AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ಇಂಪ್ಯಾಕ್ಟ್​: APMC ಗೋದಾಮಿನಲ್ಲೇ ಸೇವೆ ಸಲ್ಲಿಸ್ತಿದ್ದ ಪೊಲೀಸರಿಗೆ ಹೊಸ ಠಾಣೆ; ಗೃಹಸಚಿವರಿಂದ ಲೋಕಾರ್ಪಣೆ

ಒಟ್ನಲ್ಲಿ ಸುಸಜ್ಜಿತವಾದ ಠಾಣೆ ಕಟ್ಟಡ ನಿರ್ಮಾಣಗೊಂಡ್ರು ಕೆಲಸ ಮಾಡೊಕ್ಕಾಗದೆ ಎಪಿಎಂಸಿ ಗೋದಾಮಿನಲ್ಲೆ ಸೇವೆ ಸಲ್ಲಿಸ್ತಿದ್ದ ಪೊಲೀಸ್ ಸಿಬ್ಬಂದಿಗೆ ಸದ್ಯ ಮುಕ್ತಿ ಸಿಕ್ಕಂತಾಗಿದೆ. ಜನರಿಗೂ ಇದರಿಂದ ಅನುಕೂಲವಾಗಲಿದೆ.

ಟಿವಿ9 ಇಂಪ್ಯಾಕ್ಟ್​: APMC ಗೋದಾಮಿನಲ್ಲೇ ಸೇವೆ ಸಲ್ಲಿಸ್ತಿದ್ದ ಪೊಲೀಸರಿಗೆ ಹೊಸ ಠಾಣೆ; ಗೃಹಸಚಿವರಿಂದ ಲೋಕಾರ್ಪಣೆ
ಗೃಹಸಚಿವರಿಂದ ಉದ್ಘಾಟನೆಯಾದ ಹೊಸ ಪೊಲೀಸ್ ಠಾಣೆ
ಪೃಥ್ವಿಶಂಕರ
| Edited By: |

Updated on:Nov 29, 2020 | 3:24 PM

Share

ರಾಯಚೂರು: ಅಲ್ಲಿನ ಪೊಲೀಸರಿಗೆ ಸ್ವಂತದ್ದೊಂದು ಠಾಣೆಯೇ ಇರಲಿಲ್ಲ. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಗೋದಾಮಿನಲ್ಲಿ ಕೆಲಸ  ಮಾಡುತ್ತಿದ್ದರು. ಹೊರ ವಲಯದ ಎಪಿಎಂಸಿ ಗೋದಾಮಿನಲ್ಲಿದ್ದ ಆ ಠಾಣೆಗೆ ತೆರಳಲು ಜನ ಹಿಂದೇಟು ಹಾಕ್ತಿದ್ದರು. ಈ ನಡುವೆ ಲಕ್ಷಾಂತರ ರೂ. ಖರ್ಚು ಮಾಡಿ ನಿರ್ಮಿಸಿದ್ದ ಹೊಸ ಠಾಣೆ ಉದ್ಘಾಟನೆ ಆಗದೆ ಪಾಳು ಬಿದ್ದಿತ್ತು. ಆದ್ರೆ ಟಿವಿ9 ವರದಿ ನಂತರ ಎಚ್ಚೆತ್ತ ಗೃಹ ಇಲಾಖೆ ಹೊಸ ಪೊಲೀಸ್ ಠಾಣೆಗೆ ಮುಕ್ತಿ ಕರುಣಿಸಿದೆ.

ಸಿಂಧನೂರು ಠಾಣೆಗೆ ಉದ್ಘಾಟನೆ ಭಾಗ್ಯ ಕಲ್ಪಿಸಿದ ಟಿವಿ9.. 6 ತಿಂಗಳ ಹಿಂದೆಯೇ ಪೊಲೀಸ್ ಠಾಣೆ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿತ್ತು. ಆದರೂ ಠಾಣೆಗೆ ಉದ್ಘಾಟನೆ ಭಾಗ್ಯ ಸಿಕ್ಕಿರಲಿಲ್ಲ. ನಿನ್ನೆ ಗೃಹಮಂತ್ರಿ ಬಸವರಾಜ ಬೊಮ್ಮಾಯಿ ನೂತನ ಪೊಲೀಸ್ ಠಾಣೆಯನ್ನ ಲೋಕಾರ್ಪಣೆ ಮಾಡಿದ್ದಾರೆ.

ಕರ್ನಾಟಕ ಪೊಲೀಸ್ ಹೌಸಿಂಗ್ ಬೋರ್ಡ್​  ಸುಮಾರು 97 ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನ ಠಾಣೆಯ ಕಟ್ಟಡ ಕಾಮಗಾರಿ ಪೂರ್ಣಗೊಳಿಸಿತ್ತು. ಅತ್ಯಂತ ಸುಸಜ್ಜಿತವಾದ ಈ ಕಟ್ಟಡದಲ್ಲಿ ನೆಲಮಹಡಿಯಲ್ಲಿ ಪೊಲೀಸ್ ಠಾಣೆ ಮತ್ತು ಮೊದಲ ಮಹಡಿಯಲ್ಲಿ ಸರ್ಕಲ್ ಇನ್ಸಪೆಕ್ಟರ್ ಕಚೇರಿ ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದಾರೆ.

ಹೊಸ ಠಾಣೆ ನಿರ್ಮಾಣ ಕಾರ್ಯ ಪೂರ್ಣವಾಗಿದ್ದರೂ ಸಿಂಧನೂರು ಪೊಲೀಸ್ ಠಾಣೆ ಸಿಬ್ಬಂದಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಗೋದಾಮಿನಲ್ಲಿ ಕೆಲಸ ಮಾಡ್ತಿದ್ರು. ನಗರ ಪ್ರದೇಶದಿಂದ ಹೊರ ಭಾಗದ ಕುಷ್ಟಗಿ ರಸ್ತೆಯಲ್ಲಿರುವ ಎಪಿಎಂಸಿ ಸಮುದಾಯ ಭವನದಲ್ಲಿ ನಗರ ಠಾಣೆ ನಡೆಸಲಾಗುತ್ತಿತ್ತು.

ಪ್ರತಿ ತಿಂಗಳು 20,000 ರೂಪಾಯಿ ಬಾಡಿಗೆ ಪಾವತಿಸಲಾಗುತ್ತಿತ್ತು.. ಕಳೆದ 3 ವರ್ಷದಿಂದಲೂ ನಗರ ಠಾಣೆ ಎಪಿಎಂಸಿ ಸಮುದಾಯ ಭವನದಲ್ಲೆ ನಡೀತಿತ್ತು. ಪ್ರತಿ ತಿಂಗಳು 20,000 ರೂಪಾಯಿ ಬಾಡಿಗೆ ಪಾವತಿಸಲಾಗುತ್ತಿತ್ತು. ಈ ಬಗ್ಗೆ ಟಿವಿ9ನಲ್ಲಿ ವಿಸ್ತೃತ ವರದಿ ಪ್ರಸಾರವಾಗಿತ್ತು. ವರದಿಯಿಂದ ಎಚ್ಚೆತ್ತ ಗೃಹ ಇಲಾಖೆ ಕೊನೆಗೂ ಸಿಂಧನೂರು ನಗರ ಠಾಣೆಯನ್ನ ಲೋಕಾರ್ಪಣೆ ಮಾಡಿದ್ದು ಸಂತಸ ಮೂಡಿಸಿದೆ. ಇನ್ನು ಠಾಣೆ ಉದ್ಘಾಟನೆ ವಿಳಂಬಕ್ಕೆ ಕಾರಣವೇನು ಅಂತಾ ಕೇಳಿದ್ರೆ ಗೃಹಸಚಿವರು ಕೊರೊನಾ ಸಬೂಬು ಹೇಳಿದರು.

ಒಟ್ನಲ್ಲಿ ಸುಸಜ್ಜಿತವಾದ ಠಾಣೆ ಕಟ್ಟಡ ನಿರ್ಮಾಣಗೊಂಡರೂ ಕೆಲಸ ಮಾಡಲಿಕ್ಕಾಗದೆ ಎಪಿಎಂಸಿ ಗೋದಾಮಿನಲ್ಲೆ ಸೇವೆ ಸಲ್ಲಿಸ್ತಿದ್ದ ಪೊಲೀಸ್ ಸಿಬ್ಬಂದಿಗೆ ಸದ್ಯ ಮುಕ್ತಿ ಸಿಕ್ಕಂತಾಗಿದೆ. ಜನರಿಗೂ ಇದರಿಂದ ಅನುಕೂಲವಾಗಲಿದೆ. -ಸಿದ್ದು ಬಿರಾದಾರ್

Published On - 11:43 am, Sun, 29 November 20

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ