AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರಂಟೈನ್‌ ಆಗಬೇಕಿದ್ದ ಪೊಲೀಸ್‌ ಸಿಬ್ಬಂದಿಗೆ SSLC ಪರೀಕ್ಷೆ ಡ್ಯೂಟಿ, ಜನರಲ್ಲಿ ಆತಂಕ

ಮಂಗಳೂರು: ಕೊರೊನಾ ಸೋಂಕಿತರ ಸಂಪರ್ಕದಲ್ಲಿದ್ದ ಸಿಬ್ಬಂದಿಯನ್ನ ಕ್ವಾರಂಟೈನ್‌ ಮಾಡೋದು ಬಿಟ್ಟು SSLC ಪರೀಕ್ಷೆ ಕರ್ತವ್ಯಕ್ಕೆ ನಿಯೋಜಿಸಿದ ಆಘಾತಕಾರಿ ಘಟನೆ ಮಂಗಳೂರಿನಲ್ಲಿ ನಡೆದಿದೆ. ಇದು ಮಂಗಳೂರಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಮತ್ತು ಅವರ ಪೋಷಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಹೌದು, ಗುರುವಾರ ಆರಂಭವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಉಳ್ಳಾಲ ಪೊಲೀಸ್‌ ಠಾಣೆಯ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಉಳ್ಳಾಲ ಪೊಲೀಸ್‌ ಠಾಣೆಯ ಪಿಎಸ್‌ಐಗೆ ಜೂನ್‌ 24ರಂದು ಕೊರೊನಾ ಸೋಂಕಿರೋದು ಪತ್ತೆಯಾಗಿತ್ತು. ಆಗ ಸಂಪರ್ಕದಲ್ಲಿದ್ದ ಎಎಸ್‌ಐ ಸೇರಿದಂತೆ ಅವರೊಂದಿಗಿದ್ದ ಪೊಲೀಸ್‌ ಸಿಬ್ಬಂದಿಯನ್ನ ಕ್ವಾರಂಟೈನ್‌ […]

ಕ್ವಾರಂಟೈನ್‌ ಆಗಬೇಕಿದ್ದ ಪೊಲೀಸ್‌ ಸಿಬ್ಬಂದಿಗೆ SSLC ಪರೀಕ್ಷೆ ಡ್ಯೂಟಿ, ಜನರಲ್ಲಿ ಆತಂಕ
ಆಯೇಷಾ ಬಾನು
| Edited By: |

Updated on: Jun 26, 2020 | 12:59 PM

Share

ಮಂಗಳೂರು: ಕೊರೊನಾ ಸೋಂಕಿತರ ಸಂಪರ್ಕದಲ್ಲಿದ್ದ ಸಿಬ್ಬಂದಿಯನ್ನ ಕ್ವಾರಂಟೈನ್‌ ಮಾಡೋದು ಬಿಟ್ಟು SSLC ಪರೀಕ್ಷೆ ಕರ್ತವ್ಯಕ್ಕೆ ನಿಯೋಜಿಸಿದ ಆಘಾತಕಾರಿ ಘಟನೆ ಮಂಗಳೂರಿನಲ್ಲಿ ನಡೆದಿದೆ. ಇದು ಮಂಗಳೂರಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಮತ್ತು ಅವರ ಪೋಷಕರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಹೌದು, ಗುರುವಾರ ಆರಂಭವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಉಳ್ಳಾಲ ಪೊಲೀಸ್‌ ಠಾಣೆಯ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಉಳ್ಳಾಲ ಪೊಲೀಸ್‌ ಠಾಣೆಯ ಪಿಎಸ್‌ಐಗೆ ಜೂನ್‌ 24ರಂದು ಕೊರೊನಾ ಸೋಂಕಿರೋದು ಪತ್ತೆಯಾಗಿತ್ತು. ಆಗ ಸಂಪರ್ಕದಲ್ಲಿದ್ದ ಎಎಸ್‌ಐ ಸೇರಿದಂತೆ ಅವರೊಂದಿಗಿದ್ದ ಪೊಲೀಸ್‌ ಸಿಬ್ಬಂದಿಯನ್ನ ಕ್ವಾರಂಟೈನ್‌ ಮಾಡಬೇಕಾಗಿತ್ತು. ಆದ್ರೆ ಅದರ ಬದಲು ಅವರನ್ನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಡ್ಯೂಟಿಗೆ ನಿಯೋಜಿಸಿದ್ದಾರೆ.

ಆಘಾತಕಾರಿಯಂದ್ರೆ, ಅವರನ್ನ ತಲಪಾಡಿ ಗಡಿಭಾಗದಲ್ಲೂ ಕರ್ತವ್ಯಕ್ಕೆ ನಿಯೋಜಿಸಿದ್ದಾರೆ. ಸೋಂಕಿತ ಪಿಎಸ್‌ಐ ಜತೆಗೆ ಸಂಪರ್ಕದಲ್ಲಿದ್ದ ಸಿಬ್ಬಂದಿಯ ಗಂಟಲು ದ್ರವ ಪರೀಕ್ಷೆ‌ ಕೂಡಾ ಮಾಡಿಲ್ಲ. ಜತೆಗೆ ಪೊಲೀಸ್‌ ಠಾಣೆಯನ್ನ ಸೀಲ್‌ಡೌನ್‌ ಮಾಡದೆ ಮೇಲಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ. ಇದು ಕಾನೂನು ಅನುಷ್ಠಾನಗೊಳಿಸಬೇಕಾದವರೇ ಕಾನೂನು ಭಂಗ ಮಾಡಿದರೆ ಹೇಗೆ ಎಂಬ ಆತಂಕಕ್ಕೆ ಕಾರಣವಾಗಿದೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​