ವಿಜಯನಗರ ಜಿಲ್ಲೆ ಸ್ಥಾಪನೆ: ಸಚಿವ ಆನಂದ್ ಸಿಂಗ್ ಕೊಟ್ಟ ಗುಡ್ ನ್ಯೂಸ್ ಏನು?
ಬೆಂಗಳೂರು: ಹಿಂದೂ ಸಾಮ್ರಾಜ್ಯವಾಗಿದ್ದ ವಿಜಯನಗರ ಕ್ಷೇತ್ರವನ್ನು ಮಾದರಿ ಜಿಲ್ಲೆಯಾಗಿ ಮಾಡಬೇಕೆಂಬ ಅದಮ್ಯ ತುಡಿತ ಅಲ್ಲಿನ ಜನ, ಜನಪ್ರತಿನಿಧಿಗಳ ಬಹುದಿನದ ಕನಸು. ಅದೀಗ ಕೈಗೂಡುವ ಕಾಲ ಸಮೀಪಿಸಿದೆ. ಐತಿಹಾಸಿಕ ತೀರ್ಮಾನವಾಗಿದೆ ವಿಜಯನಗರ ಜಿಲ್ಲೆಯಾಗಬೇಕೆಂಬ ಬಹುದಿನದ ಬೇಡಿಕೆಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಅನೌಪಚಾರಿಕ ಒಪ್ಪಿಗೆ ದೊರೆತಿದೆ. ಇದರಿಂದ ಐತಿಹಾಸಿಕ ತೀರ್ಮಾನ ಮಾಡಿದಂತಾಗಿದೆ ಎಂದು ಬೆಂಗಳೂರಿನಲ್ಲಿ ಅರಣ್ಯ ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ. ಬಳ್ಳಾರಿ ಪಶ್ಚಿಮ ಭಾಗದ ತಾಲೂಕುಗಳನ್ನೊಳಗೊಂಡ ಈ ನೂತನ ಜಿಲ್ಲೆ ರಚನೆ […]

ಬೆಂಗಳೂರು: ಹಿಂದೂ ಸಾಮ್ರಾಜ್ಯವಾಗಿದ್ದ ವಿಜಯನಗರ ಕ್ಷೇತ್ರವನ್ನು ಮಾದರಿ ಜಿಲ್ಲೆಯಾಗಿ ಮಾಡಬೇಕೆಂಬ ಅದಮ್ಯ ತುಡಿತ ಅಲ್ಲಿನ ಜನ, ಜನಪ್ರತಿನಿಧಿಗಳ ಬಹುದಿನದ ಕನಸು. ಅದೀಗ ಕೈಗೂಡುವ ಕಾಲ ಸಮೀಪಿಸಿದೆ.
ಐತಿಹಾಸಿಕ ತೀರ್ಮಾನವಾಗಿದೆ
ವಿಜಯನಗರ ಜಿಲ್ಲೆಯಾಗಬೇಕೆಂಬ ಬಹುದಿನದ ಬೇಡಿಕೆಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಅನೌಪಚಾರಿಕ ಒಪ್ಪಿಗೆ ದೊರೆತಿದೆ. ಇದರಿಂದ ಐತಿಹಾಸಿಕ ತೀರ್ಮಾನ ಮಾಡಿದಂತಾಗಿದೆ ಎಂದು ಬೆಂಗಳೂರಿನಲ್ಲಿ ಅರಣ್ಯ ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ. ಬಳ್ಳಾರಿ ಪಶ್ಚಿಮ ಭಾಗದ ತಾಲೂಕುಗಳನ್ನೊಳಗೊಂಡ ಈ ನೂತನ ಜಿಲ್ಲೆ ರಚನೆ ಮಾಡಬೇಕೆಂಬ ದೀರ್ಘಕಾಲದ ಬೇಡಿಕೆ ಈಡೇರಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.