AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope; ದಿನ ಭವಿಷ್ಯ | ವೃಷಭ ರಾಶಿಯವರಿಗೆ ದೂರಾಲೋಚನೆಯಿಂದ ಕಾರ್ಯದಲ್ಲಿ ಯಶಸ್ಸು

ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಮಾಘಮಾಸ, ಶಿಶಿರ ಋತು , ಶುಕ್ಲಪಕ್ಷ, ಪಂಚಮಿ ತಿಥಿ, ಮಂಗಳವಾರ, ಫೆಬ್ರವರಿ 16, 2021 ಭವಿಷ್ಯ.

Horoscope; ದಿನ ಭವಿಷ್ಯ | ವೃಷಭ ರಾಶಿಯವರಿಗೆ ದೂರಾಲೋಚನೆಯಿಂದ ಕಾರ್ಯದಲ್ಲಿ ಯಶಸ್ಸು
ದಿನ ಭವಿಷ್ಯ
ರಾಜೇಶ್ ದುಗ್ಗುಮನೆ
| Updated By: Digi Tech Desk|

Updated on:Feb 16, 2021 | 7:05 PM

Share

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಮಾಘಮಾಸ, ಶಿಶಿರ ಋತು , ಶುಕ್ಲಪಕ್ಷ, ಪಂಚಮಿ ತಿಥಿ, ಮಂಗಳವಾರ, ಫೆಬ್ರವರಿ 16, 2021. ರೇವತಿ ನಕ್ಷತ್ರ, ರಾಹುಕಾಲ: ಇಂದು ಮಧ್ಯಾಹ್ನ 3:23 ಇಂದು ಸಂಜೆ 4:49 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.42. ಸೂರ್ಯಾಸ್ತ: ಸಂಜೆ 6.17.

ದಿನಾಂಕ 16-02-2021 ರ ಮಂಗಳವಾರ ದ ರಾಶಿಭವಿಷ್ಯ

ಮೇಷ: ಶುಭಫಲಗಳು ಕಂಡುಬರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯಗಳು ದೂರಾಗುವವು. ಕೊಟ್ಟಸಾಲ ಪಾವತಿಯಾಗುವದು. ಶುಭ ಸಂಖ್ಯೆ: 3

ವೃಷಭ: ದೂರಾಲೋಚನೆಯಿಂದ ಕಾರ್ಯದಲ್ಲಿ ಯಶಸ್ಸು. ಆಸ್ತಿ ಖರೀದಿ ಸಾಧ್ಯ.ವೈವಾಹಿಕ ಚಿಂತೆ ಇರುವದು. ಧಾರ್ಮಿಕ ಸಮಾರಂಭಗಳಲ್ಲಿ ಭಾಗಿಯಾಗುವ ಯೋಗವಿದೆ. ಧಾರ್ಮಿಕ ಕ್ಷೇತ್ರಗಳ ದರ್ಶನ ಯೋಗವಿದೆ. ಶುಭ ಸಂಖ್ಯೆ: 9

ಮಿಥುನ: ಅತಿಯಾದ ಮಾತು ಅಪಾಯಕ್ಕೆ ಕಾರಣ. ಆಲಸ್ಯದಿಂದ ಕಾರ್ಯಹಾನಿಯಾಗುವ ಸಾಧ್ಯತೆ ಇದೆ. ಆಸ್ತಿ ವ್ಯವಹಾರಗಳಲ್ಲಿ ತಜ್ಞರ ಸಹಾಯ ಪಡೆಯಿರಿ. ನೌಕರರಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆಯ ಆಗುವ ಯೋಗವಿದೆ. ಶುಭ ಸಂಖ್ಯೆ: 4

ಕರ್ಕ: ಜವಾಬ್ದಾರಿಯ ನಿಮಿತ್ತ ದೂರ ಪ್ರಯಾಣದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ ಇರುವದು. ಅಹಂಭಾವದಿಂದ ಕಠಿಣ ಪರಿಸ್ಥಿತಿಯನ್ನು ಎದುರಿಸುವ ಪ್ರಸಂಗವಿದೆ ಎಚ್ಚರಿಕೆ ವಹಿಸಿರಿ. ನಮೃತೆಗೆ ಯೋಗ್ಯ ಸಮ್ಮಾನ ದೊರೆಯುವದು. ಶುಭ ಸಂಖ್ಯೆ: 6

ಸಿಂಹ: ಯೋಜನಾಬದ್ಧ ಕೆಲಸಗಳೂ ಕೂಡ ಮುಂದೂಡುವ ಪ್ರಸಂಗವಿದೆ. ಆಪ್ತವಲಯದಲ್ಲಿ ಸಮಾಲೋಚಿಸಿರಿ. ಅನಿವಾರ್ಯ ಕರ್ತವ್ಯಗಳಿಗೆ ಸಮಯ ಹೊಂದಾಣಿಕೆ ಮಾಡುವ ಸಾಧ್ಯತೆ ಇದೆ. ಆರ್ಥಕ ಸಂಕಷ್ಟಗಳು ಎದುರಾಗುವವು. ಶುಭ ಸಂಖ್ಯೆ: 5

ಕನ್ಯಾ: ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು. ಮಾಡದ ತಪ್ಪಿಗೆ ಕ್ಷಮೆಕೇಳುವ ಪ್ರಸಂಗ ಇರುವದರಿಂದ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಮನಸ್ಸಿನಲ್ಲಿ ಸಂಕಲ್ಪಿಸಿದ ಕಾರ್ಯವು ನಿಧಾನವಾಗಿ ನೆರವೇರಿ ಲಾಭದಾಯಕವಾಗುವದು. ಶುಭ ಸಂಖ್ಯೆ: 1

ತುಲಾ: ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ವಿವಿಧ ಮೂಲಗಳಿಂದ ಸಹಾಯ ದೊರೆಯುವದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭ ಸಂಖ್ಯೆ: 7

ವೃಶ್ಚಿಕ: ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಕೆಲಸದಲ್ಲಿ ಸ್ಪಷ್ಟತೆ ಇರಲಿ. ಅಲ್ಪಧನಲಾಭವಾದರೂ ಹಳೆಯ ಸಾಲ ತೀರುವದು. ವ್ಯಾಪಾರದಲ್ಲಿ ಅಭಿವೃದ್ಧಿಯಾಗುವದು. ವಿವಾಹ ಅಪೇಕ್ಷಿತರಿಗೆ ಕಂಕಣಬಲ ಕೂಡಿಬರುವದು. ಶುಭ ಸಂಖ್ಯೆ: 8

ಧನು: ಅನಿರೀಕ್ಷಿತ ಧನ ನಷ್ಟ. ತಿರುಗಾಟ ಒದಗಿಬಂದು, ದೇಹಾಲಸ್ಯವು ತಲೆ ದೋರುವುದು, ಅರ್ಥಾರ್ಜನೆಯ ಮಾರ್ಗವು ಸುಗಮವಿದ್ದು, ಸಾಂಸಾರಿಕ ದೃಷ್ಟಿಯಲ್ಲೂ ಉತ್ತಮವಿರುವುದರಿಂದ ಚಿಂತೆಯ ಅವಶ್ಯಕತೆ ಇಲ್ಲ. ಶುಭ ಸಂಖ್ಯೆ: 4

ಮಕರ: ಹಲವು ರೀತಿಯಿಂದ ಧನಾಗಮನವಿದ್ದು ಐಶ್ವರ್ಯವೃದ್ಧಿ, ಸಂಸಾರ ಸುಖ. ಅಪೇಕ್ಷಿತ ವಸ್ತು, ಪ್ರಾಪ್ತಿ, ಮಿತ್ರಾಗಮನ, ವಿಶೇಷ ಸಂತೋಷ ಪ್ರಸಂಗಗಳು ಒದಗಿ ಬಂದು ಸಂಭ್ರಮವೆನಿಸುತ್ತದೆ. ಶುಭ ಸಂಖ್ಯೆ: 3

ಕುಂಭ: ಹಿರಿಯರ ಮಾರ್ಗದರ್ಶನ ದೊರೆಲಿದೆ. ಆತ್ಮೀಯರೊಂದಿಗೆ ವಾದವಿವಾದ ಮಾಡಬೇಡಿ. ಮದುವೆಯ ಮಾತುಕತೆ ಕೈಗೂಡುವ ಸಾಧ್ಯತೆ ಇದೆ. ವ್ಯವಹಾರಿಕ ಜಾಣತನದಿಂದ ಲಾಭವಾಗಲಿದೆ. ಮನೆಯಲ್ಲಿ ಸಂತಸ ಕಂಡುಬರುವದು. ಶುಭ ಸಂಖ್ಯೆ: 9

ಮೀನ:ಅನಾವಶ್ಯಕ ತಿರುಗಾಟ, ನೌಕರಿಯಲ್ಲಿ ಕಿರಿಕಿರಿ, ಸ್ಥಾನಪಲ್ಲಟ ಸಾಧ್ಯತೆ, ಬಡ್ತಿಯೋಗ, ವ್ಯಾಪಾರಿಗಳಿಗೆ ಸ್ಥಳದ ವಿಚಾರವಾಗಿ ಚಿಂತೆ ಇರುವದು. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವದು. ತರಕಾರಿ ದಾನ ಮಾಡಿರಿ. ಶುಭ ಸಂಖ್ಯೆ:2

basavaraj guruji

ಬಸವರಾಜ ಗುರೂಜಿ(ಡಾ.ಬಸವರಾಜ ಗುರೂಜಿ ಸಂಪರ್ಕ ಸಂಖ್ಯೆ: 9972848937)

Published On - 6:24 am, Tue, 16 February 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!