ದಿನ ಭವಿಷ್ಯ | ಈ ರಾಶಿಯವರಿಗೆ ಅತಿಯಾದ ಮಾತು ಅಪಾಯಕ್ಕೆ ಕಾರಣವಾಗಬಹುದು
ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಮಾಘಮಾಸ, ಶಿಶಿರ ಋತು , ಶುಕ್ಲಪಕ್ಷ, ಬಿದಿಗೆ ತಿಥಿ, ಶನಿವಾರ, ಫೆಬ್ರವರಿ 13, 2021. ಶತಭಿಷೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 9:36 ರಿಂದ ಬೆಳಿಗ್ಗೆ 11:2ವರೆಗೆ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.43. ಸೂರ್ಯಾಸ್ತ: ಸಂಜೆ 6.16.

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಮಾಘಮಾಸ, ಶಿಶಿರ ಋತು , ಶುಕ್ಲಪಕ್ಷ, ಬಿದಿಗೆ ತಿಥಿ, ಶನಿವಾರ, ಫೆಬ್ರವರಿ 13, 2021. ಶತಭಿಷೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 9:36 ರಿಂದ ಬೆಳಿಗ್ಗೆ 11:2ವರೆಗೆ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.43. ಸೂರ್ಯಾಸ್ತ: ಸಂಜೆ 6.16.
ದಿನಾಂಕ 13-02-2021, ಶನಿವಾರದ ರಾಶಿಭವಿಷ್ಯ
ಮೇಷ ಗುರಿಸಾಧನೆಗೆ ಇದು ಸೂಕ್ತ ಸಮಯ. ಪ್ರಯತ್ನಿಸಿದ ಕಾರ್ಯಗಳು ಕೈಗೂಡುವವು. ವಿದ್ಯಾರ್ಥಿಗಳಿಗೆ ಉನ್ನತ ಪ್ರಶಸ್ತಿ ದೊರಕುವ ಸಾಧ್ಯತೆ ಇರುವದು. ಶುಭ ಸಂಖ್ಯೆ: 8
ವೃಷಭ ಅನಿರೀಕ್ಷಿತ ಧನಲಾಭವಾಗುವದು. ಬುದ್ಧಿಕೌಶಲ್ಯದಿಂದ ಉದ್ಯೋಗದಲ್ಲಿ ಬಡ್ತಿ ಕಂಡುಬರುವದು. ಸಿಟ್ಟಿನ ಸ್ವಭಾವದಿಂದ ತೊದರೆಯಾಗುವ ಸಾಧ್ಯತೆ ಇದೆ. ಕಾರ್ಯಕ್ಷಮತೆಗೆ ತಕ್ಕ ಫಲ ದೊರೆಯುವದು. ಶುಭ ಸಂಖ್ಯೆ: 6
ಮಿಥುನ ಸತತ ಪ್ರಯತ್ನಕ್ಕೆ ಫಲ ಇದ್ದೇ ಇರುತ್ತದೆ. ವೃತ್ತಿಕೌಶಲ್ಯದಿಂದ ಅಸಾಧ್ಯವಾದ ಕಾರ್ಯವನ್ನೂ ಸಾಧಿಸುವಿರಿ. ಧನಮೂಲಗಳು ಹೆಚ್ಚಾಗುವವು.ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವದು. ಶುಭ ಸಂಖ್ಯೆ: 1
ಕರ್ಕ ಆಸ್ತಿ ಖರೀದಿ ಅಥವಾ ಮಾರಾಟದ ವ್ಯವಹಾರಗಳು ಕುದುರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಯೋಗ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವದು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಯೋಗವಿದೆ. ಶುಭ ಸಂಖ್ಯೆ: 4
ಸಿಂಹ ವಸ್ತು-ವಾಹನ-ಆಸ್ತಿ ಖರೀದಿ ಯೋಗವಿದೆ.ಅನವಶ್ಯಕ ಅಲೆದಾಟದ ಸಾದ್ಯತೆ ಇದೆ. ಮನೆಯ ಹಿರಿಯರ ಆರೋಗ್ಯದ ಚಿಂತೆ ಇರುವದು. ಬುದ್ಧಿವಂತಿಕೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ. ಶುಭ ಸಂಖ್ಯೆ: 3
ಕನ್ಯಾ ಅತಿಯಾದ ಮಾತು ಅಪಾಯಕ್ಕೆ ಕಾರಣ. ಆಲಸ್ಯದಿಂದ ಕಾರ್ಯಹಾನಿಯಾಗುವ ಸಾಧ್ಯತೆ ಇದೆ. ಆಸ್ತಿ ವ್ಯವಹಾರಗಳಲ್ಲಿ ತಜ್ಞರ ಸಹಾಯ ಪಡೆಯಿರಿ. ನೌಕರರಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆಯ ಆಗುವ ಯೋಗವಿದೆ. ಶುಭ ಸಂಖ್ಯೆ: 9
ತುಲಾ ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವದು. ವಿದೇಶ ಪ್ರಯಾಣದ ಯೋಗವಿದೆ. ಶುಭ ಸಂಖ್ಯೆ: 5
ವೃಶ್ಚಿಕ ಅಪೇಕ್ಷಿತ ಸ್ಥಾನಮಾನಗಳು ದೊರೆಯುವವು. ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಭಂಗವಿಲ್ಲ. ಆದಾಯಕ್ಕಿಂ ಅಧಿಕ ಖರ್ಚು ಇರುವದು. ಶುಭ ಸಂಖ್ಯೆ: 6
ಧನು ವೃತ್ತಿಪರೆತೆಯಿಂದ ಕಾರ್ಯ ಕೈಗೂಡುವದು. ಪರಿವಾರದೊಂದಿಗೆ ದೂರ ಪ್ರವಾಸದ ಯೋಗವಿದೆ. ಉತ್ತಮವಾದ ಸಮಯ ಇರುವದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವದು. ಶುಭ ಸಂಖ್ಯೆ: 1
ಮಕರ ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವದು. ಮನೋಚಿಂತಿತ ಕಾರ್ಯ ಕೈಗೂಡುವದು. ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವದು. ಪರರ ಸಹಾಯದ ಅನಿವಾರ್ಯತೆ ಇರಲಾರದು. ಆರೋಗ್ಯದ ಕಾಳಜಿ ಇರಲಿ. ಶುಭ ಸಂಖ್ಯೆ: 2
ಕುಂಭ ಶುಭ ಕರ್ಮ ಸಂಪ್ರಾಪ್ತಿಯಿದ್ದು, ಗುರುವರ್ಗ ಸಂತೋಷ, ಸಂಸಾರ ಸುಖ. ನೂತನ ಮಿತ್ರಭೇಟಿ, ಅರ್ಥಾರ್ಜನೆಯು ಉತ್ತಮವಿದೆ. ಆದರೂ ಗೃಹಕಲಹ, ಬಂಧು ಜನರಲ್ಲಿ ಅಸಮಾಧಾನ ಕಂಡುಬರುವದು. ಶುಭ ಸಂಖ್ಯೆ: 3
ಮೀನ ನಿರೀಕ್ಷಿತ ಸರ್ವಕಾರ್ಯಗಳು ನೆರವೆರುತ್ತದೆ. ಆರ್ಥಿಕ ಮಟ್ಟವೂ ಏರಿ, ಸ್ಥಿರಪ್ರಾಪ್ತಿ, ಸಂಸಾರಸುಖ ಸಂಬ್ರಮಗಳಿರುತ್ತದೆ. ಶುಭ ಕಾರ್ಯ ಪ್ರಯತ್ನ ಫಲಕೊಡುತ್ತದೆ. ಶುಭ ಸಂಖ್ಯೆ: 7

ಬಸವರಾಜ ಗುರೂಜಿ(ಡಾ.ಬಸವರಾಜ ಗುರೂಜಿ ಸಂಪರ್ಕ ಸಂಖ್ಯೆ: 9972848937)
Published On - 7:04 am, Sat, 13 February 21




