ಧಾರಾಕಾರ ಮಳೆಗೆ ಎಲ್ಲವೂ ಹಾನಿ.. ಜನಜೀವನ ಅಸ್ತವ್ಯಸ್ತ

ವಿಜಯಪುರ: ಧಾರಾಕಾರ ಮಳೆಗೆ ಡೋಣಿ ನದಿ ತುಂಬಿ ಹರಿಯುತ್ತಿದೆ. ನದಿತೀರದ ಉಕುಮನಾಳ, ಸಾರವಾಡದಲ್ಲಿ ಪ್ರವಾಹ ಭೀತಿ ಶುರುವಾಗಿದೆ. ತಾಳಿಕೋಟೆ ಸೇತುವೆ ಜಲಾವೃತವಾದ ಹಿನ್ನೆಲೆಯಲ್ಲಿ ಹಡಗಿನಾಳ, ಕಲ್ಲದೇವನಹಳ್ಳಿ, ಶಿವಪುರ, ಹರನಾಳ, ಮೂಕಿನಾಳ ಗ್ರಾಮಗಳ ಸಂಪರ್ಕ ಕಟ್ ಆಗಿದೆ. ತಾಳಿಕೋಟೆ ಬಳಿಯ ಹನುಮಾನ್ ಮಂದಿರ ನೀರಿನಲ್ಲಿ ಮುಳುಗಿದೆ. ಕಟಾವಿಗೆ ಬಂದಿದ್ದ ಕಬ್ಬು ನಾಶ: ಇನ್ನು ನದಿಯ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಜಲಾವೃತಗೊಂಡಿದೆ. ಗದ್ದೆಗಳಲ್ಲಿ ನೀರು ನಿಂತಿರುವುದನ್ನು ನೋಡಿ ರೈತರು ಕಂಗಾಲಾಗಿದ್ದಾರೆ. ಮೂರು‌ ದಿನಗಳಿಂದ ‌ಸುರಿಯುತ್ತಿರುವ ಮಳೆಗೆ ಕಟಾವಿಗೆ […]

ಧಾರಾಕಾರ ಮಳೆಗೆ ಎಲ್ಲವೂ ಹಾನಿ.. ಜನಜೀವನ ಅಸ್ತವ್ಯಸ್ತ
ಆಯೇಷಾ ಬಾನು Edited By: ಸಾಧು ಶ್ರೀನಾಥ್​

Updated on: Oct 14, 2020 | 12:56 PM

ವಿಜಯಪುರ: ಧಾರಾಕಾರ ಮಳೆಗೆ ಡೋಣಿ ನದಿ ತುಂಬಿ ಹರಿಯುತ್ತಿದೆ. ನದಿತೀರದ ಉಕುಮನಾಳ, ಸಾರವಾಡದಲ್ಲಿ ಪ್ರವಾಹ ಭೀತಿ ಶುರುವಾಗಿದೆ. ತಾಳಿಕೋಟೆ ಸೇತುವೆ ಜಲಾವೃತವಾದ ಹಿನ್ನೆಲೆಯಲ್ಲಿ ಹಡಗಿನಾಳ, ಕಲ್ಲದೇವನಹಳ್ಳಿ, ಶಿವಪುರ, ಹರನಾಳ, ಮೂಕಿನಾಳ ಗ್ರಾಮಗಳ ಸಂಪರ್ಕ ಕಟ್ ಆಗಿದೆ. ತಾಳಿಕೋಟೆ ಬಳಿಯ ಹನುಮಾನ್ ಮಂದಿರ ನೀರಿನಲ್ಲಿ ಮುಳುಗಿದೆ.

ಕಟಾವಿಗೆ ಬಂದಿದ್ದ ಕಬ್ಬು ನಾಶ:
ಇನ್ನು ನದಿಯ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಜಲಾವೃತಗೊಂಡಿದೆ. ಗದ್ದೆಗಳಲ್ಲಿ ನೀರು ನಿಂತಿರುವುದನ್ನು ನೋಡಿ ರೈತರು ಕಂಗಾಲಾಗಿದ್ದಾರೆ. ಮೂರು‌ ದಿನಗಳಿಂದ ‌ಸುರಿಯುತ್ತಿರುವ ಮಳೆಗೆ ಕಟಾವಿಗೆ ಬಂದಿದ್ದ ಕಬ್ಬಿನ ಬೆಳೆ ನೆಲ ಕಚ್ಚಿದೆ. ಸಾವಿರಾರು ರೂಪಾಯಿ ಖರ್ಚು ಮಾಡಿದ ಕಬ್ಬು ಹಾಳಾಗಿದೆ.

ಮೋರಟಗಿ ಗ್ರಾಮ, ನಿಡಗುಂದಿ ಪಟ್ಟಣದ ಹಲವು ಬಡಾವಣೆಗಳಲ್ಲಿ ನೀರು ನುಗ್ಗಿದ ಕಾರಣ ಮನೆಯಲ್ಲಿನ ದವಸಧಾನ್ಯ, ವಸ್ತುಗಳು ಹಾನಿಯಾಗಿವೆ. ಅಪಾರ ಪ್ರಮಾಣದ ವಸ್ತುಗಳು ನೀರುಪಾಲಾಗಿವೆ. ಜನ ಜೀವನ ಅಸ್ತವ್ಯಸ್ತವಾಗಿದೆ. ಇಷ್ಟೆಲ್ಲಾ ಆದ್ರೂ ಅಧಿಕಾರಿಗಳ್ಯಾರು ಸ್ಥಳಕ್ಕೆ ಬಂದಿಲ್ಲ, ನಮ್ಮ ಬಗ್ಗೆ ವಿಚಾರಿಸಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us