ಬಹಮನಿ ಕೋಟೆಯಲ್ಲಿ ಜಾಗ ಒತ್ತುವರಿ, ಅಕ್ರಮ ಮನೆಗಳ ತೆರವಿಗೆ ಹೈಕೋರ್ಟ್ ಆದೇಶ

ಕಲಬುರಗಿ: ಬಹಮನಿ ಕೋಟೆಯಲ್ಲಿರುವ ಮನೆಗಳ ತೆರವಿಗೆ ಕಲಬುರಗಿ ಜಿಲ್ಲಾಡಳಿತ ಮುಂದಾಗಿದೆ. ರಾಜ್ಯ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮನೆಗಳ ತೆರವಿಗೆ ಜಿಲ್ಲಾಡಳಿತ ನಿರ್ಧಾರ ಮಾಡಿದೆ. ಕೂಡಲೇ ಮನೆಗಳನ್ನು ತೆರವುಗೊಳಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದ್ದು, ಮನೆ ತೆರವು ಮಾಡದಿದ್ದರೆ ಮನೆಗಳನ್ನು ಧ್ವಂಸಗೊಳಿಸುವುದಾಗಿ ಎಚ್ಚರಿಕೆ ನೀಡಿದೆ. ಕಲಬುರಗಿಯ ಐತಿಹಾಸಿಕ ಬಹಮನಿ ಕೋಟೆಯಲ್ಲಿ ಸುಮಾರು 282 ಮನೆಗಳಿವೆ. ಇವರೆಲ್ಲ ನೂರಾರು ವರ್ಷಗಳಿಂದ ಇಲ್ಲೇ ಇದ್ದು ತಮ್ಮ ಗೂಡು ಕಟ್ಟಿಕೊಂಡಿದ್ದಾರೆ. ಆದರೆ ಸರ್ಕಾರದ ಈ ನಿರ್ಧಾರಕ್ಕೆ ಜನ ಕಂಗಾಲಾಗಿದ್ದಾರೆ. ಮನೆಗಳನ್ನು ತೆರವುಗೊಳಿಸೋದಿಲ್ಲಾ ಎಂದು ಕೋಟೆಯಲ್ಲಿನ […]

ಬಹಮನಿ ಕೋಟೆಯಲ್ಲಿ ಜಾಗ ಒತ್ತುವರಿ, ಅಕ್ರಮ ಮನೆಗಳ ತೆರವಿಗೆ ಹೈಕೋರ್ಟ್ ಆದೇಶ

Updated on: Feb 02, 2020 | 11:13 AM

ಕಲಬುರಗಿ: ಬಹಮನಿ ಕೋಟೆಯಲ್ಲಿರುವ ಮನೆಗಳ ತೆರವಿಗೆ ಕಲಬುರಗಿ ಜಿಲ್ಲಾಡಳಿತ ಮುಂದಾಗಿದೆ. ರಾಜ್ಯ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮನೆಗಳ ತೆರವಿಗೆ ಜಿಲ್ಲಾಡಳಿತ ನಿರ್ಧಾರ ಮಾಡಿದೆ. ಕೂಡಲೇ ಮನೆಗಳನ್ನು ತೆರವುಗೊಳಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದ್ದು, ಮನೆ ತೆರವು ಮಾಡದಿದ್ದರೆ ಮನೆಗಳನ್ನು ಧ್ವಂಸಗೊಳಿಸುವುದಾಗಿ ಎಚ್ಚರಿಕೆ ನೀಡಿದೆ.

ಕಲಬುರಗಿಯ ಐತಿಹಾಸಿಕ ಬಹಮನಿ ಕೋಟೆಯಲ್ಲಿ ಸುಮಾರು 282 ಮನೆಗಳಿವೆ. ಇವರೆಲ್ಲ ನೂರಾರು ವರ್ಷಗಳಿಂದ ಇಲ್ಲೇ ಇದ್ದು ತಮ್ಮ ಗೂಡು ಕಟ್ಟಿಕೊಂಡಿದ್ದಾರೆ. ಆದರೆ ಸರ್ಕಾರದ ಈ ನಿರ್ಧಾರಕ್ಕೆ ಜನ ಕಂಗಾಲಾಗಿದ್ದಾರೆ. ಮನೆಗಳನ್ನು ತೆರವುಗೊಳಿಸೋದಿಲ್ಲಾ ಎಂದು ಕೋಟೆಯಲ್ಲಿನ ನಿವಾಸಿಗಳು ಪಟ್ಟು ಹಿಡಿದಿದ್ದಾರೆ.

ಈ ಹಿಂದೆ ಕೋಟೆಯಲ್ಲಿರುವ ಅಕ್ರಮ ನಿವಾಸಿಗಳ ತೆರವಿಗೆ ಕೆಲ ಸಾರ್ವಜನಿಕರು ಹೈಕೋರ್ಟ್ ಮೆಟ್ಟಿಲೇರಿದ್ರು. ರಾಜ್ಯ ಹೈಕೋರ್ಟ್ ನಲ್ಲಿ ಪಿಐಎಲ್ ಹಾಕಿದ್ದರು. ಐತಿಹಾಸಿಕ ಸ್ಮಾರಕವಾಗಿದ್ದರಿಂದ ಅಕ್ರಮವಾಗಿ ವಾಸವಾಗಿದ್ದವರ ತೆರವುಗೊಳಿಸುವಂತೆ ಕೋರ್ಟ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ.

Published On - 11:08 am, Sun, 2 February 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us