AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡೂರಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ! ಧರೆಗುರುಳಿದ ಮರಗಳು, ಮುರಿದ ಬಿತ್ತು ಟವರ್..

ಚಿಕ್ಕಮಗಳೂರು: ಜಿಲ್ಲೆಯ ಬಯಲುಸೀಮೆ ಭಾಗ ಕಡೂರಿನಲ್ಲಿ ಹಲವು ದಿನಗಳಿಂದ ಕೈಕೊಟ್ಟಿದ್ದ ಮಳೆರಾಯ ನಿನ್ನೆ ಸಂಜೆ ಧಾರಾಕಾರವಾಗಿ ಸುರಿದು ಅವಾಂತರ ಸೃಷ್ಟಿಸಿದ್ದಾನೆ. ಸಂಜೆ ಸಾಧಾರಣವಾಗಿ ಆರಂಭವಾದ ಮಳೆ ರಾತ್ರಿ ವೇಳೆಗೆ ಭಾರೀ ಅನಾಹುತ ಮಾಡಿದೆ. ಮಳೆ ರಭಸಕ್ಕೆ ತಕ್ಕಂತೆ ಗಾಳಿಯ ವೇಗವೂ ಹೆಚ್ಚಿದ್ದರಿಂದ ಪಟ್ಟಣದ ಹಲವೆಡೆ ಮರಗಿಡಗಳು ಧರೆಗುರುಳಿವೆ. ತಗ್ಗು ಪ್ರದೇಶಗಳು ಜಲಾವೃತವಾಗಿ ಜನಜೀವನ ಕೂಡ ಅಸ್ತವ್ಯಸ್ತಗೊಂಡಿದೆ. ಗಾಳಿಯ ವೇಗವೂ ಹೆಚ್ಚಿದ್ದು ಮನೆ ಮೇಲಿನ ಶೀಟ್ಗಳು ಹಾರಿ ಹೋಗಿವೆ. ಬಿರುಗಾಳಿಯ ಆರ್ಭಟಕ್ಕೆ ಬೃಹತ್ ಮರಗಳು ಧರೆಗುರುಳಿವೆ. ರೈಲ್ವೆ ಅಂಡರ್ […]

ಕಡೂರಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ! ಧರೆಗುರುಳಿದ ಮರಗಳು, ಮುರಿದ ಬಿತ್ತು ಟವರ್..
ಸಾಧು ಶ್ರೀನಾಥ್​
|

Updated on: Jul 24, 2020 | 11:16 AM

Share

ಚಿಕ್ಕಮಗಳೂರು: ಜಿಲ್ಲೆಯ ಬಯಲುಸೀಮೆ ಭಾಗ ಕಡೂರಿನಲ್ಲಿ ಹಲವು ದಿನಗಳಿಂದ ಕೈಕೊಟ್ಟಿದ್ದ ಮಳೆರಾಯ ನಿನ್ನೆ ಸಂಜೆ ಧಾರಾಕಾರವಾಗಿ ಸುರಿದು ಅವಾಂತರ ಸೃಷ್ಟಿಸಿದ್ದಾನೆ. ಸಂಜೆ ಸಾಧಾರಣವಾಗಿ ಆರಂಭವಾದ ಮಳೆ ರಾತ್ರಿ ವೇಳೆಗೆ ಭಾರೀ ಅನಾಹುತ ಮಾಡಿದೆ.

ಮಳೆ ರಭಸಕ್ಕೆ ತಕ್ಕಂತೆ ಗಾಳಿಯ ವೇಗವೂ ಹೆಚ್ಚಿದ್ದರಿಂದ ಪಟ್ಟಣದ ಹಲವೆಡೆ ಮರಗಿಡಗಳು ಧರೆಗುರುಳಿವೆ. ತಗ್ಗು ಪ್ರದೇಶಗಳು ಜಲಾವೃತವಾಗಿ ಜನಜೀವನ ಕೂಡ ಅಸ್ತವ್ಯಸ್ತಗೊಂಡಿದೆ. ಗಾಳಿಯ ವೇಗವೂ ಹೆಚ್ಚಿದ್ದು ಮನೆ ಮೇಲಿನ ಶೀಟ್ಗಳು ಹಾರಿ ಹೋಗಿವೆ. ಬಿರುಗಾಳಿಯ ಆರ್ಭಟಕ್ಕೆ ಬೃಹತ್ ಮರಗಳು ಧರೆಗುರುಳಿವೆ. ರೈಲ್ವೆ ಅಂಡರ್ ಬ್ರಿಡ್ಜ್ ಬಳಿ 5 ಅಡಿ ಎತ್ತರಕ್ಕೆ ನೀರು ನಿಂತಿದ್ದು ವಾಹನಗಳೇ ಸಂಚರಿಸಲಾಗದ ಸ್ಥಿತಿ ನಿರ್ಮಾಣವಾಗಿತ್ತು. ಕೆಲ ವಾಹನಗಳು ನೀರಿನ ಮಧ್ಯೆಯೂ ಚಲಾಯಿಸಿ ಇಂಜಿನ್‍ಗೆ ನೀರು ನುಗ್ಗಿದ ಪರಿಣಾಮ ಕೆಟ್ಟು ನಿಂತವು.

ಸರ್ಕಾರಿ ಬಸ್‍ ನಿಲ್ದಾಣದ ಎದುರಿನ ನಂಜುಡೇಶ್ವರ ಲಾಡ್ಜ್ ಕಟ್ಟಡದ ಮೇಲಿದ್ದ ಮೊಬೈಲ್ ಟವರ್ ಗಾಳಿಯ ರಭಸಕ್ಕೆ ಮಗುಚಿ ಬಿದ್ದಿದೆ. ಕಟ್ಟಡದ ಮೇಲೆ ಟವರ್‍ಗೆ ಹಾಕಿದ್ದ ಅಡಿಪಾಯ ಗಟ್ಟಿಯಾಗಿದ್ದರಿಂದ ಅದೃಷ್ಟವಶಾತ್ ಟವರ್ ಕಟ್ಟಡದ ಒಂದು ಭಾಗಕ್ಕೆ ವಾಲಿಕೊಂಡಿದೆ. ಟವರ್ ಗಾಳಿಗೆ ಹಾರಿ ನಿಲ್ದಾಣದ ಮುಂದಿನ ರಸ್ತೆಗೆ ಬಿದ್ದಿದ್ದರೆ ಭಾರಿ ಅನಾಹುತವಾಗುತ್ತಿತ್ತು. ಅದೃಷ್ಟವಶಾತ್ ಏನೂ ಆಗಿಲ್ಲ.

ಪಟ್ಟಣದಾದ್ಯಂತ ಅಲ್ಲಲ್ಲೇ ಮರಗಳು ಧರೆಗುರುಳಿದ್ರೆ, ಅಂಗಡಿ ಅಕ್ಕಪಕ್ಕ ಹಾಕಿದ್ದ ಶೆಡ್ ಗಳು ನೆಲಕ್ಕುರುಳಿವೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡ ಭಾಗದಲ್ಲಿ ಕಳೆದ ಐದಾರು ದಿನಗಳಿಂದ ಬಿಸಿಲಿನ ಬೇಗೆ ತಡೆಯಲಾರದೇ ಜನ ಹೈರಾಣಾಗಿ ಹೋಗಿದ್ದಾರೆ. ಈ ಮಧ್ಯೆ ಜಿಲ್ಲೆಯ ಬಯಲುಸೀಮೆ ಭಾಗವಾದ ಕಡೂರಿನಲ್ಲಿ ರಣಭೀಕರ ಮಳೆ ಕಂಡು ಪಟ್ಟಣದ ಜನತೆ ಅಕ್ಷರಶಃ ಬೆಚ್ಚಿಬಿದ್ದಿದ್ದಾರೆ. ಬಿಸಿಲಿನಿಂದ ಕಂಗೆಟ್ಟಿದ್ದ ಮಂದಿಗೆ ದಿಢೀರನೆ ಆಗಮಿಸಿದ ಮಳೆಯನ್ನು ಕಂಡು ನಿಬ್ಬೆರಗಾಗಿ ಹೋಗಿದ್ದಾರೆ.‌

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ