AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಕ್ ಟೈಂ ಮೀರಿ ವಾಕಿಂಗ್​, ಪ್ರಶ್ನಿಸಿದಕ್ಕೆ ಹೋಂ ಗಾರ್ಡ್​ಗೆ ಬಿತ್ತು ಗೂಸಾ, ಎಲ್ಲಿ..?

ಬೆಂಗಳೂರು: ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಆಯ್ತು. ನಂತರ ವೈದ್ಯರು, ಪೊಲೀಸರ ಮೇಲೂ ಸಹ ಹಲ್ಲೆ ನಡೆಯಿತು. ಇದೀಗ ಗೃಹರಕ್ಷಕ ದಳದ ಸಿಬ್ಬಂದಿಯ ಮೇಲೆ ಗಂಭೀರವಾದ ಹಲ್ಲೆ ನಡೆದಿರುವ ಘಟನೆ ನಗರದ ಅಮೃತಹಳ್ಳಿ ವ್ಯಾಪ್ತಿಯ ರಾಚೇನಹಳ್ಳಿ ಕೆರೆ ಪಾರ್ಕ್ ಬಳಿ ನಡೆದಿದೆ. ಹಲ್ಲೆಗೊಳಗಾದ ಹೋಂಗಾರ್ಡ್​ನ ಮಂಜುನಾಥ್ (30) ಎಂದು ಗುರುತಿಸಲಾಗಿದೆ. ಈಶಾನ್ಯ ವಿಭಾಗದ ಅಮೃತಹಳ್ಳಿಯ ಗೃಹರಕ್ಷಕ ದಳಕ್ಕೆ ಸೇರಿರುವ ಮಂಜುನಾಥ್​ ಮೇಲೆ ಸ್ಥಳೀಯ ನಿವಾಸಿ ರಾಘವೇಂದ್ರ (40) ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಕೊರೊನಾ ಸೋಂಕು ನಿಯಂತ್ರಣಕ್ಕಾಗಿ […]

ಪಾರ್ಕ್ ಟೈಂ ಮೀರಿ ವಾಕಿಂಗ್​, ಪ್ರಶ್ನಿಸಿದಕ್ಕೆ ಹೋಂ ಗಾರ್ಡ್​ಗೆ ಬಿತ್ತು ಗೂಸಾ, ಎಲ್ಲಿ..?
KUSHAL V
|

Updated on:Jul 02, 2020 | 6:54 PM

Share

ಬೆಂಗಳೂರು: ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಆಯ್ತು. ನಂತರ ವೈದ್ಯರು, ಪೊಲೀಸರ ಮೇಲೂ ಸಹ ಹಲ್ಲೆ ನಡೆಯಿತು. ಇದೀಗ ಗೃಹರಕ್ಷಕ ದಳದ ಸಿಬ್ಬಂದಿಯ ಮೇಲೆ ಗಂಭೀರವಾದ ಹಲ್ಲೆ ನಡೆದಿರುವ ಘಟನೆ ನಗರದ ಅಮೃತಹಳ್ಳಿ ವ್ಯಾಪ್ತಿಯ ರಾಚೇನಹಳ್ಳಿ ಕೆರೆ ಪಾರ್ಕ್ ಬಳಿ ನಡೆದಿದೆ.

ಹಲ್ಲೆಗೊಳಗಾದ ಹೋಂಗಾರ್ಡ್​ನ ಮಂಜುನಾಥ್ (30) ಎಂದು ಗುರುತಿಸಲಾಗಿದೆ. ಈಶಾನ್ಯ ವಿಭಾಗದ ಅಮೃತಹಳ್ಳಿಯ ಗೃಹರಕ್ಷಕ ದಳಕ್ಕೆ ಸೇರಿರುವ ಮಂಜುನಾಥ್​ ಮೇಲೆ ಸ್ಥಳೀಯ ನಿವಾಸಿ ರಾಘವೇಂದ್ರ (40) ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಪಾರ್ಕ್​ನ ಆಡಳಿತ ಮಂಡಳಿ ವಿಹಾರದ ಟೈಮಿಂಗ್ಸ್ ಬೆಳಗ್ಗೆ 6 ರಿಂದ 9 ವರೆಗೆ ಮಾತ್ರ ಎಂದು ನಿಗದಿಪಡಿಸಿತ್ತು. ಆದರೆ, ಟೈಮಿಂಗ್ಸ್ ಮೀರಿದ್ರೂ ಪಾರ್ಕ್​ನಲ್ಲಿ ರಾಘವೇಂದ್ರ ವಾಕ್ ಮಾಡಲು ಮುಂದಾಗಿದ್ದರು. ಇದನ್ನು ಪ್ರಶ್ನಿಸಿದಕ್ಕೆ ಸಿಟ್ಟಾದ ರಾಘವೇಂದ್ರ ಮಂಜುನಾಥ್​ ಮೇಲೆ ಹಲ್ಲೆ ಮಾಡಿದ್ದಾರಂತೆ.

ಹಲ್ಲೆಗೊಳಗಾದ ಹೋಮ್​ ಗಾರ್ಡ್​ ಕೂಡಲೇ ತನ್ನ ಹಿರಿಯ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ. ಹಾಗಾಗಿ, ಸದ್ಯ ಹಲ್ಲೆ ನಡೆಸಿರುವ ರಾಘವೇಂದ್ರನ ಅಮೃತಹಳ್ಳಿ ಪೊಲೀಸ್ ವಶಕ್ಕೆ ಪಡೆದು ಅವರ ವಿರುದ್ಧ ದೂರು ದಾಖಲಿಸಿದ್ದಾರೆ.

Published On - 6:48 pm, Thu, 2 July 20

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್