AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chitradurga highway: ಅಪಘಾತಗಳ ತವರು ಚಿತ್ರದುರ್ಗದ ಸುತ್ತಮುತ್ತ ಹೆದ್ದಾರಿಗಳೇ ಹೆಮ್ಮಾರಿಗಳು, ಅಧಿಕಾರಿಗಳು ಕಣ್ಮುಚ್ಚಿ ಕುಳಿತಿರುವುದೂ ಇದಕ್ಕೆ ಕಾರಣವಾಗಿದೆ!

ಚಿತ್ರದುರ್ಗ ನಗರ ಬಳಿಯಲ್ಲೇ ನಿತ್ಯ ಅಪಘಾತಗಳಿಂದ ಸಾವು ನೋವು ಸಂಭವಿಸುತ್ತಿವೆ. ವಿದ್ಯಾರ್ಥಿಗಳು, ಕಾರ್ಮಿಕರು, ರೈತರು, ಪ್ರಯಾಣಿಕರು ಸೇರಿದಂತೆ ಅನೇಕರು ಹೇ ವೇ ಗೆ ಬಲಿ ಆಗುತ್ತಿದ್ದಾರೆ.

Chitradurga highway: ಅಪಘಾತಗಳ ತವರು ಚಿತ್ರದುರ್ಗದ ಸುತ್ತಮುತ್ತ ಹೆದ್ದಾರಿಗಳೇ ಹೆಮ್ಮಾರಿಗಳು, ಅಧಿಕಾರಿಗಳು ಕಣ್ಮುಚ್ಚಿ ಕುಳಿತಿರುವುದೂ ಇದಕ್ಕೆ ಕಾರಣವಾಗಿದೆ!
ಅಪಘಾತಗಳ ತವರು ಚಿತ್ರದುರ್ಗದ ಸುತ್ತಮುತ್ತ ಹೆದ್ದಾರಿಗಳೇ ಹೆಮ್ಮಾರಿಗಳು
TV9 Web
| Updated By: ಸಾಧು ಶ್ರೀನಾಥ್​|

Updated on:Dec 31, 2022 | 2:18 PM

Share

ಕೋಟೆನಾಡು ಚಿತ್ರದುರ್ಗ ನಗರ (chitradurga) ಹೆದ್ದಾರಿಗಳ ನಗರಿಯೂ ಹೌದು. ಆದ್ರೆ, ಅವೈಜ್ಞಾನಿಕ ಹೆದ್ದಾರಿಗಳು (highway) ಹೆಮ್ಮಾರಿಗಳಾಗಿ ಜನರ ಪ್ರಾಣ ಹಿಂಡುತ್ತಿವೆ. ಆದ್ರೆ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮಾತ್ರ ಕಣ್ಮುಚ್ಚಿ ಕುಳಿತಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತು ವರದಿ ಇಲ್ಲಿದೆ. ಸೂಕ್ತ ಸರ್ವೀಸ್ ರಸ್ತೆ, ಮಾರ್ಗ ಫಲಕಗಳಿಲ್ಲದ ಹೆದ್ದಾರಿ. ಅವೈಜ್ಞಾನಿಕ ಹೆದ್ದಾರಿ ನಿರ್ಮಾಣದಿಂದ ನಿತ್ಯ ಅಪಘಾತ (accident). ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಜನರ ಹಿಡಿಶಾಪ. ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ (A Narayanaswamy). ಈ ದೃಶ್ಯಗಳು ಕಂಡು ಬಂದಿದ್ದು ಚಿತ್ರದುರ್ಗದಲ್ಲಿ.

ಹೌದು, ರಾಷ್ಟ್ರೀಯ ಹೆದ್ದಾರಿ 4 ಮತ್ತು ರಾಷ್ಟ್ರೀಯ ಹೆದ್ದಾರಿ 13 ಚಿತ್ರದುರ್ಗ ನಗರವನ್ನು ಹಾದು ಹೋಗುತ್ತವೆ. ಇತ್ತೀಚೆಗೆ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಬೈಪಾಸ್ ರಸ್ತೆ ನಿರ್ಮಿಸಲಾಗಿದೆ. ಮತ್ತೊಂದು ಕಡೆ ರಾಷ್ಟ್ರೀಯ ಹೆದ್ದಾರಿ 13ರ ಅಭಿವೃದ್ಧಿ ಕಾಮಗಾರಿಯೂ ನಡೆದಿದೆ. ಆದ್ರೆ, ಬಹುತೇಕ ಕಡೆ ಸಮರ್ಪಕ ಸರ್ವೀಸ್ ರಸ್ತೆಗಳು ನಿರ್ಮಾಣ ಆಗಿಲ್ಲ. ಅನೇಕ ಕಡೆ ಮಾರ್ಗಸೂಚಿ ಫಲಕಗಳನ್ನೂ ಹಾಕಲಾಗಿಲ್ಲ. ವೇಗ ನಿಯಂತ್ರಣಕ್ಕೆ, ಅಪಘಾತ ತಡೆಗೆ ಯಾವುದೇ ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ!

highway dangers in chitradurga union minister A Narayanaswamy instructs officers to rectify

ಹೀಗಾಗಿ, ಚಿತ್ರದುರ್ಗ ನಗರ ಬಳಿಯಲ್ಲೇ ನಿತ್ಯ ಅಪಘಾತಗಳಿಂದ ಸಾವು ನೋವು ಸಂಭವಿಸುತ್ತಿವೆ. ವಿದ್ಯಾರ್ಥಿಗಳು, ಕಾರ್ಮಿಕರು, ರೈತರು, ಪ್ರಯಾಣಿಕರು ಸೇರಿದಂತೆ ಅನೇಕರು ಹೇ ವೇ ಗೆ ಬಲಿ ಆಗುತ್ತಿದ್ದಾರೆ. ಪ್ರತಿದಿನ ಒಂದಲ್ಲಾ ಒಂದು ಕಡೆ ಹೈವೇ ಅಪಘಾತದಲ್ಲಿ ಜನರು ಬಲಿ ಆಗುತ್ತಿದ್ದು ಡೇಂಜರ್ ಹೈ ವೇ ಯಿಂದ ಜನರಲ್ಲಿ ಆತಂಕ ಮೂಡಿದೆ ಎಂದು ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎನ್ನುತ್ತಾರೆ ನಗರಾಭಿವೃದ್ಧಿ ಪ್ರಾಧಿಕಾರದ ಬಿ.ಟಿ. ಜಗದೀಶ್ ಅವರು.

ಇನ್ನು ಚಿತ್ರದುರ್ಗ ಸಂಸದ, ಕೇಂದ್ರ ಸಚಿವ ಎ. ನಾರಾಯಣ ಸ್ವಾಮಿ ನೇತೃತ್ವದಲ್ಲಿ ನಡೆದ ದಿಶಾ ಮೀಟಿಂಗ್ ನಲ್ಲಿ (ಕೇಂದ್ರ ಪುರಸ್ಕೃತ ಯೋಜನೆಗಳ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಭೆ) ಅವೈಜ್ಞಾನಿಕ ಹೆದ್ದಾರಿಯಿಂದ ಆಗುತ್ತಿರುವ ಅನಾಹುತಗಳ ಬಗ್ಗೆ ಗಂಭೀರ ಚರ್ಚೆ ನಡೆದಿದೆ. ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸಚಿವ ನಾರಾಯಣಸ್ವಾಮಿ ತರಾಟೆಗೆ ತೆಗೆದುಕೊಂಡ ಪ್ರಸಂಗವೂ ನಡೆದಿದೆ. ತಕ್ಷಣವೇ ಹೈವೇಯಲ್ಲಿ ಬ್ಲಾಕ್ ಸ್ಪಾಟ್ಸ್ ಗುರುತಿಸುವುದು. ಸರ್ವೀಸ್ ರಸ್ತೆ ನಿರ್ಮಾಣ ಮಾಡಿ ಅಪಘಾತ ತಡೆಗೆ ಕ್ರಮ ಕೈಗೊಳ್ಳುವಂತೆ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ತಾಕೀತು ಮಾಡಿದ್ದಾರೆ.

highway dangers in chitradurga union minister A Narayanaswamy instructs officers to rectify

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗ ನಗರ ಬಳಿ ಅವೈಜ್ಞಾನಿಕ ಹೆದ್ದಾರಿ ನಿರ್ಮಾಣದಿಂದ ನಿರಂತರ ಅಪಘಾತಗಳು ಸಂಭವಿಸುತ್ತಿದ್ದು ಜನರು ಪ್ರಾಣ ಕಳೆದುಕೊಳ್ಳುವಂತಾಗಿದೆ. ಹೀಗಾಗಿ, ಜನರು ಹಿಡಿಶಾಪ ಹಾಕುತ್ತಿದ್ದು ಸದ್ಯ ಕೇಂದ್ರ ಸಚಿವ ನಾರಾಯಣಸ್ವಾಮಿ ಹೈವೇ ಪ್ರಾಧಿಕಾರದ ಅಧಿಕಾರಿಗಳಿಗೆ ಅಪಘಾತ ತಡೆಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಇನ್ನಾದ್ರೂ ಹೆದ್ದಾರಿ ಪ್ರಾಧಿಕಾರ, ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಅಪಘಾತ ತಡೆಗೆ ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಜನರ ಪ್ರಾಣ ರಕ್ಷಸಿಬೇಕಿದೆ.

ವರದಿ: ಬಸವರಾಜ ಮುದನೂರ್, ಟಿವಿ 9, ಚಿತ್ರದುರ್ಗ 

Published On - 2:17 pm, Sat, 31 December 22

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!