AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿಯ ಮೃತದೇಹ ಪಡೆಯಲು ಹಣವಿಲ್ಲದೆ 3 ದಿನದಿಂದ ಮಕ್ಕಳ ಪರದಾಟ, ಮುಂದೇನಾಯ್ತು?

ಬೆಳಗಾವಿ: ಅನಾರೋಗ್ಯದಿಂದ ಮೃತಪಟ್ಟ ತಾಯಿಯ ಅಂತ್ಯ ಕ್ರಿಯೆಗೂ ದುಡ್ಡಿಲ್ಲದೇ ಮಕ್ಕಳು ಪರದಾಡಿದ್ದು, ಅವರಿಗೆ ಹೆಲ್ಪ್ ಫಾರ್ ನೀಡಿ ಎಂಬ ಸಂಸ್ಥೆ ಸಹಾಯ ಮಾಡುವ ಮೂಲಕ ಪುಣ್ಯ ಕಾರ್ಯ ಮಾಡಿದೆ. ಸದ್ಯ ಮೂರು ದಿನದ ಬಳಿಕ ಮಗ ತಾಯಿಯ ಅಂತ್ಯ ಸಂಸ್ಕಾರವನ್ನು ನಡೆಸಿದ್ದಾನೆ. ಹಣ ಇರದ ಕಾರಣಕ್ಕೆ ತಾಯಿಯ ಅಂತ್ಯ ಕ್ರಿಯೆಗಾಗಿ ಮಕ್ಕಳು ಮೂರು ದಿನ ಕಾದುಕುಳಿತ ಮನಕಲುಕುವ ಘಟನೆ ಕುಂದಾನಗರಿ ಬೆಳಗಾವಿಯಲ್ಲಿ ನಡೆದಿದೆ. ಅನಾರೋಗ್ಯ ಹಿನ್ನೆಲೆಯಲ್ಲಿ ಬಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಗಣೇಶಪುರ ಗ್ರಾಮದ ನಿವಾಸಿ ಭಾರತಿ ಬಸ್ತವಾಡಕರ್(50) […]

ತಾಯಿಯ ಮೃತದೇಹ ಪಡೆಯಲು ಹಣವಿಲ್ಲದೆ 3 ದಿನದಿಂದ ಮಕ್ಕಳ ಪರದಾಟ, ಮುಂದೇನಾಯ್ತು?
ಆಯೇಷಾ ಬಾನು
|

Updated on: Oct 19, 2020 | 2:34 PM

Share

ಬೆಳಗಾವಿ: ಅನಾರೋಗ್ಯದಿಂದ ಮೃತಪಟ್ಟ ತಾಯಿಯ ಅಂತ್ಯ ಕ್ರಿಯೆಗೂ ದುಡ್ಡಿಲ್ಲದೇ ಮಕ್ಕಳು ಪರದಾಡಿದ್ದು, ಅವರಿಗೆ ಹೆಲ್ಪ್ ಫಾರ್ ನೀಡಿ ಎಂಬ ಸಂಸ್ಥೆ ಸಹಾಯ ಮಾಡುವ ಮೂಲಕ ಪುಣ್ಯ ಕಾರ್ಯ ಮಾಡಿದೆ. ಸದ್ಯ ಮೂರು ದಿನದ ಬಳಿಕ ಮಗ ತಾಯಿಯ ಅಂತ್ಯ ಸಂಸ್ಕಾರವನ್ನು ನಡೆಸಿದ್ದಾನೆ.

ಹಣ ಇರದ ಕಾರಣಕ್ಕೆ ತಾಯಿಯ ಅಂತ್ಯ ಕ್ರಿಯೆಗಾಗಿ ಮಕ್ಕಳು ಮೂರು ದಿನ ಕಾದುಕುಳಿತ ಮನಕಲುಕುವ ಘಟನೆ ಕುಂದಾನಗರಿ ಬೆಳಗಾವಿಯಲ್ಲಿ ನಡೆದಿದೆ. ಅನಾರೋಗ್ಯ ಹಿನ್ನೆಲೆಯಲ್ಲಿ ಬಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಗಣೇಶಪುರ ಗ್ರಾಮದ ನಿವಾಸಿ ಭಾರತಿ ಬಸ್ತವಾಡಕರ್(50) ಚಿಕಿತ್ಸೆ ಫಲಿಸದೇ ಅಕ್ಟೋಬರ್ 16 ರಂದು ಮೃತಪಟ್ಟಿದ್ದರು. ಮೃತ ಭಾರತಿಯ ಇಬ್ಬರು ಗಂಡು ಮಕ್ಕಳು ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಕೊರೊನಾ ಲಾಕ್‌ಡೌನ್​ನಿಂದಾಗಿ ಕೆಲಸ ಕಳೆದುಕೊಂಡು ನಿರುದ್ಯೋಗಿಗಳಾಗಿದ್ದರು.

ಹೀಗಾಗಿ ತಾಯಿಯ ಮೃತ ದೇಹ ಪಡೆಯಲು ಅವರಿಬ್ಬರ ಬಳಿ ಹಣವಿರಲಿಲ್ಲ. ಹೀಗಾಗಿ ಬಹಳಷ್ಟು ಪರದಾಡಿದ್ದಾರೆ. ಕೊನೆಗೆ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಹೆಲ್ಪ್ ಫಾರ್ ನೀಡಿ ಎಂಬ ಸಂಸ್ಥೆ ಸಿಬ್ಬಂದಿ ಇವರಿಗೆ ಸಹಾಯ ಹಸ್ತ ಚಾಚಿದ್ದಾರೆ. ಮೂರು ದಿನದ ನಂತರ ಮಕ್ಕಳು ಆಸ್ಪತ್ರೆಯ ಶವಾಗಾರದಲ್ಲಿದ್ದ ತಮ್ಮ ತಾಯಿಯ ಮೃತದೇಹವನ್ನು ಪಡೆದು ಸದಾಶಿವನಗರದಲ್ಲಿ ಅಂತ್ಯ ಕ್ರಿಯೆ ನೆರವೇರಿಸಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ