AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ, ವಾಹನ ಸವಾರರ ಪರದಾಟ

ಬೆಂಗಳೂರು: ರಾಜಧಾನಿಯಲ್ಲಿಂದು ವರುಣನ ಅಬ್ಬರ ಜೋರಾಗಿದೆ. ನಗರದ ಹಲವೆಡೆ ಮಳೆ ಸುರಿಯುತ್ತಿದೆ. ಆಫೀಸ್​ಗೆ, ಕಚೇರಿಗಳಿಗೆ ಹೋಗುತ್ತಿರುವವರಿಗೆ ಮಳೆರಾಯ ತೊಂದರೆಯನುಂಟು ಮಾಡಿದ್ದಾನೆ. ನಗರಾದ್ಯಂತ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಕೆ.ಆರ್. ಮಾರುಕಟ್ಟೆ, ಶಾಂತಿನಗರ, ಕೋರಮಂಗಲ, ಮೆಜೆಸ್ಟಿಕ್, ಆರ್.ಆರ್.ನಗರ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ಮಲ್ಲತ್ತಹಳ್ಳಿಯಲ್ಲಿ ಕೆಲವು ಮನೆಗಳಿಗೆ ನೀರು ನುಗ್ಗಿದೆ. ಆರ್.ಆರ್.ನಗರ ಆರ್ಚ್ ಬಳಿಯ ರಸ್ತೆ ಜಲಾವೃತ: ಬೆಂಗಳೂರಿನಲ್ಲಿ ರಾತ್ರಿ ಸುರಿದ ಮಳೆಗೆ ಆರ್.ಆರ್.ನಗರ ಆರ್ಚ್ ಬಳಿಯ ರಸ್ತೆ ಜಲಾವೃತಗೊಂಡಿದೆ. ರಸ್ತೆ ಮೇಲೆ ನಿಂತಿರುವ ನೀರು ಹೊರಹಾಕಲು ಟ್ರಾಫಿಕ್ ಪೊಲೀಸರು […]

ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ, ವಾಹನ ಸವಾರರ ಪರದಾಟ
ಆಯೇಷಾ ಬಾನು
|

Updated on: Oct 19, 2020 | 9:54 AM

Share

ಬೆಂಗಳೂರು: ರಾಜಧಾನಿಯಲ್ಲಿಂದು ವರುಣನ ಅಬ್ಬರ ಜೋರಾಗಿದೆ. ನಗರದ ಹಲವೆಡೆ ಮಳೆ ಸುರಿಯುತ್ತಿದೆ. ಆಫೀಸ್​ಗೆ, ಕಚೇರಿಗಳಿಗೆ ಹೋಗುತ್ತಿರುವವರಿಗೆ ಮಳೆರಾಯ ತೊಂದರೆಯನುಂಟು ಮಾಡಿದ್ದಾನೆ. ನಗರಾದ್ಯಂತ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಕೆ.ಆರ್. ಮಾರುಕಟ್ಟೆ, ಶಾಂತಿನಗರ, ಕೋರಮಂಗಲ, ಮೆಜೆಸ್ಟಿಕ್, ಆರ್.ಆರ್.ನಗರ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ಮಲ್ಲತ್ತಹಳ್ಳಿಯಲ್ಲಿ ಕೆಲವು ಮನೆಗಳಿಗೆ ನೀರು ನುಗ್ಗಿದೆ.

ಆರ್.ಆರ್.ನಗರ ಆರ್ಚ್ ಬಳಿಯ ರಸ್ತೆ ಜಲಾವೃತ: ಬೆಂಗಳೂರಿನಲ್ಲಿ ರಾತ್ರಿ ಸುರಿದ ಮಳೆಗೆ ಆರ್.ಆರ್.ನಗರ ಆರ್ಚ್ ಬಳಿಯ ರಸ್ತೆ ಜಲಾವೃತಗೊಂಡಿದೆ. ರಸ್ತೆ ಮೇಲೆ ನಿಂತಿರುವ ನೀರು ಹೊರಹಾಕಲು ಟ್ರಾಫಿಕ್ ಪೊಲೀಸರು ಹರಸಾಹಸ ನಡೆಸಿದ್ದಾರೆ. ಹಾಗೂ ಮೋರಿ ಸ್ವಚ್ಛಗೊಳಿಸಲಾಗುತ್ತಿದೆ. ಜೊತೆಗೆ ಮೈಸೂರು ರಸ್ತೆ ಫ್ಲೈ ಓವರ್ ಮೇಲೂ ಸಹ ಇಂತಹದ್ದೇ ದೃಶ್ಯ ಕಂಡು ಬಂದಿದೆ. ರಸ್ತೆ ಮೇಲೆ ನೀರು ನಿಂತ ಕಾರಣ ವಾಹನ ಸವಾರರ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಕೋರಮಂಗಲದಲ್ಲಿ ತುಂತುರು ಮಳೆ: ಕೋರಮಂಗಲದಲ್ಲಿ ಮಳೆಯಿಂದಾಗಿ ಬೀದಿ ಬದಿ ವ್ಯಾಪಾರಿಗಳು, ವಾಹನ ಸವಾರರು ಪರದಾಡುತ್ತಿದ್ದಾರೆ. ಮಳೆ‌ಯಿಂದಾಗಿ ಕಚೇರಿಗಳಿಗೆ ತೆರಳ್ತಿರೊ ವಾಹನ ಸವಾರರು ಮರದ ಕೆಳಗೆ ಆಶ್ರಯ ಪಡೆದು ನಿಂತಿರುವ ದೃಶ್ಯ ಕಾಣಸಿಕ್ಕಿದೆ.

ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!