AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ಕೊರೊನಾ ಪ್ರಕರಣಗಳ ಹೆಚ್ಚಳ: ಕೇರಳ-ಮೈಸೂರು ಗಡಿ ಭಾಗದಲ್ಲಿ ಹೈ ಅಲರ್ಟ್ ಘೋಷಣೆ

ಕೇರಳದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಿಂದಾಗಿ ಕೇರಳ-ಮೈಸೂರು ಜಿಲ್ಲೆ ಗಡಿ ಭಾಗದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್‌ನಲ್ಲಿ ಆರೋಗ್ಯ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

ಕೇರಳದಲ್ಲಿ ಕೊರೊನಾ ಪ್ರಕರಣಗಳ ಹೆಚ್ಚಳ: ಕೇರಳ-ಮೈಸೂರು ಗಡಿ ಭಾಗದಲ್ಲಿ ಹೈ ಅಲರ್ಟ್ ಘೋಷಣೆ
ಬಾವಲಿ ಚೆಕ್ ಪೋಸ್ಟ್‌ನಲ್ಲಿ ಆರೋಗ್ಯ ಸಿಬ್ಬಂದಿ ನಿಯೋಜನೆ
ಪೃಥ್ವಿಶಂಕರ
|

Updated on:Feb 20, 2021 | 8:22 AM

Share

ಮೈಸೂರು: ಕೇರಳದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಿಂದಾಗಿ ಕೇರಳ-ಮೈಸೂರು ಜಿಲ್ಲೆ ಗಡಿ ಭಾಗದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್‌ನಲ್ಲಿ ಆರೋಗ್ಯ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಕೇರಳದಿಂದ ಬರುವ ಎಲ್ಲ ಪ್ರಯಾಣಿಕರ ತಪಾಸಣೆ ಮಾಡಲಾಗುತ್ತಿದ್ದು, ಅಧಿಕಾರಿಗಳಿಂದ ಕೊವಿಡ್ ಟೆಸ್ಟ್ ವರದಿ ಪರಿಶೀಲನೆ ಮಾಡಲಾಗುತ್ತಿದೆ.

ಪ್ರತಿಯೊಬ್ಬರಿಗೂ ಥರ್ಮಲ್ ಸ್ಕ್ಯಾನಿಂಗ್, ಸ್ಯಾನಿಟೈಸರ್ ಮಾಡಲಾಗುತ್ತಿದ್ದು, ಕೋವಿಡ್ ಟೆಸ್ಟ್ ಮಾಡಿಸಿರುವ ಬಗ್ಗೆಯೂ ತಪಾಸಣೆ ಮಾಡಲಾಗುತ್ತಿದೆ. ಮೈಸೂರಿಗೆ ಬಸ್ ಹಾಗೂ ವಿಮಾನದ ಮೂಲಕ ಆಗಮಿಸುವ ಪ್ರಯಾಣಿಕರನ್ನು ಅಧಿಕಾರಿಗಳು ತಪಾಸಣೆ ಮಾಡುತ್ತಿದ್ದಾರೆ. ಕೇರಳದಿಂದ ಪ್ರತಿದಿನ ಒಂದು ವಿಮಾನ ಮೈಸೂರಿಗೆ ಹಾರಾಟ ನಡೆಸುತ್ತಿದೆ. ಪ್ರತಿದಿ‌ನ ಸರಾಸರಿ 55 ಪ್ರಯಾಣಿಕರು ವಿಮಾನದ ಮೂಲಕ ಆಗಮಿಸುತ್ತಿದ್ದಾರೆ. ಹೀಗಾಗಿ ಅವರುಗಳ ಮೇಲೆ ನಿಗ ಇಡಲಾಗುತ್ತಿದೆ.

ನಮ್ಮ ರಾಜ್ಯದ 10 ಬಸ್ಸುಗಳು ಕೇರಳಕ್ಕೆ ಪ್ರತಿನಿತ್ಯ ಸಂಚಾರ ನಡೆಸುತ್ತಿವೆ. ಹಾಗೆಯೇ ಕೇರಳ ರಾಜ್ಯದ 25 ರಿಂದ 30 ಬಸ್ಸುಗಳು ನಮ್ಮ ರಾಜ್ಯಕ್ಕೆ ಸಂಚಾರ ಮಾಡುತ್ತಿವೆ. ಪ್ರತಿದಿನ ಬಸ್ ಮೂಲಕ ಅಂದಾಜು 700 ರಿಂದ 800 ಜನರು ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೇರಳ-ಮೈಸೂರು ಜಿಲ್ಲೆ ಗಡಿ ಭಾಗದಲ್ಲಿ ಹೈ ಅಲರ್ಟ್​ ಘೋಷಿಸಲಾಗಿದೆ.

Published On - 8:16 am, Sat, 20 February 21

Follow Us
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ