AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಪ್ರಮುಖ ಕೆರೆಗಳ ಒತ್ತುವರಿ ತೆರವುಗೊಳಿಸಲು ಬಿಬಿಎಂಪಿಗೆ ಹೈಕೋರ್ಟ್​ ಆದೇಶ

ಬೇಗೂರು ಕೆರೆ, ಸುಬ್ರಹ್ಮಣ್ಯಪುರ ಕೆರೆ, ಕಗ್ಗದಾಸಪುರ ಕೆರೆ ಒತ್ತುವರಿ ತೆರವಿಗೆ ಆದೇಶ ನೀಡಲಾಗಿದ್ದು, ಡಿಪಿಎಆರ್​ನಂತೆ ಕಾಮಗಾರಿ ನಿರ್ವಹಿಸಲು ಬಿಬಿಎಂಪಿಗೆ ಹೈಕೋರ್ಟ್ ಅನುಮತಿ ನೀಡಿದೆ. ಕೆರೆ ಸುತ್ತಲಿನ ಪಾದಚಾರಿ ಮಾರ್ಗದ ಅಗಲ ಕಡಿತಗೊಳಿಸಲು ಸೂಚಿಸಿದೆ.

ಬೆಂಗಳೂರಿನ ಪ್ರಮುಖ ಕೆರೆಗಳ ಒತ್ತುವರಿ ತೆರವುಗೊಳಿಸಲು ಬಿಬಿಎಂಪಿಗೆ ಹೈಕೋರ್ಟ್​ ಆದೇಶ
ಪ್ರಾತಿನಿಧಿಕ ಚಿತ್ರ
Follow us
Skanda
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Mar 05, 2021 | 9:59 PM

ಬೆಂಗಳೂರು: ಬೆಂಗಳೂರಿನ ಕೆರೆಗಳ ಒತ್ತುವರಿ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಬೇಗೂರು ಕೆರೆ, ಸುಬ್ರಹ್ಮಣ್ಯಪುರ ಕೆರೆ, ಕಗ್ಗದಾಸಪುರ ಕೆರೆ ಒತ್ತುವರಿ ತೆರವಿಗೆ ಆದೇಶ ನೀಡಲಾಗಿದ್ದು, ಡಿಪಿಎಆರ್​ನಂತೆ ಕಾಮಗಾರಿ ನಿರ್ವಹಿಸಲು ಬಿಬಿಎಂಪಿಗೆ ಹೈಕೋರ್ಟ್ ಅನುಮತಿ ನೀಡಿದೆ. ಕೆರೆಯ ಸುತ್ತಲಿನ ಪಾದಚಾರಿ ಮಾರ್ಗದ ಅಗಲ ಕಡಿತಗೊಳಿಸಲು ಸೂಚಿಸುವ ಜೊತೆಗೆ ಕೆರೆಗಳ ನೀರು ಶೇಖರಣೆ ಸಾಮರ್ಥ್ಯ ಹೆಚ್ಚಳ ಮಾಡಲು ಬೇಕಾದ ಕ್ರಮಕೈಗೊಳ್ಳಲು ಸೂಚನೆ ನೀಡಿದೆ.

ಬೇಗೂರು ಕೆರೆಯಲ್ಲಿ 6.30 ಎಕರೆ ಖಾಸಗಿಯವರ ಒತ್ತುವರಿ ಇರುವುದು ಸರ್ವೆಯಲ್ಲಿ ಪತ್ತೆಯಾಗಿದೆ. 3.26 ಎಕರೆ ಸರ್ಕಾರಿ ರಸ್ತೆಯೂ ನಿರ್ಮಾಣವಾಗಿದೆ. ಕಗ್ಗದಾಸಪುರ ಕೆರೆಯಲ್ಲಿ 23 ಒತ್ತುವರಿ ಇರುವುದು ಸರ್ವೆ ವೇಳೆ ಪತ್ತೆಯಾಗಿದ್ದು, ಒತ್ತುವರಿ ತೆರವಿಗೆ ತುರ್ತು ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ಸೂಚಿಸಿದೆ. ಸುಬ್ರಹ್ಮಣ್ಯಪುರ ಕೆರೆಯೂ ಸೇರಿದಂತೆ ಮೂರೂ ಕೆರೆಗಳನ್ನು ಹೊಸದಾಗಿ ಸರ್ವೆ ಮಾಡಲು ಬಿಬಿಎಂಪಿ ನಾಲ್ಕು ವಾರಗಳ ಕಾಲಾವಕಾಶ ಕೋರಿದೆ. ಬಿಬಿಎಂಪಿ ಮನವಿಗೆ ಪ್ರತಿಕ್ರಿಯಿಸಿದ ಹೈಕೋರ್ಟ್ ಹೊಸ ಸರ್ವೆ ವರದಿ ಬರುವವರೆಗೂ ಬಿಬಿಎಂಪಿ ಕಾಯುವ ಅಗತ್ಯವಿಲ್ಲ. ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಬೇಕು. ಬಿಬಿಎಂಪಿ, ಸರ್ಕಾರ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ.

ಇದೇ ವೇಳೆ ಹೈಕೋರ್ಟ್ ಸೂಚನೆಯಂತೆ NEERI ಸಂಸ್ಥೆಯ ಸಲಹೆ ಪಡೆಯಲಾಗಿದ್ದು ಡಿಪಿಎಆರ್ ನಂತೆ ಕೆರೆ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಬಹುದೆಂದು NEERI ತಿಳಿಸಿದೆ. ಹೀಗಾಗಿ ಹೈಕೋರ್ಟ್ ಡಿಪಿಎಆರ್ ನಂತೆ ಕಾಮಗಾರಿ ನಡೆಸಲು ಬಿಬಿಎಂಪಿ ಗೆ ಅನುಮತಿ ನೀಡಿದೆ. ಕೆರೆ ಸುತ್ತಲಿನ ಪಾದಚಾರಿ ಮಾರ್ಗದ ಅಗಲ ಕಡಿತಗೊಳಿಸಿ ಕೆರೆಗಳ ನೀರು ಶೇಖರಣೆ ಸಾಮರ್ಥ್ಯ ಹೆಚ್ಚಳಕ್ಕೂ ಹೈಕೋರ್ಟ್ ಸೂಚನೆ ನೀಡಿದೆ. ಕಂದಾಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್ ಕೂಡಾ ಹೈಕೋರ್ಟ್ ಗೆ ಪ್ರಮಾಣಪತ್ರ ಸಲ್ಲಿಸಿದ್ದು ಸುಬ್ರಹ್ಮಣ್ಯಪುರ ಕೆರೆಯ ಸರ್ವೆ, ಬೇಗೂರು, ಕಗ್ಗದಾಸಪುರ ಕೆರೆ ಒತ್ತುವರಿ ತೆರವಿಗೆ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಲಾಗಿದೆ. ಇದಕ್ಕಾಗಿ ಕಾಲಾವಕಾಶ ನೀಡುವಂತೆ ಕೋರಿದ್ದರು.

ಇದನ್ನೂ ಓದಿ: ಕೆರೆ ಒತ್ತುವರಿ ಮಾಡಿ ಮಸೀದಿ ನಿರ್ಮಾಣ ಆರೋಪ: ಸರ್ವೆ ನಡೆಸಿ ವರದಿ ನೀಡುವಂತೆ ಹೈಕೋರ್ಟ್ ಸೂಚನೆ

ರಾಜಕಾಲುವೆಗಳ ಮೇಲೆ ಮತ್ತೆ ಘರ್ಜಿಸಲಿವೆ ಬಿಬಿಎಂಪಿ ಜೆಸಿಬಿಗಳು! ಯಾವಾಗಿನಿಂದ, ಎಲ್ಲೆಲ್ಲಿ?

ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ
ಪಾಕಿಸ್ತಾನಕ್ಕೆ ಬುದ್ಧಿ ಕಲಿಸಲು ಇದೊಂದೇ ಮಾರ್ಗ ಇರೋದು: ಮಹಾದೇವಸ್ವಾಮಿ
ಪಾಕಿಸ್ತಾನಕ್ಕೆ ಬುದ್ಧಿ ಕಲಿಸಲು ಇದೊಂದೇ ಮಾರ್ಗ ಇರೋದು: ಮಹಾದೇವಸ್ವಾಮಿ
ಭಾರತ-ಪಾಕಿಸ್ತಾನದ ದಾಳಿ ಕೊನೆಗೊಳಿಸಲು ಮೆಹಬೂಬಾ ಮುಫ್ತಿ ಮನವಿ
ಭಾರತ-ಪಾಕಿಸ್ತಾನದ ದಾಳಿ ಕೊನೆಗೊಳಿಸಲು ಮೆಹಬೂಬಾ ಮುಫ್ತಿ ಮನವಿ
ಅಮಿತ್ ಶಾ ಬಿಎಸ್​ಎಫ್, ಸಿಅರ್​​ಪಿಎಫ್ ಡಿಜಿಗಳ ಜೊತೆ ನಡೆಸಲಿದ್ದಾರೆ ಸಭೆ
ಅಮಿತ್ ಶಾ ಬಿಎಸ್​ಎಫ್, ಸಿಅರ್​​ಪಿಎಫ್ ಡಿಜಿಗಳ ಜೊತೆ ನಡೆಸಲಿದ್ದಾರೆ ಸಭೆ
ಪಾಕ್​ ದಾಳಿಯ ಸಂತ್ರಸ್ತರಿಗೆ ಧೈರ್ಯ ತುಂಬಿದ ಸಿಎಂ ಒಮರ್
ಪಾಕ್​ ದಾಳಿಯ ಸಂತ್ರಸ್ತರಿಗೆ ಧೈರ್ಯ ತುಂಬಿದ ಸಿಎಂ ಒಮರ್