ಅನರ್ಹ ಶಾಸಕರಿಗೆ ಸ್ವಲ್ಪ ಸಿಹಿ, ಸ್ಪಲ್ಪ ಕಹಿ: ಸುಪ್ರೀಂಕೋರ್ಟ್​ ಹೇಳಿದ್ದೇನು?

ಬೆಂಗಳೂರು: ಹಲವು ದಿನಗಳಿಂದ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ಅನರ್ಹ ಶಾಸಕರ ಪ್ರಕರಣಕ್ಕೆ ಕೊನೆಗೂ ತೆರೆಬಿದ್ದಿದೆ. ಅನರ್ಹ ಶಾಸಕರಿಗೆ ಸ್ವಲ್ಪ ಸಿಹಿ, ಸ್ವಲ್ಪ ಕಹಿ ಎಂಬಂತೆ ಇಂದು ಸುಪ್ರೀಂಕೋರ್ಟ್​ನಿಂದ ತೀರ್ಪು ಬಂದಿದೆ. ಸುಪ್ರೀಂ ತೀರ್ಪಿನ ಪ್ರಮುಖ ಅಂಶಗಳು ಹೀಗಿವೆ: * ಸಂಸದೀಯ ಪ್ರಜಾಪ್ರಭುತ್ವದಲ್ಲಿ ಸರ್ಕಾರ ಮತ್ತು ವಿಪಕ್ಷಗಳಿಗೆ ತನ್ನದೇ ಆದ ಹೊಣೆಗಾರಿಕೆಗಳಿವೆ * ಸಂಸದೀಯ ವ್ಯವಸ್ಥೆಯಲ್ಲಿ ನೈತಿಕತೆ ಮುಖ್ಯವಿರೋಧ ಪಕ್ಷ, ಆಡಳಿತ ಪಕ್ಷ ಎರಡರಲ್ಲೂ ನೈತಿಕತೆ ಇರಬೇಕು * ಅನರ್ಹ ಶಾಸಕರು ಮೊದಲು ಹೈಕೋರ್ಟ್​ಗೆ ಅರ್ಜಿ […]

ಅನರ್ಹ ಶಾಸಕರಿಗೆ ಸ್ವಲ್ಪ ಸಿಹಿ, ಸ್ಪಲ್ಪ ಕಹಿ: ಸುಪ್ರೀಂಕೋರ್ಟ್​ ಹೇಳಿದ್ದೇನು?
ಸಾಧು ಶ್ರೀನಾಥ್​

Updated on: Nov 13, 2019 | 1:07 PM

ಬೆಂಗಳೂರು: ಹಲವು ದಿನಗಳಿಂದ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ಅನರ್ಹ ಶಾಸಕರ ಪ್ರಕರಣಕ್ಕೆ ಕೊನೆಗೂ ತೆರೆಬಿದ್ದಿದೆ. ಅನರ್ಹ ಶಾಸಕರಿಗೆ ಸ್ವಲ್ಪ ಸಿಹಿ, ಸ್ವಲ್ಪ ಕಹಿ ಎಂಬಂತೆ ಇಂದು ಸುಪ್ರೀಂಕೋರ್ಟ್​ನಿಂದ ತೀರ್ಪು ಬಂದಿದೆ.

ಸುಪ್ರೀಂ ತೀರ್ಪಿನ ಪ್ರಮುಖ ಅಂಶಗಳು ಹೀಗಿವೆ:
* ಸಂಸದೀಯ ಪ್ರಜಾಪ್ರಭುತ್ವದಲ್ಲಿ ಸರ್ಕಾರ ಮತ್ತು ವಿಪಕ್ಷಗಳಿಗೆ ತನ್ನದೇ ಆದ ಹೊಣೆಗಾರಿಕೆಗಳಿವೆ
* ಸಂಸದೀಯ ವ್ಯವಸ್ಥೆಯಲ್ಲಿ ನೈತಿಕತೆ ಮುಖ್ಯವಿರೋಧ ಪಕ್ಷ, ಆಡಳಿತ ಪಕ್ಷ ಎರಡರಲ್ಲೂ ನೈತಿಕತೆ ಇರಬೇಕು
* ಅನರ್ಹ ಶಾಸಕರು ಮೊದಲು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಬೇಕಿತ್ತು
* ಅನರ್ಹ ಶಾಸಕರು ನೇರವಾಗಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಬಾರದಿತ್ತು
* ಎರಡೆರಡು ವಿಚಾರಣೆ ಬೇಡ ಅಂತಾ ನಾವೇ ವಿಚಾರಣೆ ಮಾಡಿದ್ದೇವೆ
* ಅನರ್ಹರು ನೇರವಾಗಿ ಸುಪ್ರೀಂಕೋರ್ಟ್​ಗೆ ಬಂದ ನಡೆಯನ್ನ ನಾವು ಸ್ವಾಗತಿಸಲ್ಲ
* ಸ್ಪೀಕರ್ ಆದೇಶ ಮತ್ತು ನಡೆಯನ್ನ ನಾವು ಪರಿಶೀಲಿಸಿದ್ದೇವೆ
* ಸ್ಪೀಕರ್ ಆದೇಶವನ್ನ ಭಾಗಶಃ ಎತ್ತಿ ಹಿಡಿಯುತ್ತಿದ್ದೇವೆ
* 17 ಮಂದಿಯ ಅನರ್ಹತೆ ಮುಂದುವರಿಯಲಿದೆ
* ಅನರ್ಹರಿಗೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಇದೆ
* ಅನರ್ಹರು ಉಪಚುನಾವಣೆಗೆ ಸ್ಪರ್ಧಿಸಬಹುದು
* ವಿಧಾನಸಭೆ ಅವಧಿ ಮುಗಿಯುವವರೆಗೂ ಅನರ್ಹರಲ್ಲ
* ಸ್ಪೀಕರ್ ಅನರ್ಹತೆಗೆ ವಿಧಿಸಿದ್ದ ಕಾಲಾವಧಿ ಸರಿ ಇಲ್ಲ
* ಸ್ಪೀಕರ್ ಅನರ್ಹತೆಗೆ ಕಾಲಾವಧಿ ನಿರ್ಧರಿಸುವಂತಿಲ್ಲ
* ಅನರ್ಹ ಶಾಸಕರು ಸದ್ಯಕ್ಕೆ ಮಂತ್ರಿಯಾಗುವಂತಿಲ್ಲ
* ಚುನಾವಣೆಯಲ್ಲಿ ಗೆದ್ದು ಬರೋವರೆಗೆ ಮಂತ್ರಿಯಾಗುವಂತಿಲ್ಲ
* ಸರ್ಕಾರದ ಯಾವುದೇ ಹುದ್ದೆಯನ್ನ ಅನರ್ಹರು ಅಲಂಕರಿಸುವಂತಿಲ್ಲ
* ಕುದುರೆ ವ್ಯಾಪಾರ ನಡೆಯಬಾರದು, ಪ್ರಜಾಪ್ರಭುತ್ವಕ್ಕೆ ಮಾರಕ
* ಶಾಸಕರು ರಾಜೀನಾಮೆ ನೀಡಿದ ಬಳಿಕ ಸ್ಪೀಕರ್ ರಾಜೀನಾಮೆ ಅಂಗೀಕರಿಸಬೇಕು
* ಸ್ಪೀಕರ್​ಗೆ ರಾಜೀನಾಮೆ ಅಂಗೀಕರಿಸುವುದು ಬಿಟ್ಟು ಬೇರೆ ಆಯ್ಕೆ ಇಲ್ಲ
* ಅನರ್ಹತೆಗೂ ರಾಜೀನಾಮೆ ಸ್ವೀಕಾರಕ್ಕೂ ಯಾವುದೇ ಸಂಬಂಧವಿಲ್ಲ
* ಸ್ಪೀಕರ್​ಗಿರುವ ಅನರ್ಹತೆಗೊಳಿಸುವ ಹಕ್ಕು ಹಾಗೆಯೇ ಇರುತ್ತದೆ
* ಸ್ಪೀಕರ್ ರಾಜೀನಾಮೆ ಸ್ವಇಚ್ಛೆಯಿಂದ ನೀಡಿದ್ದಾರೆಯೇ ಇಲ್ಲವೇ ಎಂದು ಪರಿಶೀಲಿಸಬೇಕು
* ಸ್ವಇಚ್ಛೆಯಿಂದ ನೀಡಿದಾಗ ಸ್ಪೀಕರ್ ರಾಜೀನಾಮೆ ಅಂಗೀಕರಿಸಬೇಕು
* ಶೆಡ್ಯೂಲ್ 10ರ ಪ್ರಕಾರ ರಾಜೀನಾಮೆ ಅಥವಾ ಅನರ್ಹತೆ ಎರಡರಿಂದಲೂ ಶಾಸಕ ಸ್ಥಾನ ಖಾಲಿಯಾಗುತ್ತದೆ
* ಸ್ಪೀಕರ್​ಗೆ ಸದನದ ಅವಧಿ ಮುಗಿಯುವವರೆಗೆ ಅನರ್ಹತೆಗೊಳಿಸುವ ಅಧಿಕಾರವಿಲ್ಲ
* ಸ್ಪೀಕರ್​ಗಳು ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುವ ನಿದರ್ಶನಗಳು ಹೆಚ್ಚಾಗುತ್ತಿವೆ

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us