AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋಸ ಮಾಡಿದ್ದ ಕಂಪನಿಯಿಂದಲೇ ಮತ್ತೆ ಮೋಸದ ಸಂಚು.. ವಂಚನೆಗೊಳಗಾಗಿದ್ದವರಿಂದಲೇ SPಗೆ ದೂರು

Another Fraud by Same Company | ಈ ಹಿಂದೆ ಹಿಂದೂಸ್ಥಾನ್ ಇನ್ಫ್ರಾಕಾನ್ ಇಂಡಿಯಾ ಕಂಪನಿಯಿಂದ ಲಕ್ಷಾಂತರ ಜನರಿಗೆ ಮೋಸ ಆಗಿತ್ತು. ಈಗ ಅದೇ ಕಂಪನಿಯ ವಂಚಕರಿಂದ ಮತ್ತೆ ಹೊಸ ಕಂಪನಿ ಹೆಸರಿನಲ್ಲಿ ಜನರಿಗೆ ಮೋಸಕ್ಕೆ ಸಂಚು ರೂಪಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಮೋಸ ಮಾಡಿದ್ದ ಕಂಪನಿಯಿಂದಲೇ ಮತ್ತೆ ಮೋಸದ ಸಂಚು.. ವಂಚನೆಗೊಳಗಾಗಿದ್ದವರಿಂದಲೇ SPಗೆ ದೂರು
ಸಂಗ್ರಹ ಚಿತ್ರ
ಆಯೇಷಾ ಬಾನು
|

Updated on: Feb 12, 2021 | 1:45 PM

Share

ಹಾಸನ: ಈ ಹಿಂದೆ ಹಿಂದೂಸ್ಥಾನ್ ಇನ್ಫ್ರಾಕಾನ್ ಇಂಡಿಯಾ ಕಂಪನಿಯಿಂದ ಲಕ್ಷಾಂತರ ಜನರಿಗೆ ಮೋಸ ಆಗಿತ್ತು. ಈಗ ಅದೇ ಕಂಪನಿಯ ವಂಚಕರಿಂದ ಮತ್ತೆ ಹೊಸ ಕಂಪನಿ ಹೆಸರಿನಲ್ಲಿ ಜನರಿಗೆ ಮೋಸಕ್ಕೆ ಸಂಚು ರೂಪಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಹಾಸನ ಎಸ್‌ಪಿಗೆ ವಂಚನೆಗೊಳಗಾಗಿದ್ದವರಿಂದ ದೂರು ದಾಖಲಾಗಿದೆ.2010 ರಲ್ಲಿ ಸ್ಥಾಪನೆಯಾದ ಹಿಂದೂಸ್ಥಾನ್ ಇನ್ಫ್ರಾಕಾನ್ ಇಂಡಿಯಾ ಕಂಪನಿ ರಾಜ್ಯದ ಸುಮಾರು 7 ಲಕ್ಷ ಗ್ರಾಹಕರಿಗೆ 700 ಕೋಟಿ ವಂಚನೆ ಮಾಡಿತ್ತು.

ಹಾಸನ ಜಿಲ್ಲೆಯೊಂದರಲ್ಲೇ 50 ಸಾವಿರ ಜನರಿಂದ 30ಕೋಟಿಯಷ್ಟು ಹಣ ವಂಚನೆ ಮಾಡಲಾಗಿತ್ತು ಎಂಬ ಬಗ್ಗೆ ದೂರು ದಾಖಲಾಗಿದೆ. ಈಗ ಅದೇ ಕಂಪನಿ ವಂಚಕರು ಹೊಸ ಕಂಪನಿ ಹೆಸರಿನಲ್ಲಿ ಮತ್ತೆ ವಂಚನೆಗೆ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಆದಷ್ಟು ಬೇಗ ವಂಚಕ ಲಕ್ಷ್ಮಿ ನಾರಾಯಣ ಮತ್ತು ತಂಡದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಜನರು ಹಾಸನ SP ಮೊರೆ ಹೋಗಿದ್ದಾರೆ. ಇದಕ್ಕೆ ಸಂಬಂಧ ಪಟ್ಟ ಎಲ್ಲ ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ ಹಾಗೂ ವಂಚನೆಗೊಳಗಾದವರಿಗೆ ಪರಿಹಾರ ಕೊಡಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ಇನ್ನು ಹಿಂದೂಸ್ಥಾನ್ ಇನ್ಫ್ರಾಕಾನ್ ಇಂಡಿಯಾ ಕಂಪನಿ ಹೆಸರಿನಲ್ಲಿ ಮೋಸ ಮಾಡಿದ್ದ ಹಳೆ ತಂಡ ಈಗ LKN ಎಂಬ ಹೊಸ ಹೆಸರಿನಲ್ಲಿ ಹಾಸನಲ್ಲಿ ಸಭೆ ನಡೆಸಿದೆ. ಈ ಹಿಂದೆ ವಂಚನೆ ಮಾಡಿ ಹಣ ಕಬಳಿಸಿದ್ದ ಹಣವನ್ನೇ ಜನರಿಗೆ ನೀಡದೆ ಇದೀಗ ಹೊಸ ಪ್ಲಾನ್​ನೊಂದಿಗೆ ಮತ್ತೆ ಮೋಸ ಮಾಡಲು ಈ ತಂಡ ಸಜ್ಜಾಗಿದೆ. ಹಾಗಾಗಿ ಮತ್ತೊಮ್ಮೆ ಈ ಕಂಪನಿಯಿಂದ ಜನರಿಗೆ ಮೋಸ ಆಗುವ ಮೊದಲು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಬೇಕಿದೆ.

ಇದನ್ನೂ ಓದಿ: ಅಜ್ಮೀರಾ ಕಂಪನಿಯಿಂದ ಬಹುಕೋಟಿ ವಂಚನೆ ಪ್ರಕರಣ: 8.41 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ED

ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?