AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನರ್ಹ ಶಾಸಕರಿಗೆ ಸ್ವಲ್ಪ ಸಿಹಿ, ಸ್ಪಲ್ಪ ಕಹಿ: ಸುಪ್ರೀಂಕೋರ್ಟ್​ ಹೇಳಿದ್ದೇನು?

ಬೆಂಗಳೂರು: ಹಲವು ದಿನಗಳಿಂದ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ಅನರ್ಹ ಶಾಸಕರ ಪ್ರಕರಣಕ್ಕೆ ಕೊನೆಗೂ ತೆರೆಬಿದ್ದಿದೆ. ಅನರ್ಹ ಶಾಸಕರಿಗೆ ಸ್ವಲ್ಪ ಸಿಹಿ, ಸ್ವಲ್ಪ ಕಹಿ ಎಂಬಂತೆ ಇಂದು ಸುಪ್ರೀಂಕೋರ್ಟ್​ನಿಂದ ತೀರ್ಪು ಬಂದಿದೆ. ಸುಪ್ರೀಂ ತೀರ್ಪಿನ ಪ್ರಮುಖ ಅಂಶಗಳು ಹೀಗಿವೆ: * ಸಂಸದೀಯ ಪ್ರಜಾಪ್ರಭುತ್ವದಲ್ಲಿ ಸರ್ಕಾರ ಮತ್ತು ವಿಪಕ್ಷಗಳಿಗೆ ತನ್ನದೇ ಆದ ಹೊಣೆಗಾರಿಕೆಗಳಿವೆ * ಸಂಸದೀಯ ವ್ಯವಸ್ಥೆಯಲ್ಲಿ ನೈತಿಕತೆ ಮುಖ್ಯವಿರೋಧ ಪಕ್ಷ, ಆಡಳಿತ ಪಕ್ಷ ಎರಡರಲ್ಲೂ ನೈತಿಕತೆ ಇರಬೇಕು * ಅನರ್ಹ ಶಾಸಕರು ಮೊದಲು ಹೈಕೋರ್ಟ್​ಗೆ ಅರ್ಜಿ […]

ಅನರ್ಹ ಶಾಸಕರಿಗೆ ಸ್ವಲ್ಪ ಸಿಹಿ, ಸ್ಪಲ್ಪ ಕಹಿ: ಸುಪ್ರೀಂಕೋರ್ಟ್​ ಹೇಳಿದ್ದೇನು?
ಸಾಧು ಶ್ರೀನಾಥ್​
|

Updated on: Nov 13, 2019 | 1:07 PM

Share

ಬೆಂಗಳೂರು: ಹಲವು ದಿನಗಳಿಂದ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ಅನರ್ಹ ಶಾಸಕರ ಪ್ರಕರಣಕ್ಕೆ ಕೊನೆಗೂ ತೆರೆಬಿದ್ದಿದೆ. ಅನರ್ಹ ಶಾಸಕರಿಗೆ ಸ್ವಲ್ಪ ಸಿಹಿ, ಸ್ವಲ್ಪ ಕಹಿ ಎಂಬಂತೆ ಇಂದು ಸುಪ್ರೀಂಕೋರ್ಟ್​ನಿಂದ ತೀರ್ಪು ಬಂದಿದೆ.

ಸುಪ್ರೀಂ ತೀರ್ಪಿನ ಪ್ರಮುಖ ಅಂಶಗಳು ಹೀಗಿವೆ: * ಸಂಸದೀಯ ಪ್ರಜಾಪ್ರಭುತ್ವದಲ್ಲಿ ಸರ್ಕಾರ ಮತ್ತು ವಿಪಕ್ಷಗಳಿಗೆ ತನ್ನದೇ ಆದ ಹೊಣೆಗಾರಿಕೆಗಳಿವೆ * ಸಂಸದೀಯ ವ್ಯವಸ್ಥೆಯಲ್ಲಿ ನೈತಿಕತೆ ಮುಖ್ಯವಿರೋಧ ಪಕ್ಷ, ಆಡಳಿತ ಪಕ್ಷ ಎರಡರಲ್ಲೂ ನೈತಿಕತೆ ಇರಬೇಕು * ಅನರ್ಹ ಶಾಸಕರು ಮೊದಲು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಬೇಕಿತ್ತು * ಅನರ್ಹ ಶಾಸಕರು ನೇರವಾಗಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಬಾರದಿತ್ತು * ಎರಡೆರಡು ವಿಚಾರಣೆ ಬೇಡ ಅಂತಾ ನಾವೇ ವಿಚಾರಣೆ ಮಾಡಿದ್ದೇವೆ * ಅನರ್ಹರು ನೇರವಾಗಿ ಸುಪ್ರೀಂಕೋರ್ಟ್​ಗೆ ಬಂದ ನಡೆಯನ್ನ ನಾವು ಸ್ವಾಗತಿಸಲ್ಲ * ಸ್ಪೀಕರ್ ಆದೇಶ ಮತ್ತು ನಡೆಯನ್ನ ನಾವು ಪರಿಶೀಲಿಸಿದ್ದೇವೆ * ಸ್ಪೀಕರ್ ಆದೇಶವನ್ನ ಭಾಗಶಃ ಎತ್ತಿ ಹಿಡಿಯುತ್ತಿದ್ದೇವೆ * 17 ಮಂದಿಯ ಅನರ್ಹತೆ ಮುಂದುವರಿಯಲಿದೆ * ಅನರ್ಹರಿಗೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಇದೆ * ಅನರ್ಹರು ಉಪಚುನಾವಣೆಗೆ ಸ್ಪರ್ಧಿಸಬಹುದು * ವಿಧಾನಸಭೆ ಅವಧಿ ಮುಗಿಯುವವರೆಗೂ ಅನರ್ಹರಲ್ಲ * ಸ್ಪೀಕರ್ ಅನರ್ಹತೆಗೆ ವಿಧಿಸಿದ್ದ ಕಾಲಾವಧಿ ಸರಿ ಇಲ್ಲ * ಸ್ಪೀಕರ್ ಅನರ್ಹತೆಗೆ ಕಾಲಾವಧಿ ನಿರ್ಧರಿಸುವಂತಿಲ್ಲ * ಅನರ್ಹ ಶಾಸಕರು ಸದ್ಯಕ್ಕೆ ಮಂತ್ರಿಯಾಗುವಂತಿಲ್ಲ * ಚುನಾವಣೆಯಲ್ಲಿ ಗೆದ್ದು ಬರೋವರೆಗೆ ಮಂತ್ರಿಯಾಗುವಂತಿಲ್ಲ * ಸರ್ಕಾರದ ಯಾವುದೇ ಹುದ್ದೆಯನ್ನ ಅನರ್ಹರು ಅಲಂಕರಿಸುವಂತಿಲ್ಲ * ಕುದುರೆ ವ್ಯಾಪಾರ ನಡೆಯಬಾರದು, ಪ್ರಜಾಪ್ರಭುತ್ವಕ್ಕೆ ಮಾರಕ * ಶಾಸಕರು ರಾಜೀನಾಮೆ ನೀಡಿದ ಬಳಿಕ ಸ್ಪೀಕರ್ ರಾಜೀನಾಮೆ ಅಂಗೀಕರಿಸಬೇಕು * ಸ್ಪೀಕರ್​ಗೆ ರಾಜೀನಾಮೆ ಅಂಗೀಕರಿಸುವುದು ಬಿಟ್ಟು ಬೇರೆ ಆಯ್ಕೆ ಇಲ್ಲ * ಅನರ್ಹತೆಗೂ ರಾಜೀನಾಮೆ ಸ್ವೀಕಾರಕ್ಕೂ ಯಾವುದೇ ಸಂಬಂಧವಿಲ್ಲ * ಸ್ಪೀಕರ್​ಗಿರುವ ಅನರ್ಹತೆಗೊಳಿಸುವ ಹಕ್ಕು ಹಾಗೆಯೇ ಇರುತ್ತದೆ * ಸ್ಪೀಕರ್ ರಾಜೀನಾಮೆ ಸ್ವಇಚ್ಛೆಯಿಂದ ನೀಡಿದ್ದಾರೆಯೇ ಇಲ್ಲವೇ ಎಂದು ಪರಿಶೀಲಿಸಬೇಕು * ಸ್ವಇಚ್ಛೆಯಿಂದ ನೀಡಿದಾಗ ಸ್ಪೀಕರ್ ರಾಜೀನಾಮೆ ಅಂಗೀಕರಿಸಬೇಕು * ಶೆಡ್ಯೂಲ್ 10ರ ಪ್ರಕಾರ ರಾಜೀನಾಮೆ ಅಥವಾ ಅನರ್ಹತೆ ಎರಡರಿಂದಲೂ ಶಾಸಕ ಸ್ಥಾನ ಖಾಲಿಯಾಗುತ್ತದೆ * ಸ್ಪೀಕರ್​ಗೆ ಸದನದ ಅವಧಿ ಮುಗಿಯುವವರೆಗೆ ಅನರ್ಹತೆಗೊಳಿಸುವ ಅಧಿಕಾರವಿಲ್ಲ * ಸ್ಪೀಕರ್​ಗಳು ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುವ ನಿದರ್ಶನಗಳು ಹೆಚ್ಚಾಗುತ್ತಿವೆ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್