AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಷ್ಣುವನ್ನು ಹರಿ ಎಂದು ಏಕೆ ಕರೆಯುತ್ತಾರೆ? ಗುರುವಾರ ಪೂಜಿಸಲು ಇಲ್ಲಿವೆ ಕಾರಣಗಳು

ವಿಷ್ಣು ಹಾಲಿನ ಸಾಗರದಲ್ಲಿ ಹಾವಿನ ಮೇಲೆ ಮಲಗಿರುವ ಚಿತ್ರಗಳನ್ನು ನೀವು ನೋಡಿರಬಹುದು. ಹಾಲಿನ ಸಾಗರವು ಸಂತೋಷ ಮತ್ತು ದುಃಖದ ಅವಶೇಷಗಳನ್ನು ಸಂಕೇತಿಸುತ್ತದೆ.

ವಿಷ್ಣುವನ್ನು ಹರಿ ಎಂದು ಏಕೆ ಕರೆಯುತ್ತಾರೆ? ಗುರುವಾರ ಪೂಜಿಸಲು ಇಲ್ಲಿವೆ ಕಾರಣಗಳು
ವಿಷ್ಣು ದೇವರು
ರಾಜೇಶ್ ದುಗ್ಗುಮನೆ
| Edited By: |

Updated on: Feb 22, 2021 | 9:53 PM

Share

ಪುರಾಣಗಳಲ್ಲಿ ಪ್ರತಿ ವಾರವನ್ನು ಯಾವುದಾದರೂ ದೇವತೆಗೆ ಸಮರ್ಪಿಸಲಾಗಿದೆ. ಸೋಮವಾರ ಶಿವನಿಗೆ, ಮಂಗಳವಾರ ಹನುಮನಿಗೆ ಮತ್ತು ಬುಧವಾರ ಅಯ್ಯಪ್ಪನಿಗೆ ಸಮರ್ಪಿಸಲಾಗಿದೆ. ಗುರುವಾರ ಶಿರಡಿ ಸಾಯಿಯನ್ನು ಪೂಜಿಸುತ್ತೇವೆ. ಇದರ ಜತೆಗೆ ಗುರುವಾರ ನಾವು ವಿಷ್ಣು ದೇವರನ್ನು ಕೂಡ ಪೂಜಿಸುತ್ತೇವೆ. ಹಿಂದೂ ಪುರಾಣದ ಪ್ರಕಾರ, ಗುರುವಾರ ವಿಷ್ಣುವನ್ನು ಪೂಜಿಸುವುದರಿಂದ ಜೀವನದ ಎಲ್ಲಾ ಸಮಸ್ಯೆಗಳು ದೂರವಾಗುತ್ತದೆ ಎನ್ನುವ ನಂಬಿಕೆ ಭಕ್ತರದ್ದು. ಅಲ್ಲದೆ ವಿಷ್ಣುವನ್ನು ಹರಿ ಎಂಬ ಹೆಸರಿನಿಂದ ಕರೆಯಲಾಗುತ್ತದೆ. ವಿಷ್ಣುವನ್ನು ಹರಿ ಎಂದು ಏಕೆ ಕರೆಯಲಾಗುತ್ತದೆ ಮತ್ತು ಗುರುವಾರ ವಿಷ್ಣುವನ್ನು ಏಕೆ ಪೂಜಿಸಲಾಗುತ್ತದೆ ಎಂಬುದಕ್ಕೆ ಇಲ್ಲಿದೆ ವಿವರ.

ವಿಷ್ಣುವನ್ನು ಹರಿ ಎಂದು ಏಕೆ ಕರೆಯುತ್ತಾರೆ? ಹರಿ ಹರತಿ ಪಾಪಾನಿ ಎಂದರೆ ಹರಿ ಎಂದು ಕರೆದರೆ ನಮ್ಮ ಜೀವನದ ಎಲ್ಲಾ ಪಾಪಗಳು ಕಳೆದು ಹೋಗುತ್ತದೆ ಎನ್ನುವ ನಂಬಿಕೆ ಭಕ್ತರಲ್ಲಿದೆ. ಹರಿ ಎಂದರೆ ಕಷ್ಟಗಳನ್ನು ನಾಶ ಮಾಡುವವನು ಎಂಬರ್ಥವಿದೆ. ವಿಷ್ಣುವನ್ನು ಆರಾಧಿಸುವ ಭಕ್ತನ ಎಲ್ಲಾ ಪಾಪಗಳನ್ನು ವಿಷ್ಣು ತೆಗೆದುಹಾಕುತ್ತಾನೆ ಎಂದು ಪುರಾಣಗಳಲ್ಲಿ ಹೇಳಲಾಗಿದೆ. ಎಷ್ಟೇ ದೊಡ್ಡ ಸಮಸ್ಯೆಗಳಿದ್ದರೂ ಹರಿ ಪರಿಹರಿಸುತ್ತಾನೆ. ಅದಕ್ಕಾಗಿಯೇ ಅವನನ್ನು ಭಕ್ತಿಪೂರ್ವಕವಾಗಿ ಹರಿ, ಶ್ರೀಹರಿ ಎಂದು ಕರೆಯಲಾಗುತ್ತದೆ.

ವಿಷ್ಣುವನ್ನು ಗುರುವಾರ ಪೂಜಿಸೋದೇಕೆ? ಪುರಾಣಗಳ ಪ್ರಕಾರ, ಪಕ್ಷಿಗಳಲ್ಲಿ ದೊಡ್ಡದು ಗರುಡ. ಇದು ವಿಷ್ಣುವಿನ ವಾಹನ ಕೂಡ ಹೌದು. ಗರುಡ ಕಠಿಣ ತಪಸ್ಸಿನ ಮೂಲಕ ವಿಷ್ಣುವಿನ ಗಮನ ಸೆಳೆದಿತ್ತು. ಗರುಡ ಪಕ್ಷಿಯ ತಪಸ್ಸಿನಿಂದ ಸಂತಸಗೊಂಡ ವಿಷ್ಣು ಅದನ್ನು ತನ್ನ ವಾಹನನ್ನಾಗಿ ಮಾಡಿಕೊಂಡನು. ಗುರು ಎಂದರೆ ಭಾರ ಎಂಬ ಅರ್ಥವಿದೆ. ಪಕ್ಷಿಗಳಲ್ಲೇ ದೊಡ್ಡದಾದ ಪಕ್ಷಿ ಗರುಡ. ಗರುಡ ಎಂದರೆ ಕಠಿಣ ಯಶಸ್ಸನ್ನು ಸಾಧಿಸುವವನು. ಈ ಕಾರಣಕ್ಕಾಗಿಯೇ ವಿಷ್ಣುವನ್ನು ಗುರುವಾರ ಪೂಜಿಸಲಾಗುತ್ತದೆ.

ವಿಷ್ಣು ಹಾವಿನ ಮೇಲೆ ಏಕೆ ಮಲಗುತ್ತಾನೆ? ವಿಷ್ಣು ಹಾಲಿನ ಸಾಗರದಲ್ಲಿ ಹಾವಿನ ಮೇಲೆ ಮಲಗಿರುವ ಚಿತ್ರಗಳನ್ನು ನೀವು ನೋಡಿರಬಹುದು. ಹಾಲಿನ ಸಾಗರವು ದುಃಖದ ಲೇಪವೂ ಇಲ್ಲದ ಸಂತೋಷವನ್ನು ಸಂಕೇತಿಸುತ್ತದೆ. ಈ ರೂಪವು ಮಾನವರು ಸಂತೋಷ ಮತ್ತು ಅತೃಪ್ತಿ ಎರಡರಲ್ಲೂ ಒಂದೇ ರೀತಿಯಲ್ಲಿ ಬದುಕಬೇಕು ಎಂದು ಸೂಚಿಸುತ್ತದೆ.

ಇದನ್ನೂ ಓದಿ: ಶಿವನಿಗೆ ಬಿಲ್ವಪತ್ರೆ ಶ್ರೇಷ್ಠವೇಕೆ? ಈ ಮರ ಹುಟ್ಟಿದ್ದು ಹೇಗೆ? ಇಲ್ಲಿದೆ ಪುರಾಣದ ಕಥೆ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ