AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘BSY ಸರ್ಕಾರ ಬಂದ ಮೇಲೆ.. 1,438 ಡ್ರಗ್ ಕೇಸ್ ದಾಖಲು.. 1,792 ಆರೋಪಿಗಳು ಅರೆಸ್ಟ್​’

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್​ ಜಾಲದ ನಂಟಿರುವ ಬಗ್ಗೆ ನಿರ್ದೇಶಕ ಇಂದ್ರಜಿತ್ ಲಂಕೇಶ್​ ನೀಡುವ ಮಾಹಿತಿ ಮೇಲೆ ತನಿಖೆ ನಡೆಸಿ ಎಂದು ಪೊಲೀಸ್ ಅಧಿಕಾರಿಗಳಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಪೊಲೀಸ್ ಅಧಿಕಾರಿಗಳೊಂದಿಗೆ ಗೃಹ ಸಚಿವರು ನಡೆಸಿದ ಸಭೆಯಲ್ಲಿ ಎಷ್ಟೇ ಪ್ರಭಾವಿಗಳಿದ್ದರೂ ತನಿಖೆ ನಡೆಸುವಂತೆ ಸೂಚಿಸಿದ್ದಾರೆ. ಯಾವುದೇ ಪ್ರಭಾವಕ್ಕೆ ಒಳಗಾಗದೆ ತನಿಖೆ ನಡೆಸುವ ಜೊತೆಗೆ ತನಿಖೆ ವಿಚಾರದಲ್ಲಿ ಪೊಲೀಸರಿಗೆ ಫುಲ್ ಪವರ್ ನೀಡ್ತೀವಿ ಎಂದು ಹೇಳಿದ್ದಾರೆ. ಯಾರೇ ಇದ್ದರೂ ತನಿಖೆ ಮಾಡಿ ಕ್ರಮ ತೆಗೆದುಕೊಳ್ಳಿ. […]

‘BSY ಸರ್ಕಾರ ಬಂದ ಮೇಲೆ.. 1,438 ಡ್ರಗ್ ಕೇಸ್ ದಾಖಲು.. 1,792 ಆರೋಪಿಗಳು ಅರೆಸ್ಟ್​’
ಗೃಹ ಸಚಿವ ಬಸವರಾಜ್ ಬೊಮ್ಮಾಯಿ
KUSHAL V
|

Updated on: Aug 31, 2020 | 2:53 PM

Share

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್​ ಜಾಲದ ನಂಟಿರುವ ಬಗ್ಗೆ ನಿರ್ದೇಶಕ ಇಂದ್ರಜಿತ್ ಲಂಕೇಶ್​ ನೀಡುವ ಮಾಹಿತಿ ಮೇಲೆ ತನಿಖೆ ನಡೆಸಿ ಎಂದು ಪೊಲೀಸ್ ಅಧಿಕಾರಿಗಳಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಪೊಲೀಸ್ ಅಧಿಕಾರಿಗಳೊಂದಿಗೆ ಗೃಹ ಸಚಿವರು ನಡೆಸಿದ ಸಭೆಯಲ್ಲಿ ಎಷ್ಟೇ ಪ್ರಭಾವಿಗಳಿದ್ದರೂ ತನಿಖೆ ನಡೆಸುವಂತೆ ಸೂಚಿಸಿದ್ದಾರೆ. ಯಾವುದೇ ಪ್ರಭಾವಕ್ಕೆ ಒಳಗಾಗದೆ ತನಿಖೆ ನಡೆಸುವ ಜೊತೆಗೆ ತನಿಖೆ ವಿಚಾರದಲ್ಲಿ ಪೊಲೀಸರಿಗೆ ಫುಲ್ ಪವರ್ ನೀಡ್ತೀವಿ ಎಂದು ಹೇಳಿದ್ದಾರೆ. ಯಾರೇ ಇದ್ದರೂ ತನಿಖೆ ಮಾಡಿ ಕ್ರಮ ತೆಗೆದುಕೊಳ್ಳಿ. ಹಳೆಯ ಡ್ರಗ್ಸ್​ ಪ್ರಕರಣಗಳನ್ನೂ ಗಂಭೀರವಾಗಿ ಪರಿಶೀಲಿಸಿ ಎಂದು ಪೊಲೀಸ್ ಅಧಿಕಾರಿಗಳಿಗೆ ಬೊಮ್ಮಾಯಿ ಸೂಚನೆ ನೀಡಿದ್ದಾರೆ.

ಡ್ರಗ್ಸ್ ಜಾಲಕ್ಕೆ ಕಡಿವಾಣ ಹಾಕಲು ಮಹತ್ವದ ಚರ್ಚೆ ನಡೆಸಿದ ವೇಳೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಡ್ರಗ್ಸ್ ಜಾಲ ನಿಯಂತ್ರಣಕ್ಕೆ ಬಿಗಿ ಕ್ರಮ ಕೈಗೊಂಡಿದ್ದೇವೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಡ್ರಗ್ಸ್ ವಿಚಾರವಾಗಿ ಸಾಕಷ್ಟು ಬಿಗಿ ಕ್ರಮ ಕೈಗೊಂಡಿದ್ದೇವೆ. ಈವರೆಗೆ 1,438 ಡ್ರಗ್ ಕೇಸ್ ದಾಖಲಾಗಿದೆ. 1792 ಮಂದಿ ಅರೆಸ್ಟ್ ಮಾಡಿದ್ದೇವೆ. ಇವರಲ್ಲಿ 25 ಮಂದಿ ವಿದೇಶಿಗರು ಸಹ ಇದ್ದಾರೆ ಎಂಬ ಮಾಹಿತಿ ನೀಡಿದ್ದಾರೆ.

‘ರಾಜ್ಯದಲ್ಲಿ 2 ರೀತಿಯ ಮಾದಕ ವಸ್ತುಗಳು ಲಭ್ಯವಿದೆ’ ರಾಜ್ಯದಲ್ಲಿ ಎರಡು ರೀತಿಯ ಮಾದಕ ವಸ್ತುಗಳು ಇದೆ. ಒಂದು ಗಾಂಜಾ ಮತ್ತೊಂದು ಸಿಂಥೆಟಿಕ್ ಡ್ರಗ್ ಅಂತಾ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಎಲ್ಲಿ ಗಾಂಜಾ ಬೆಳೆಯಲಾಗುತ್ತಿದೆ ಎಂದು ಮೊದಲು ಪತ್ತೆ ಮಾಡಿ ನಾಶಪಡಿಸಲು ಸೂಚಿಸಿದ್ದೇನೆ. ಜೊತೆಗೆ, ಗೋವಾ, ತೆಲಂಗಾಣ ಮತ್ತು ಆಂಧ್ರದಿಂದ ಗಾಂಜಾ ಬರುತ್ತಿದೆ. ಅದನ್ನು ತಡೆಯಲು ಗಡಿ ಜಿಲ್ಲೆಯ ಎಸ್‌ಪಿಗಳಿಗೆ ಸೂಚನೆ ನೀಡಿದ್ದೇನೆ ಅಂತಾ ಹೇಳಿದ್ದಾರೆ.

ಡ್ರಗ್ಸ್ ಮಾಫಿಯಾ ಮಟ್ಟ ಹಾಕುವಂತೆ ಸೂಚನೆ ನೀಡಿದ್ದೇನೆ. ಯಾವುದೇ ರಂಗದಲ್ಲಿದ್ದರೂ ಮಟ್ಟ ಹಾಕಲು ಸೂಚಿಸಿದ್ದೇನೆ. ಎಷ್ಟೇ ಪ್ರಭಾವಿ ವ್ಯಕ್ತಿಯಿದ್ದರೂ ಬಿಡಬಾರದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಡ್ರಗ್ಸ್ ಜಾಲದಲ್ಲಿ ಚಿತ್ರರಂಗದ ಕೆಲವು ಗಾಯಕರು, ನಟ, ನಟಿಯರು ಇದ್ದಾರೆಂದು ಕೆಲವರು ಹೇಳುತ್ತಿದ್ದಾರೆ. ಡ್ರಗ್ಸ್ ಜಾಲದಲ್ಲಿ ಯಾರೇ ಇದ್ದರೂ ರಕ್ಷಣೆ ಮಾಡುವುದಿಲ್ಲ.

‘ಶರ್ಮಿಳಾ ಮಾಂಡ್ರೆ ಪ್ರಕರಣದಲ್ಲಿ FIR ದಾಖಲಾಗಿದೆ’ ನಟಿ ಶರ್ಮಿಳಾ ಮಾಂಡ್ರೆ ಪ್ರಕರಣದಲ್ಲಿ FIR ದಾಖಲಾಗಿದೆ. ಎಲ್ಲಾ ಸತ್ಯ ಬಯಲಾಗಲಿದೆ. ತನಿಖೆಯಲ್ಲಿ ನಾವು ಹಸ್ತಕ್ಷೇಪ ಮಾಡುವುದಕ್ಕೆ ಆಗಲ್ಲ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ