AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನರ್ಹ ಶಾಸಕರಿಗೆ ಸ್ವಲ್ಪ ಸಿಹಿ, ಸ್ಪಲ್ಪ ಕಹಿ: ಸುಪ್ರೀಂಕೋರ್ಟ್​ ಹೇಳಿದ್ದೇನು?

ಬೆಂಗಳೂರು: ಹಲವು ದಿನಗಳಿಂದ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ಅನರ್ಹ ಶಾಸಕರ ಪ್ರಕರಣಕ್ಕೆ ಕೊನೆಗೂ ತೆರೆಬಿದ್ದಿದೆ. ಅನರ್ಹ ಶಾಸಕರಿಗೆ ಸ್ವಲ್ಪ ಸಿಹಿ, ಸ್ವಲ್ಪ ಕಹಿ ಎಂಬಂತೆ ಇಂದು ಸುಪ್ರೀಂಕೋರ್ಟ್​ನಿಂದ ತೀರ್ಪು ಬಂದಿದೆ. ಸುಪ್ರೀಂ ತೀರ್ಪಿನ ಪ್ರಮುಖ ಅಂಶಗಳು ಹೀಗಿವೆ: * ಸಂಸದೀಯ ಪ್ರಜಾಪ್ರಭುತ್ವದಲ್ಲಿ ಸರ್ಕಾರ ಮತ್ತು ವಿಪಕ್ಷಗಳಿಗೆ ತನ್ನದೇ ಆದ ಹೊಣೆಗಾರಿಕೆಗಳಿವೆ * ಸಂಸದೀಯ ವ್ಯವಸ್ಥೆಯಲ್ಲಿ ನೈತಿಕತೆ ಮುಖ್ಯವಿರೋಧ ಪಕ್ಷ, ಆಡಳಿತ ಪಕ್ಷ ಎರಡರಲ್ಲೂ ನೈತಿಕತೆ ಇರಬೇಕು * ಅನರ್ಹ ಶಾಸಕರು ಮೊದಲು ಹೈಕೋರ್ಟ್​ಗೆ ಅರ್ಜಿ […]

ಅನರ್ಹ ಶಾಸಕರಿಗೆ ಸ್ವಲ್ಪ ಸಿಹಿ, ಸ್ಪಲ್ಪ ಕಹಿ: ಸುಪ್ರೀಂಕೋರ್ಟ್​ ಹೇಳಿದ್ದೇನು?
ಸಾಧು ಶ್ರೀನಾಥ್​
|

Updated on: Nov 13, 2019 | 1:07 PM

Share

ಬೆಂಗಳೂರು: ಹಲವು ದಿನಗಳಿಂದ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ಅನರ್ಹ ಶಾಸಕರ ಪ್ರಕರಣಕ್ಕೆ ಕೊನೆಗೂ ತೆರೆಬಿದ್ದಿದೆ. ಅನರ್ಹ ಶಾಸಕರಿಗೆ ಸ್ವಲ್ಪ ಸಿಹಿ, ಸ್ವಲ್ಪ ಕಹಿ ಎಂಬಂತೆ ಇಂದು ಸುಪ್ರೀಂಕೋರ್ಟ್​ನಿಂದ ತೀರ್ಪು ಬಂದಿದೆ.

ಸುಪ್ರೀಂ ತೀರ್ಪಿನ ಪ್ರಮುಖ ಅಂಶಗಳು ಹೀಗಿವೆ: * ಸಂಸದೀಯ ಪ್ರಜಾಪ್ರಭುತ್ವದಲ್ಲಿ ಸರ್ಕಾರ ಮತ್ತು ವಿಪಕ್ಷಗಳಿಗೆ ತನ್ನದೇ ಆದ ಹೊಣೆಗಾರಿಕೆಗಳಿವೆ * ಸಂಸದೀಯ ವ್ಯವಸ್ಥೆಯಲ್ಲಿ ನೈತಿಕತೆ ಮುಖ್ಯವಿರೋಧ ಪಕ್ಷ, ಆಡಳಿತ ಪಕ್ಷ ಎರಡರಲ್ಲೂ ನೈತಿಕತೆ ಇರಬೇಕು * ಅನರ್ಹ ಶಾಸಕರು ಮೊದಲು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಬೇಕಿತ್ತು * ಅನರ್ಹ ಶಾಸಕರು ನೇರವಾಗಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಬಾರದಿತ್ತು * ಎರಡೆರಡು ವಿಚಾರಣೆ ಬೇಡ ಅಂತಾ ನಾವೇ ವಿಚಾರಣೆ ಮಾಡಿದ್ದೇವೆ * ಅನರ್ಹರು ನೇರವಾಗಿ ಸುಪ್ರೀಂಕೋರ್ಟ್​ಗೆ ಬಂದ ನಡೆಯನ್ನ ನಾವು ಸ್ವಾಗತಿಸಲ್ಲ * ಸ್ಪೀಕರ್ ಆದೇಶ ಮತ್ತು ನಡೆಯನ್ನ ನಾವು ಪರಿಶೀಲಿಸಿದ್ದೇವೆ * ಸ್ಪೀಕರ್ ಆದೇಶವನ್ನ ಭಾಗಶಃ ಎತ್ತಿ ಹಿಡಿಯುತ್ತಿದ್ದೇವೆ * 17 ಮಂದಿಯ ಅನರ್ಹತೆ ಮುಂದುವರಿಯಲಿದೆ * ಅನರ್ಹರಿಗೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಇದೆ * ಅನರ್ಹರು ಉಪಚುನಾವಣೆಗೆ ಸ್ಪರ್ಧಿಸಬಹುದು * ವಿಧಾನಸಭೆ ಅವಧಿ ಮುಗಿಯುವವರೆಗೂ ಅನರ್ಹರಲ್ಲ * ಸ್ಪೀಕರ್ ಅನರ್ಹತೆಗೆ ವಿಧಿಸಿದ್ದ ಕಾಲಾವಧಿ ಸರಿ ಇಲ್ಲ * ಸ್ಪೀಕರ್ ಅನರ್ಹತೆಗೆ ಕಾಲಾವಧಿ ನಿರ್ಧರಿಸುವಂತಿಲ್ಲ * ಅನರ್ಹ ಶಾಸಕರು ಸದ್ಯಕ್ಕೆ ಮಂತ್ರಿಯಾಗುವಂತಿಲ್ಲ * ಚುನಾವಣೆಯಲ್ಲಿ ಗೆದ್ದು ಬರೋವರೆಗೆ ಮಂತ್ರಿಯಾಗುವಂತಿಲ್ಲ * ಸರ್ಕಾರದ ಯಾವುದೇ ಹುದ್ದೆಯನ್ನ ಅನರ್ಹರು ಅಲಂಕರಿಸುವಂತಿಲ್ಲ * ಕುದುರೆ ವ್ಯಾಪಾರ ನಡೆಯಬಾರದು, ಪ್ರಜಾಪ್ರಭುತ್ವಕ್ಕೆ ಮಾರಕ * ಶಾಸಕರು ರಾಜೀನಾಮೆ ನೀಡಿದ ಬಳಿಕ ಸ್ಪೀಕರ್ ರಾಜೀನಾಮೆ ಅಂಗೀಕರಿಸಬೇಕು * ಸ್ಪೀಕರ್​ಗೆ ರಾಜೀನಾಮೆ ಅಂಗೀಕರಿಸುವುದು ಬಿಟ್ಟು ಬೇರೆ ಆಯ್ಕೆ ಇಲ್ಲ * ಅನರ್ಹತೆಗೂ ರಾಜೀನಾಮೆ ಸ್ವೀಕಾರಕ್ಕೂ ಯಾವುದೇ ಸಂಬಂಧವಿಲ್ಲ * ಸ್ಪೀಕರ್​ಗಿರುವ ಅನರ್ಹತೆಗೊಳಿಸುವ ಹಕ್ಕು ಹಾಗೆಯೇ ಇರುತ್ತದೆ * ಸ್ಪೀಕರ್ ರಾಜೀನಾಮೆ ಸ್ವಇಚ್ಛೆಯಿಂದ ನೀಡಿದ್ದಾರೆಯೇ ಇಲ್ಲವೇ ಎಂದು ಪರಿಶೀಲಿಸಬೇಕು * ಸ್ವಇಚ್ಛೆಯಿಂದ ನೀಡಿದಾಗ ಸ್ಪೀಕರ್ ರಾಜೀನಾಮೆ ಅಂಗೀಕರಿಸಬೇಕು * ಶೆಡ್ಯೂಲ್ 10ರ ಪ್ರಕಾರ ರಾಜೀನಾಮೆ ಅಥವಾ ಅನರ್ಹತೆ ಎರಡರಿಂದಲೂ ಶಾಸಕ ಸ್ಥಾನ ಖಾಲಿಯಾಗುತ್ತದೆ * ಸ್ಪೀಕರ್​ಗೆ ಸದನದ ಅವಧಿ ಮುಗಿಯುವವರೆಗೆ ಅನರ್ಹತೆಗೊಳಿಸುವ ಅಧಿಕಾರವಿಲ್ಲ * ಸ್ಪೀಕರ್​ಗಳು ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುವ ನಿದರ್ಶನಗಳು ಹೆಚ್ಚಾಗುತ್ತಿವೆ

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!