Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊರಬೀಡು ಆಚರಣೆ: ಊರಿಗೆ ಊರೇ ಖಾಲಿ ಖಾಲಿ!

ಹಾವೇರಿ: ಜಾತ್ರೆ ಎಂದಾಕ್ಷಣ ಆ ಗ್ರಾಮದಲ್ಲಿ ಸಂಭ್ರಮ ಜೋರಾಗಿರುತ್ತೆ. ಸುತ್ತಮುತ್ತ 10 ಹಳ್ಳಿಯ ಜನರು ಜಾತ್ರೆಯಲ್ಲಿ ಭಾಗಿಯಾಗಿ ಸಂಭ್ರಮಕ್ಕೆ ಸಾಕ್ಷಿಯಾಗ್ತಾರೆ. ಆದ್ರೆ ಕೆಲವೊಂದು ಗ್ರಾಮಗಳಲ್ಲಿ ಜಾತ್ರೆಯನ್ನ ವಿಶಿಷ್ಟವಾಗಿ ಆಚರಣೆ ಮಾಡುತ್ತಾರೆ. ಶಿಗ್ಗಾಂವಿ ತಾಲೂಕಿನ ಹೋತನಹಳ್ಳಿ ಗ್ರಾಮದಲ್ಲಿ 5 ವರ್ಷಕ್ಕೊಮ್ಮೆ ನಡೆಯುವ ಗ್ರಾಮದೇವಿ ಜಾತ್ರೆಗೆ ಇಡೀ ಊರನ್ನೇ ಗ್ರಾಮಸ್ಥರು ತೊರೆಯುತ್ತಿದ್ದಾರೆ. ಹೋತನಹಳ್ಳಿ ಗ್ರಾಮದಲ್ಲಿ ಹಿಂದಿನಿಂದಲೂ ವಿಶಿಷ್ಟ ಆಚರಣೆ ಚಾಲ್ತಿಯಲ್ಲಿದ್ದು, ಗ್ರಾಮದೇವಿ ಜಾತ್ರೆ ಪ್ರಯುಕ್ತ ಹೊರಬೀಡು ಆಚರಣೆಗೆ ಊರಿಗೆ ಊರೇ ಗ್ರಾಮಸ್ಥರು ಖಾಲಿ ಮಾಡುತ್ತಾರೆ. ಮನೆಯಲ್ಲಿರುವ ಎತ್ತು, ಎಮ್ಮೆ, ನಾಯಿ, […]

ಹೊರಬೀಡು ಆಚರಣೆ: ಊರಿಗೆ ಊರೇ ಖಾಲಿ ಖಾಲಿ!
Follow us
ಸಾಧು ಶ್ರೀನಾಥ್​
|

Updated on:Feb 18, 2020 | 12:05 PM

ಹಾವೇರಿ: ಜಾತ್ರೆ ಎಂದಾಕ್ಷಣ ಆ ಗ್ರಾಮದಲ್ಲಿ ಸಂಭ್ರಮ ಜೋರಾಗಿರುತ್ತೆ. ಸುತ್ತಮುತ್ತ 10 ಹಳ್ಳಿಯ ಜನರು ಜಾತ್ರೆಯಲ್ಲಿ ಭಾಗಿಯಾಗಿ ಸಂಭ್ರಮಕ್ಕೆ ಸಾಕ್ಷಿಯಾಗ್ತಾರೆ. ಆದ್ರೆ ಕೆಲವೊಂದು ಗ್ರಾಮಗಳಲ್ಲಿ ಜಾತ್ರೆಯನ್ನ ವಿಶಿಷ್ಟವಾಗಿ ಆಚರಣೆ ಮಾಡುತ್ತಾರೆ. ಶಿಗ್ಗಾಂವಿ ತಾಲೂಕಿನ ಹೋತನಹಳ್ಳಿ ಗ್ರಾಮದಲ್ಲಿ 5 ವರ್ಷಕ್ಕೊಮ್ಮೆ ನಡೆಯುವ ಗ್ರಾಮದೇವಿ ಜಾತ್ರೆಗೆ ಇಡೀ ಊರನ್ನೇ ಗ್ರಾಮಸ್ಥರು ತೊರೆಯುತ್ತಿದ್ದಾರೆ.

ಹೋತನಹಳ್ಳಿ ಗ್ರಾಮದಲ್ಲಿ ಹಿಂದಿನಿಂದಲೂ ವಿಶಿಷ್ಟ ಆಚರಣೆ ಚಾಲ್ತಿಯಲ್ಲಿದ್ದು, ಗ್ರಾಮದೇವಿ ಜಾತ್ರೆ ಪ್ರಯುಕ್ತ ಹೊರಬೀಡು ಆಚರಣೆಗೆ ಊರಿಗೆ ಊರೇ ಗ್ರಾಮಸ್ಥರು ಖಾಲಿ ಮಾಡುತ್ತಾರೆ. ಮನೆಯಲ್ಲಿರುವ ಎತ್ತು, ಎಮ್ಮೆ, ನಾಯಿ, ಕೋಳಿ, ಕುರಿ ಸಮೇತ ಗ್ರಾಮಸ್ಥರು ಊರು ತೊರೆದು ಜಮೀನುಗಳಲ್ಲಿ ವಾಸಿಸುತ್ತಾರೆ.

ಸೂರ್ಯೋದಯಕ್ಕೂ ಮುನ್ನ ಊರು ತೊರೆಯುವ ಗ್ರಾಮಸ್ಥರು, ಸೂರ್ಯಾಸ್ಥದವರೆಗೆ ಗ್ರಾಮದ ಬಳಿ ಇರುವ ಜಮೀನುಗಳಲ್ಲಿ ವಾಸ ಮಾಡುತ್ತಾರೆ. ತಿಂಡಿ, ಊಟ ಎಲ್ಲವೂ ಜಮೀನುಗಳಲ್ಲೇ ಮಾಡುತ್ತಾರೆ. ಇದಕ್ಕೆ ಪ್ರಮುಖ ಕಾರಣವೆಂದರೆ ಹೊರಬೀಡು ಆಚರಣೆ ವೇಳೆ ಗ್ರಾಮದಲ್ಲಿ ದೇವಿ ಓಡಾಡುತ್ತಾಳೆ ಅನ್ನೋ ನಂಬಿಕೆ. ಹಾಗಾಗಿಯೇ ಎರಡು ಮಂಗಳವಾರ ಗ್ರಾಮಸ್ಥರು ಊರು ತೊರೆಯುವ ಪದ್ಧತಿ ಇದೆ.

Published On - 11:45 am, Tue, 18 February 20

ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ