ಗಲಭೆಕೋರರಿಂದಲೇ ಆಸ್ತಿಪಾಸ್ತಿ ನಷ್ಟದ ಬಾಬತ್ತು ವಸೂಲಿ: ಗೃಹ ಸಚಿವ‌ ಬೊಮ್ಮಾಯಿ

ಬೆಂಗಳೂರು: ಬೆಂಗಳೂರಿನ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಗರಂ ಆಗಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿರುವ ಬೊಮ್ಮಾಯಿ, ಈ ಗಲಭೆಗೆ ಯಾರೇ ಕಾರಣವಾಗಿರಲಿ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಕೆ.ಜಿ ಹಳ್ಳಿ ಮತ್ತು ಡಿ.ಜೆ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಗಲಭೆಯಲ್ಲಾದ ಸರ್ಕಾರಿ ಆಸ್ತಿಪಾಸ್ತಿಯ ಹಾನಿಯನ್ನು ಗಲಭೆಕೋರರಿಂದಲೇ ವಸೂಲು ಮಾಡುತ್ತೇವೆ ಎಂದು ಹೇಳಿದ್ದಾರೆ. ಈ ಸಂಬಂಧ ಸುಪ್ರೀಂ‌ ಕೋರ್ಟ್‌ ನೀಡಿರುವ […]

ಗಲಭೆಕೋರರಿಂದಲೇ ಆಸ್ತಿಪಾಸ್ತಿ ನಷ್ಟದ ಬಾಬತ್ತು ವಸೂಲಿ: ಗೃಹ ಸಚಿವ‌ ಬೊಮ್ಮಾಯಿ
Guru Edited By: ಸಾಧು ಶ್ರೀನಾಥ್​

Updated on: Aug 12, 2020 | 4:59 PM

ಬೆಂಗಳೂರು: ಬೆಂಗಳೂರಿನ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಗರಂ ಆಗಿದ್ದಾರೆ.

ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿರುವ ಬೊಮ್ಮಾಯಿ, ಈ ಗಲಭೆಗೆ ಯಾರೇ ಕಾರಣವಾಗಿರಲಿ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಕೆ.ಜಿ ಹಳ್ಳಿ ಮತ್ತು ಡಿ.ಜೆ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಗಲಭೆಯಲ್ಲಾದ ಸರ್ಕಾರಿ ಆಸ್ತಿಪಾಸ್ತಿಯ ಹಾನಿಯನ್ನು ಗಲಭೆಕೋರರಿಂದಲೇ ವಸೂಲು ಮಾಡುತ್ತೇವೆ ಎಂದು ಹೇಳಿದ್ದಾರೆ.

ಈ ಸಂಬಂಧ ಸುಪ್ರೀಂ‌ ಕೋರ್ಟ್‌ ನೀಡಿರುವ ನಿರ್ದೇಶನವನ್ನು ಗೃಹ ಸಚಿವರು ಉಲ್ಲೇಖಿಸಿದ್ದಾರೆ. ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್‌ ಸರ್ಕಾರ ಈಗಾಗಲೇ ಇದೇ ರೀತಿಯ ಕ್ರಮವನ್ನು ಉತ್ತರ ಪ್ರದೇಶದಲ್ಲಿ ಅನುಸರಿಸುತ್ತಿದೆ. ಈಗ ಕರ್ನಾಟಕ ಸರ್ಕಾರ ಕೂಡಾ ಇದೇ ರೀತಿಯ ಕ್ರಮಕ್ಕೆ ಮುಂದಾಗಿದೆ.

Loading...
Unable to load recommendations.
Follow Us