಲೆಯ ಬಯಲುಸೀಮೆ ಭಾಗ ಕಡೂರಿನಲ್ಲಿ ಹಲವು ದಿನಗಳಿಂದ ಕೈಕೊಟ್ಟಿದ್ದ ಮಳೆರಾಯ ನಿನ್ನೆ ಸಂಜೆ ಧಾರಾಕಾರವಾಗಿ ಸುರಿದು ಅವಾಂತರ ಸೃಷ್ಟಿಸಿದ್ದಾನೆ. ಸಂಜೆ ಸಾಧಾರಣವಾಗಿ ಆರಂಭವಾದ ಮಳೆ ರಾತ್ರಿ ವೇಳೆಗೆ ಭಾರೀ ಅನಾಹುತ ಮಾಡಿದೆ. ಮಳೆ ರಭಸಕ್ಕೆ ತಕ್ಕಂತೆ ಗಾಳಿಯ ವೇಗವೂ ಹೆಚ್ಚಿದ್ದರಿಂದ ಪಟ್ಟಣದ ಹಲವೆಡೆ ಮರಗಿಡಗಳು ಧರೆಗುರುಳಿವೆ. ತಗ್ಗು ಪ್ರದೇಶಗಳು ಜಲಾವೃತವಾಗಿ ಜನಜೀವನ ಕೂಡ ಅಸ್ತವ್ಯಸ್ತಗೊಂಡಿದೆ. ಗಾಳಿಯ ವೇಗವೂ ಹೆಚ್ಚಿದ್ದು ಮನೆ ಮೇಲಿನ ಶೀಟ್ಗಳು ಹಾರಿ ಹೋಗಿವೆ. ಬಿರುಗಾಳಿಯ ಆರ್ಭಟಕ್ಕೆ ಬೃಹತ್ ಮರಗಳು ಧರೆಗುರುಳಿವೆ. ರೈಲ್ವೆ ಅಂಡರ್ […]

ಕಡೂರಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ! ಧರೆಗುರುಳಿದ ಮರಗಳು, ಮುರಿದ ಬಿತ್ತು ಟವರ್..
ಸಾಧು ಶ್ರೀನಾಥ್​
|

Updated on: Jul 24, 2020 | 11:16 AM

Share

ಚಿಕ್ಕಮಗಳೂರು: ಜಿಲ್ಲೆಯ ಬಯಲುಸೀಮೆ ಭಾಗ ಕಡೂರಿನಲ್ಲಿ ಹಲವು ದಿನಗಳಿಂದ ಕೈಕೊಟ್ಟಿದ್ದ ಮಳೆರಾಯ ನಿನ್ನೆ ಸಂಜೆ ಧಾರಾಕಾರವಾಗಿ ಸುರಿದು ಅವಾಂತರ ಸೃಷ್ಟಿಸಿದ್ದಾನೆ. ಸಂಜೆ ಸಾಧಾರಣವಾಗಿ ಆರಂಭವಾದ ಮಳೆ ರಾತ್ರಿ ವೇಳೆಗೆ ಭಾರೀ ಅನಾಹುತ ಮಾಡಿದೆ.

ಮಳೆ ರಭಸಕ್ಕೆ ತಕ್ಕಂತೆ ಗಾಳಿಯ ವೇಗವೂ ಹೆಚ್ಚಿದ್ದರಿಂದ ಪಟ್ಟಣದ ಹಲವೆಡೆ ಮರಗಿಡಗಳು ಧರೆಗುರುಳಿವೆ. ತಗ್ಗು ಪ್ರದೇಶಗಳು ಜಲಾವೃತವಾಗಿ ಜನಜೀವನ ಕೂಡ ಅಸ್ತವ್ಯಸ್ತಗೊಂಡಿದೆ. ಗಾಳಿಯ ವೇಗವೂ ಹೆಚ್ಚಿದ್ದು ಮನೆ ಮೇಲಿನ ಶೀಟ್ಗಳು ಹಾರಿ ಹೋಗಿವೆ. ಬಿರುಗಾಳಿಯ ಆರ್ಭಟಕ್ಕೆ ಬೃಹತ್ ಮರಗಳು ಧರೆಗುರುಳಿವೆ. ರೈಲ್ವೆ ಅಂಡರ್ ಬ್ರಿಡ್ಜ್ ಬಳಿ 5 ಅಡಿ ಎತ್ತರಕ್ಕೆ ನೀರು ನಿಂತಿದ್ದು ವಾಹನಗಳೇ ಸಂಚರಿಸಲಾಗದ ಸ್ಥಿತಿ ನಿರ್ಮಾಣವಾಗಿತ್ತು. ಕೆಲ ವಾಹನಗಳು ನೀರಿನ ಮಧ್ಯೆಯೂ ಚಲಾಯಿಸಿ ಇಂಜಿನ್‍ಗೆ ನೀರು ನುಗ್ಗಿದ ಪರಿಣಾಮ ಕೆಟ್ಟು ನಿಂತವು.

ಸರ್ಕಾರಿ ಬಸ್‍ ನಿಲ್ದಾಣದ ಎದುರಿನ ನಂಜುಡೇಶ್ವರ ಲಾಡ್ಜ್ ಕಟ್ಟಡದ ಮೇಲಿದ್ದ ಮೊಬೈಲ್ ಟವರ್ ಗಾಳಿಯ ರಭಸಕ್ಕೆ ಮಗುಚಿ ಬಿದ್ದಿದೆ. ಕಟ್ಟಡದ ಮೇಲೆ ಟವರ್‍ಗೆ ಹಾಕಿದ್ದ ಅಡಿಪಾಯ ಗಟ್ಟಿಯಾಗಿದ್ದರಿಂದ ಅದೃಷ್ಟವಶಾತ್ ಟವರ್ ಕಟ್ಟಡದ ಒಂದು ಭಾಗಕ್ಕೆ ವಾಲಿಕೊಂಡಿದೆ. ಟವರ್ ಗಾಳಿಗೆ ಹಾರಿ ನಿಲ್ದಾಣದ ಮುಂದಿನ ರಸ್ತೆಗೆ ಬಿದ್ದಿದ್ದರೆ ಭಾರಿ ಅನಾಹುತವಾಗುತ್ತಿತ್ತು. ಅದೃಷ್ಟವಶಾತ್ ಏನೂ ಆಗಿಲ್ಲ.

ಪಟ್ಟಣದಾದ್ಯಂತ ಅಲ್ಲಲ್ಲೇ ಮರಗಳು ಧರೆಗುರುಳಿದ್ರೆ, ಅಂಗಡಿ ಅಕ್ಕಪಕ್ಕ ಹಾಕಿದ್ದ ಶೆಡ್ ಗಳು ನೆಲಕ್ಕುರುಳಿವೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡ ಭಾಗದಲ್ಲಿ ಕಳೆದ ಐದಾರು ದಿನಗಳಿಂದ ಬಿಸಿಲಿನ ಬೇಗೆ ತಡೆಯಲಾರದೇ ಜನ ಹೈರಾಣಾಗಿ ಹೋಗಿದ್ದಾರೆ. ಈ ಮಧ್ಯೆ ಜಿಲ್ಲೆಯ ಬಯಲುಸೀಮೆ ಭಾಗವಾದ ಕಡೂರಿನಲ್ಲಿ ರಣಭೀಕರ ಮಳೆ ಕಂಡು ಪಟ್ಟಣದ ಜನತೆ ಅಕ್ಷರಶಃ ಬೆಚ್ಚಿಬಿದ್ದಿದ್ದಾರೆ. ಬಿಸಿಲಿನಿಂದ ಕಂಗೆಟ್ಟಿದ್ದ ಮಂದಿಗೆ ದಿಢೀರನೆ ಆಗಮಿಸಿದ ಮಳೆಯನ್ನು ಕಂಡು ನಿಬ್ಬೆರಗಾಗಿ ಹೋಗಿದ್ದಾರೆ.‌

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು