ಹೊರಬೀಡು ಆಚರಣೆ: ಊರಿಗೆ ಊರೇ ಖಾಲಿ ಖಾಲಿ!

ಹಾವೇರಿ: ಜಾತ್ರೆ ಎಂದಾಕ್ಷಣ ಆ ಗ್ರಾಮದಲ್ಲಿ ಸಂಭ್ರಮ ಜೋರಾಗಿರುತ್ತೆ. ಸುತ್ತಮುತ್ತ 10 ಹಳ್ಳಿಯ ಜನರು ಜಾತ್ರೆಯಲ್ಲಿ ಭಾಗಿಯಾಗಿ ಸಂಭ್ರಮಕ್ಕೆ ಸಾಕ್ಷಿಯಾಗ್ತಾರೆ. ಆದ್ರೆ ಕೆಲವೊಂದು ಗ್ರಾಮಗಳಲ್ಲಿ ಜಾತ್ರೆಯನ್ನ ವಿಶಿಷ್ಟವಾಗಿ ಆಚರಣೆ ಮಾಡುತ್ತಾರೆ. ಶಿಗ್ಗಾಂವಿ ತಾಲೂಕಿನ ಹೋತನಹಳ್ಳಿ ಗ್ರಾಮದಲ್ಲಿ 5 ವರ್ಷಕ್ಕೊಮ್ಮೆ ನಡೆಯುವ ಗ್ರಾಮದೇವಿ ಜಾತ್ರೆಗೆ ಇಡೀ ಊರನ್ನೇ ಗ್ರಾಮಸ್ಥರು ತೊರೆಯುತ್ತಿದ್ದಾರೆ. ಹೋತನಹಳ್ಳಿ ಗ್ರಾಮದಲ್ಲಿ ಹಿಂದಿನಿಂದಲೂ ವಿಶಿಷ್ಟ ಆಚರಣೆ ಚಾಲ್ತಿಯಲ್ಲಿದ್ದು, ಗ್ರಾಮದೇವಿ ಜಾತ್ರೆ ಪ್ರಯುಕ್ತ ಹೊರಬೀಡು ಆಚರಣೆಗೆ ಊರಿಗೆ ಊರೇ ಗ್ರಾಮಸ್ಥರು ಖಾಲಿ ಮಾಡುತ್ತಾರೆ. ಮನೆಯಲ್ಲಿರುವ ಎತ್ತು, ಎಮ್ಮೆ, ನಾಯಿ, […]

ಹೊರಬೀಡು ಆಚರಣೆ: ಊರಿಗೆ ಊರೇ ಖಾಲಿ ಖಾಲಿ!
ಸಾಧು ಶ್ರೀನಾಥ್​

Updated on: Feb 18, 2020 | 12:05 PM

ಹಾವೇರಿ: ಜಾತ್ರೆ ಎಂದಾಕ್ಷಣ ಆ ಗ್ರಾಮದಲ್ಲಿ ಸಂಭ್ರಮ ಜೋರಾಗಿರುತ್ತೆ. ಸುತ್ತಮುತ್ತ 10 ಹಳ್ಳಿಯ ಜನರು ಜಾತ್ರೆಯಲ್ಲಿ ಭಾಗಿಯಾಗಿ ಸಂಭ್ರಮಕ್ಕೆ ಸಾಕ್ಷಿಯಾಗ್ತಾರೆ. ಆದ್ರೆ ಕೆಲವೊಂದು ಗ್ರಾಮಗಳಲ್ಲಿ ಜಾತ್ರೆಯನ್ನ ವಿಶಿಷ್ಟವಾಗಿ ಆಚರಣೆ ಮಾಡುತ್ತಾರೆ. ಶಿಗ್ಗಾಂವಿ ತಾಲೂಕಿನ ಹೋತನಹಳ್ಳಿ ಗ್ರಾಮದಲ್ಲಿ 5 ವರ್ಷಕ್ಕೊಮ್ಮೆ ನಡೆಯುವ ಗ್ರಾಮದೇವಿ ಜಾತ್ರೆಗೆ ಇಡೀ ಊರನ್ನೇ ಗ್ರಾಮಸ್ಥರು ತೊರೆಯುತ್ತಿದ್ದಾರೆ.

ಹೋತನಹಳ್ಳಿ ಗ್ರಾಮದಲ್ಲಿ ಹಿಂದಿನಿಂದಲೂ ವಿಶಿಷ್ಟ ಆಚರಣೆ ಚಾಲ್ತಿಯಲ್ಲಿದ್ದು, ಗ್ರಾಮದೇವಿ ಜಾತ್ರೆ ಪ್ರಯುಕ್ತ ಹೊರಬೀಡು ಆಚರಣೆಗೆ ಊರಿಗೆ ಊರೇ ಗ್ರಾಮಸ್ಥರು ಖಾಲಿ ಮಾಡುತ್ತಾರೆ. ಮನೆಯಲ್ಲಿರುವ ಎತ್ತು, ಎಮ್ಮೆ, ನಾಯಿ, ಕೋಳಿ, ಕುರಿ ಸಮೇತ ಗ್ರಾಮಸ್ಥರು ಊರು ತೊರೆದು ಜಮೀನುಗಳಲ್ಲಿ ವಾಸಿಸುತ್ತಾರೆ.

ಸೂರ್ಯೋದಯಕ್ಕೂ ಮುನ್ನ ಊರು ತೊರೆಯುವ ಗ್ರಾಮಸ್ಥರು, ಸೂರ್ಯಾಸ್ಥದವರೆಗೆ ಗ್ರಾಮದ ಬಳಿ ಇರುವ ಜಮೀನುಗಳಲ್ಲಿ ವಾಸ ಮಾಡುತ್ತಾರೆ. ತಿಂಡಿ, ಊಟ ಎಲ್ಲವೂ ಜಮೀನುಗಳಲ್ಲೇ ಮಾಡುತ್ತಾರೆ. ಇದಕ್ಕೆ ಪ್ರಮುಖ ಕಾರಣವೆಂದರೆ ಹೊರಬೀಡು ಆಚರಣೆ ವೇಳೆ ಗ್ರಾಮದಲ್ಲಿ ದೇವಿ ಓಡಾಡುತ್ತಾಳೆ ಅನ್ನೋ ನಂಬಿಕೆ. ಹಾಗಾಗಿಯೇ ಎರಡು ಮಂಗಳವಾರ ಗ್ರಾಮಸ್ಥರು ಊರು ತೊರೆಯುವ ಪದ್ಧತಿ ಇದೆ.






Published On - 11:45 am, Tue, 18 February 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us