AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ನವಗರದಲ್ಲಿ ಸಿದ್ದವಾಗುತ್ತಿದೆ ಹೈಟೆಕ್ ತರಕಾರಿ ಮಾರುಕಟ್ಟೆ; ನವೆಂಬರ್​ನಲ್ಲಿ​ ಉದ್ಘಾಟನೆ ಸಾಧ್ಯತೆ

ನವನಗರವು ಧಾರವಾಡ ಮತ್ತು ಹುಬ್ಬಳ್ಳಿ ನಗರದ ನಡುವೆ, ಹುಬ್ಬಳ್ಳಿ ನಗರ ಕೇಂದ್ರದಿಂದ ಸುಮಾರು 10 ಕಿ.ಮೀ. ದೂರದಲ್ಲಿದೆ. ಹೊಸ ಮಾರುಕಟ್ಟೆಯು ನವನಗರದ ವಾರ್ಡ್ ನಂ. 27ರಲ್ಲಿ ನಿರ್ಮಾಣವಾಗುತ್ತಿದೆ. ಇದರಿಂದ ಈಶ್ವರನಗರ, ಅಮರಗೋಳ, ಸುತಗಟ್ಟಿ, ಬೈರಿದೇವರಕೊಪ್ಪ ಹಾಗೂ ಸುತ್ತಮುತ್ತಲಿನ ನಗರ ನಿವಾಸಿಗಳಿಗೆ ಅನುಕೂಲವಾಗಲಿದೆ.

ಹುಬ್ಬಳ್ಳಿ: ನವಗರದಲ್ಲಿ ಸಿದ್ದವಾಗುತ್ತಿದೆ ಹೈಟೆಕ್ ತರಕಾರಿ ಮಾರುಕಟ್ಟೆ; ನವೆಂಬರ್​ನಲ್ಲಿ​ ಉದ್ಘಾಟನೆ ಸಾಧ್ಯತೆ
ನವನಗರ ಮಾರುಕಟ್ಟೆ
Follow us
ವಿವೇಕ ಬಿರಾದಾರ
|

Updated on: Oct 06, 2023 | 11:34 AM

ಹುಬ್ಬಳ್ಳಿ ಅ.06: ಹುಬ್ಬಳ್ಳಿಯ (Hubballi) ನವನಗರದಲ್ಲಿ (Navanagar) ಹೈಟೆಕ್ ತರಕಾರಿ ಮಾರುಕಟ್ಟೆ ನಿರ್ಮಾಣ ಕಾಮಗಾರಿ ಮುಕ್ತಾಯ ಹಂತದಲ್ಲಿದ್ದು, ಮುಂದಿನ ತಿಂಗಳು ಉದ್ಘಾಟನೆಗೊಳ್ಳುವ ಸಾಧ್ಯತೆ ಇದೆ. ಸುಸಜ್ಜಿತ ಮತ್ತು ಸುವ್ಯವಸ್ಥಿತ ಮಾರುಕಟ್ಟೆ (Market) ಇದಾಗಿದೆ. ಈ ಮಾರುಕಟ್ಟೆಯಿಂದ ದಶಕಗಳಿಂದ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿರುವ ಮಾರಾಟಗಾರರಿಗೆ ಅನುಕೂಲವಾಗಲಿದೆ. ವ್ಯವಸ್ಥಿತ ಮಾರುಕಟ್ಟೆ ಇಲ್ಲದೆ ರೈತರು ಮತ್ತು ಮಾರಾಟಗಾರರು, ತರಕಾರಿ, ಹಣ್ಣು, ಹೂವುಗಳನ್ನು ರಸ್ತೆಯಲ್ಲೇ ಮಾರಾಟ ಮಾಡುತ್ತಿದ್ದಾರೆ.

ನವನಗರವು ಧಾರವಾಡ ಮತ್ತು ಹುಬ್ಬಳ್ಳಿ ನಗರದ ನಡುವೆ, ಹುಬ್ಬಳ್ಳಿ ನಗರ ಕೇಂದ್ರದಿಂದ ಸುಮಾರು 10 ಕಿ.ಮೀ. ದೂರದಲ್ಲಿದೆ. ಹೊಸ ಮಾರುಕಟ್ಟೆಯು ನವನಗರದ ವಾರ್ಡ್ ನಂ. 27ರಲ್ಲಿ ನಿರ್ಮಾಣವಾಗುತ್ತಿದೆ. ಇದರಿಂದ ಈಶ್ವರನಗರ, ಅಮರಗೋಳ, ಸುತಗಟ್ಟಿ, ಬೈರಿದೇವರಕೊಪ್ಪ ಹಾಗೂ ಸುತ್ತಮುತ್ತಲಿನ ನಗರ ನಿವಾಸಿಗಳಿಗೆ ಅನುಕೂಲವಾಗಲಿದೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (HDMC) ವತಿಯಿಂದ 1.5 ಕೋಟಿ ರೂ. ವೆಚ್ಚದಲ್ಲಿ ಮಾರುಕಟ್ಟೆ ನಿರ್ಮಿಸಲಾಗುತ್ತಿದೆ. ಹಳೆಯ ಮಾರುಕಟ್ಟೆಯನ್ನು 1995 ರಲ್ಲಿ ನಿರ್ಮಿಸಲಾಗಿತ್ತು. ಕಾಲಾನಂತರದಲ್ಲಿ, ಮಾರುಕಟ್ಟೆಯು ಕೆಟ್ಟ ರೂಪಕ್ಕೆ ತಿರುಗಿದೆ. ನವನಗರ ಮತ್ತು ಹತ್ತಿರದ ಪ್ರದೇಶಗಳ ನಿವಾಸಿಗಳಿಗೆ ಮಾರುಕಟ್ಟೆಯಿಂದ ಸಹಾಯವಾಗಲಿದೆ. ಹೆಚ್​ಡಿಎಂಸಿ ಅನುದಾನ, ಶಾಸಕರ ನಿಧಿ ಹಾಗೂ ಕಾರ್ಪೊರೇಟರ್‌ ವಾರ್ಡ್‌ ನಿಧಿಯಿಂದ ಮಾರುಕಟ್ಟೆ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ಎಂದು ವಲಯ ಸಹಾಯಕ ಆಯುಕ್ತ ರಮೇಶ್ ನೂಲ್ವಿ ತಿಳಿಸಿದರು.

ಇದನ್ನೂ ಓದಿ: ಹುಬ್ಬಳ್ಳಿ ಚೆನ್ನಮ್ಮ ಸರ್ಕಲ್ ಮೇಲ್ಸೇತುವೆ ಪ್ರಶ್ನಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್

ಸುಮಾರು ಒಂದು ಎಕರೆ ಪ್ರದೇಶದಲ್ಲಿ ಮಾರುಕಟ್ಟೆಯನ್ನು ನಿರ್ಮಾಣ ಮಾಡಲಾಗುತ್ತಿದೆ. ವಾಹನಗಳ ನಿಲುಗಡೆಗೆ ಜಾಗ ನೀಡಲಾಗಿದೆ. ನಾವು ಮಾರಾಟಗಾರರನ್ನು ಮೂರು ವರ್ಗಗಳಾಗಿ ವಿಂಗಡಿಸಿದ್ದೇವೆ: ಪೂರ್ಣ ಸಮಯದ ಮಾರಾಟಗಾರರು, ಅರೆಕಾಲಿಕ ಮಾರಾಟಗಾರರು ಮತ್ತು ಮೊಬೈಲ್ ಮಾರಾಟಗಾರರು. ಮುಖ್ಯ ಕಟ್ಟಡದಲ್ಲಿ ಸುಮಾರು 35 ಪೂರ್ಣಾವಧಿ ಮಾರಾಟಗಾರರಿಗೆ ಜಾಗವನ್ನು ನೀಡಲಾಗುವುದು. ರೈತರು ಸೇರಿದಂತೆ ಅರೆಕಾಲಿಕ ಮಾರಾಟಗಾರರಿಗೆ ತರಕಾರಿ ಮತ್ತು ಹಣ್ಣುಗಳನ್ನು ಮಾರಾಟ ಮಾಡಲು ಸ್ಥಳಾವಕಾಶವನ್ನು ಒದಗಿಸಲಾಗುವುದು ಎಂದು ಹೇಳಿದರು.

ಮಾರುಕಟ್ಟೆಯಲ್ಲಿನ ಹೈಟೆಕ್ ಸೌಲಭ್ಯಗಳು ಎಲ್ಲಾ ಹವಾಮಾನ ಪರಿಸ್ಥಿತಿಗಳಲ್ಲೂ ಯಾವುದೇ ತೊಂದರೆಯಿಲ್ಲದೆ ತರಕಾರಿಗಳು, ಹಣ್ಣುಗಳು ಮತ್ತು ಹೂವುಗಳನ್ನು ಮಾರಾಟ ಮಾಡಬಹುದಾಗಿದೆ. ನವನಗರ ಮಾರುಕಟ್ಟೆಯ ಸುತ್ತಲಿನ ಸಂಚಾರ ದಟ್ಟಣೆಯಿಂದ ಪ್ರಯಾಣಿಕರು ಮತ್ತು ಪಾದಚಾರಿಗಳು ಕಿರಿಕಿರಿ ಅನುಭವಿಸುತ್ತಾರೆ. ಸದ್ಯ ನವನಗರ ಮಾರುಕಟ್ಟೆಯಲ್ಲಿ ತರಕಾರಿ ಮಾರಾಟ ಮಾಡುತ್ತಿರುವ 100ಕ್ಕೂ ಹೆಚ್ಚು ಮಾರಾಟಗಾರರು ಹೊಸ ಮಾರುಕಟ್ಟೆಗೆ ಸ್ಥಳಾಂತರಗೊಳ್ಳಲಿದ್ದಾರೆ. ಬಾಕಿ ಉಳಿದಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ 1-2 ತಿಂಗಳಲ್ಲಿ ಹೊಸ ಮಾರುಕಟ್ಟೆಯನ್ನು ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲಾಗುವುದು ಎಂದರು.

ನವನಗರದ ನಿವಾಸಿ ಬಸವರಾಜ ಜಾಂಬೋಟಿ ಮಾತನಾಡಿ, ನವನಗರದಲ್ಲಿ ಖರೀದಿ ಕಷ್ಟವಾಗಿದೆ. ತರಕಾರಿ ವ್ಯಾಪಾರಿಗಳು ಸಿದ್ದಪ್ಪಜ್ಜ ದೇವಸ್ಥಾನದ ಬಳಿಯೇ ಕುಳಿತಿದ್ದು, ತರಕಾರಿ ಖರೀದಿಸಲು ಅಲ್ಲಿಯವರೆಗು ಹೋಗಬೇಕಾಗುತ್ತದೆ. ಮಾರುಕಟ್ಟೆ ತೆರೆದರೆ ತರಕಾರಿ, ಹಣ್ಣು ಮತ್ತಿತರ ವಸ್ತುಗಳು ಒಂದೇ ಕಡೆ ಸಿಗುತ್ತವೆ. ಬಾಕಿ ಉಳಿದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಿ ಶೀಘ್ರ ಮಾರುಕಟ್ಟೆ ತೆರೆಯಲು ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ