AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿಯ ಮೃತದೇಹ ಪಡೆಯಲು ಹಣವಿಲ್ಲದೆ 3 ದಿನದಿಂದ ಮಕ್ಕಳ ಪರದಾಟ, ಮುಂದೇನಾಯ್ತು?

ಬೆಳಗಾವಿ: ಅನಾರೋಗ್ಯದಿಂದ ಮೃತಪಟ್ಟ ತಾಯಿಯ ಅಂತ್ಯ ಕ್ರಿಯೆಗೂ ದುಡ್ಡಿಲ್ಲದೇ ಮಕ್ಕಳು ಪರದಾಡಿದ್ದು, ಅವರಿಗೆ ಹೆಲ್ಪ್ ಫಾರ್ ನೀಡಿ ಎಂಬ ಸಂಸ್ಥೆ ಸಹಾಯ ಮಾಡುವ ಮೂಲಕ ಪುಣ್ಯ ಕಾರ್ಯ ಮಾಡಿದೆ. ಸದ್ಯ ಮೂರು ದಿನದ ಬಳಿಕ ಮಗ ತಾಯಿಯ ಅಂತ್ಯ ಸಂಸ್ಕಾರವನ್ನು ನಡೆಸಿದ್ದಾನೆ. ಹಣ ಇರದ ಕಾರಣಕ್ಕೆ ತಾಯಿಯ ಅಂತ್ಯ ಕ್ರಿಯೆಗಾಗಿ ಮಕ್ಕಳು ಮೂರು ದಿನ ಕಾದುಕುಳಿತ ಮನಕಲುಕುವ ಘಟನೆ ಕುಂದಾನಗರಿ ಬೆಳಗಾವಿಯಲ್ಲಿ ನಡೆದಿದೆ. ಅನಾರೋಗ್ಯ ಹಿನ್ನೆಲೆಯಲ್ಲಿ ಬಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಗಣೇಶಪುರ ಗ್ರಾಮದ ನಿವಾಸಿ ಭಾರತಿ ಬಸ್ತವಾಡಕರ್(50) […]

ತಾಯಿಯ ಮೃತದೇಹ ಪಡೆಯಲು ಹಣವಿಲ್ಲದೆ 3 ದಿನದಿಂದ ಮಕ್ಕಳ ಪರದಾಟ, ಮುಂದೇನಾಯ್ತು?
ಆಯೇಷಾ ಬಾನು
|

Updated on: Oct 19, 2020 | 2:34 PM

Share

ಬೆಳಗಾವಿ: ಅನಾರೋಗ್ಯದಿಂದ ಮೃತಪಟ್ಟ ತಾಯಿಯ ಅಂತ್ಯ ಕ್ರಿಯೆಗೂ ದುಡ್ಡಿಲ್ಲದೇ ಮಕ್ಕಳು ಪರದಾಡಿದ್ದು, ಅವರಿಗೆ ಹೆಲ್ಪ್ ಫಾರ್ ನೀಡಿ ಎಂಬ ಸಂಸ್ಥೆ ಸಹಾಯ ಮಾಡುವ ಮೂಲಕ ಪುಣ್ಯ ಕಾರ್ಯ ಮಾಡಿದೆ. ಸದ್ಯ ಮೂರು ದಿನದ ಬಳಿಕ ಮಗ ತಾಯಿಯ ಅಂತ್ಯ ಸಂಸ್ಕಾರವನ್ನು ನಡೆಸಿದ್ದಾನೆ.

ಹಣ ಇರದ ಕಾರಣಕ್ಕೆ ತಾಯಿಯ ಅಂತ್ಯ ಕ್ರಿಯೆಗಾಗಿ ಮಕ್ಕಳು ಮೂರು ದಿನ ಕಾದುಕುಳಿತ ಮನಕಲುಕುವ ಘಟನೆ ಕುಂದಾನಗರಿ ಬೆಳಗಾವಿಯಲ್ಲಿ ನಡೆದಿದೆ. ಅನಾರೋಗ್ಯ ಹಿನ್ನೆಲೆಯಲ್ಲಿ ಬಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಗಣೇಶಪುರ ಗ್ರಾಮದ ನಿವಾಸಿ ಭಾರತಿ ಬಸ್ತವಾಡಕರ್(50) ಚಿಕಿತ್ಸೆ ಫಲಿಸದೇ ಅಕ್ಟೋಬರ್ 16 ರಂದು ಮೃತಪಟ್ಟಿದ್ದರು. ಮೃತ ಭಾರತಿಯ ಇಬ್ಬರು ಗಂಡು ಮಕ್ಕಳು ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಕೊರೊನಾ ಲಾಕ್‌ಡೌನ್​ನಿಂದಾಗಿ ಕೆಲಸ ಕಳೆದುಕೊಂಡು ನಿರುದ್ಯೋಗಿಗಳಾಗಿದ್ದರು.

ಹೀಗಾಗಿ ತಾಯಿಯ ಮೃತ ದೇಹ ಪಡೆಯಲು ಅವರಿಬ್ಬರ ಬಳಿ ಹಣವಿರಲಿಲ್ಲ. ಹೀಗಾಗಿ ಬಹಳಷ್ಟು ಪರದಾಡಿದ್ದಾರೆ. ಕೊನೆಗೆ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಹೆಲ್ಪ್ ಫಾರ್ ನೀಡಿ ಎಂಬ ಸಂಸ್ಥೆ ಸಿಬ್ಬಂದಿ ಇವರಿಗೆ ಸಹಾಯ ಹಸ್ತ ಚಾಚಿದ್ದಾರೆ. ಮೂರು ದಿನದ ನಂತರ ಮಕ್ಕಳು ಆಸ್ಪತ್ರೆಯ ಶವಾಗಾರದಲ್ಲಿದ್ದ ತಮ್ಮ ತಾಯಿಯ ಮೃತದೇಹವನ್ನು ಪಡೆದು ಸದಾಶಿವನಗರದಲ್ಲಿ ಅಂತ್ಯ ಕ್ರಿಯೆ ನೆರವೇರಿಸಿದ್ದಾರೆ.

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್