ಹೊಳೆಬಸವೇಶ್ವರ ದೇವಸ್ಥಾನಕ್ಕೆ ಜಲದಿಗ್ಬಂಧನ: 7 ದಿನಗಳಿಂದ ಭಕ್ತರಿಗಿಲ್ಲ ದರ್ಶನ ಭಾಗ್ಯ

ಬಾಗಲಕೋಟೆ: ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಿನ್ನೆಲೆಯಲ್ಲಿ ಘಟಪ್ರಭಾ ನದಿ ತುಂಬಿ ಹರಿಯುತ್ತಿದೆ. ಈ ಪರಿಣಾಮ ಹೊಳೆಬಸವೇಶ್ವರ ದೇವಸ್ಥಾನ ಜಲಾವೃತಗೊಂಡಿದೆ. ಕಳೆದ ಒಂದು ವಾರದಿಂದ ಇದೇ ಪರಿಸ್ಥಿತಿ ಇದ್ದು, ಭಕ್ತರಿಗೆ ದೇವರ ದರ್ಶನ ಭಾಗ್ಯ ಸಿಕ್ಕಿಲ್ಲ. ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಮಾಚಕನೂರು ಗ್ರಾಮದ ಬಳಿ ಇರುವ ಪ್ರಸಿದ್ಧ ಹೊಳೆಬಸವೇಶ್ವರ ದೇವಸ್ಥಾನದೊಳಗೆ ಆರು ಅಡಿಯಷ್ಟು ನೀರು ಆವರಿಸಿದೆ. ಇಂದಿಗೂ ನೀರು ಕಡಿಮೆಯಾಗದ ಕಾರಣ ಜನರಲ್ಲಿ ಆತಂಕ ಹೆಚ್ಚಿದೆ. ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಮನೆ, ಗದ್ದೆ ಎಲ್ಲವೂ ಮುಳುಗಿದೆ. […]

ಹೊಳೆಬಸವೇಶ್ವರ ದೇವಸ್ಥಾನಕ್ಕೆ ಜಲದಿಗ್ಬಂಧನ: 7 ದಿನಗಳಿಂದ ಭಕ್ತರಿಗಿಲ್ಲ ದರ್ಶನ ಭಾಗ್ಯ
ಆಯೇಷಾ ಬಾನು Edited By: ಸಾಧು ಶ್ರೀನಾಥ್​

Updated on: Oct 15, 2020 | 9:59 AM

ಬಾಗಲಕೋಟೆ: ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಿನ್ನೆಲೆಯಲ್ಲಿ ಘಟಪ್ರಭಾ ನದಿ ತುಂಬಿ ಹರಿಯುತ್ತಿದೆ. ಈ ಪರಿಣಾಮ ಹೊಳೆಬಸವೇಶ್ವರ ದೇವಸ್ಥಾನ ಜಲಾವೃತಗೊಂಡಿದೆ. ಕಳೆದ ಒಂದು ವಾರದಿಂದ ಇದೇ ಪರಿಸ್ಥಿತಿ ಇದ್ದು, ಭಕ್ತರಿಗೆ ದೇವರ ದರ್ಶನ ಭಾಗ್ಯ ಸಿಕ್ಕಿಲ್ಲ.

ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಮಾಚಕನೂರು ಗ್ರಾಮದ ಬಳಿ ಇರುವ ಪ್ರಸಿದ್ಧ ಹೊಳೆಬಸವೇಶ್ವರ ದೇವಸ್ಥಾನದೊಳಗೆ ಆರು ಅಡಿಯಷ್ಟು ನೀರು ಆವರಿಸಿದೆ. ಇಂದಿಗೂ ನೀರು ಕಡಿಮೆಯಾಗದ ಕಾರಣ ಜನರಲ್ಲಿ ಆತಂಕ ಹೆಚ್ಚಿದೆ. ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಮನೆ, ಗದ್ದೆ ಎಲ್ಲವೂ ಮುಳುಗಿದೆ. ಸೇತುವೆಗಳು ಸಂಚಾರಕ್ಕೆ ಸೂಕ್ತವಲ್ಲದಂತಾಗಿವೆ. ರಸ್ತೆಗಳು ಕರೆಯಂತಾಗಿವೆ. ವರುಣನ ಆರ್ಭಟದಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ.

Published On - 9:08 am, Thu, 15 October 20

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us