AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope ದಿನ ಭವಿಷ್ಯ | ಈ ರಾಶಿಯವರು ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಎಚ್ಚರಿಕೆವಹಿಸಿ

Today Horoscope ಫೆಬ್ರವರಿ 26, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope ದಿನ ಭವಿಷ್ಯ | ಈ ರಾಶಿಯವರು ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಎಚ್ಚರಿಕೆವಹಿಸಿ
ದಿನ ಭವಿಷ್ಯ
ಆಯೇಷಾ ಬಾನು
ಆಯೇಷಾ ಬಾನು|

Updated on:Feb 26, 2021 | 9:04 AM

Share

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಶುಕ್ಲಪಕ್ಷ, ಚತುರ್ದಶಿ ತಿಥಿ, ಶುಕ್ರವಾರ, ಫೆಬ್ರವರಿ 26, 2021. ಆಶ್ಲೇಷ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 1.00 ರಿಂದ ಬೆಳಿಗ್ಗೆ 12.28. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.36. ಸೂರ್ಯಾಸ್ತ: ಸಂಜೆ 6.21.

ತಾ.26-02-2021 ರ ಶುಕ್ರವಾರದ ರಾಶಿಭವಿಷ್ಯ

ಮೇಷ: ಉದರಬೇನೆ ಬರುವ ಸಾಧ್ಯತೆ ಇದೆ ಆರೋಗ್ಯದ ಕಾಳಜಿವಹಿಸಿ. ಬಂಧುಮಿತ್ರರ ಭೇಟಿ, ಮನೆಯಲ್ಲಿ ಮಂಗಲಕಾರ್ಯ ಜರುಗುವ ಯೋಗವಿದೆ. ಕೋಟ್​ನಲ್ಲಿರುವ ವ್ಯಾಜ್ಯಗಳು ಕೊನೆಗೊಳ್ಳುವವು. ಶುಭ ಸಂಖ್ಯೆ: 5

ವೃಷಭ: ಚಂಚಲಚಿತ್ತದಿಂದ ಕಾರ್ಯಹಾನಿಯಾಗುವ ಲಕ್ಷಣಗಳಿವೆ. ಆಸ್ತಿ ಸಂಬಂಧಿತ ಕ್ರಯವಿಕ್ರಯ ವ್ಯವಹಾರಗಳು ಕುದುರುವವು. ಅನವಶ್ಯಕ ಮಾತಿನಿಂದ ಇಕ್ಕಟ್ಟಿಗೆ ಸಿಕ್ಕಿಕೊಳ್ಳುವ ಸಾಧ್ಯತೆ ಇದೆ. ತಜ್ಞರ ಸಹಾಯ ಪಡೆಯಿರಿ. ಶುಭ ಸಂಖ್ಯೆ: 2

ಮಿಥುನ: ಹಿರಿಯರ ಮಾರ್ಗದರ್ಶನ ದೊರೆಯಲಿದೆ. ಆತ್ಮೀಯರೊಂದಿಗೆ ವಾದವಿವಾದ ಮಾಡಬೇಡಿ. ಮದುವೆಯ ಮಾತುಕತೆ ಕೈಗೂಡುವ ಸಾಧ್ಯತೆ ಇದೆ. ವ್ಯವಹಾರಿಕ ಜಾಣತನದಿಂದ ಲಾಭವಾಗಲಿದೆ. ಮನೆಯಲ್ಲಿ ಸಂತಸ ಕಂಡುಬರುವುದು. ಶುಭ ಸಂಖ್ಯೆ: 4

ಕರ್ಕ: ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ಶುಭ ಸಂಖ್ಯೆ: 7

ಸಿಂಹ: ಮಹಿಳೆಯರ ಇಷ್ಟಾರ್ಥ ಸಿದ್ಧಿಸುವುದು. ಕೂಡಿಟ್ಟ ಹಣ ಉಪಯೋಗವಾಗುವ ಸಂಭವವಿದೆ. ಸರಕಾರಿ ಕೆಲಸಗಳು ನಿರ್ವಿಘ್ನವಾಗಿ ಆಗುವವು. ನ್ಯಾಯಾಲಯದಲ್ಲಿ ಜಯ ದೊರೆಯುವುದು. ವಿದ್ಯೆಯಲ್ಲಿ ಸಾಧನೆ ಇರುವುದು. ಶುಭ ಸಂಖ್ಯೆ: 9

ಕನ್ಯಾ: ಆರ್ಥಿಕ ಸ್ಥಿತಿ ಸುಧಾರಿಸುವುದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವುದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ. ಶುಭ ಸಂಖ್ಯೆ: 5

ತುಲಾ: ತಪ್ಪುಗಳನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಅಧಿಕಾರಿಗಳ ಕಿರಿಕಿರಿಗೆ ಮಣಿಯದೇ ಧೈರ್ಯದಿಂದ ಕೆಲಸ ನಿರ್ವಹಿಸಿರಿ. ಮತ್ತೊಬ್ಬರ ಮೇಲೆ ಅತಿಯಾದ ವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಶುಭ ಸಂಖ್ಯೆ: 6

ವೃಶ್ಚಿಕ: ಅನಾವಶ್ಯಕ ತಿರುಗಾಟದಿಂದ ಆಲಸ್ಯ. ದುರ್ಜನರ ಸಹವಾಸ ದೋಷ ಕಂಡುಬರುವುದು. ಐಷಾರಾಮಿ ವಸ್ತುಗಳ ಖರೀದಿ ಸಂಭವ. ವ್ಯಾಪಾರ-ಉದ್ಯಮಗಳಲ್ಲಿ ತೃಪ್ತಿದಾಯಕ ಲಾಭವಿರುವುದು. ವಿದ್ಯಾರ್ಥಿಗಳಿಗೆ ಹಿನ್ನಡೆ ಇರುವುದು. ಶುಭ ಸಂಖ್ಯೆ: 3

ಧನು: ವಿವಿಧ ಮೂಲಗಳಿಂದ ಸಹಾಯ ದೊರೆಯುವುದು. ಉದ್ಯೋಗದಲ್ಲಿ ಅಭಿವೃದ್ಧಿ ಇರುವುದು. ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವಿರಿ. ಲೆಕ್ಕಾಚಾರ ತಪ್ಪದಂತೆ ಎಚ್ಚರವಹಿಸಿರಿ. ಮನೆಯಲ್ಲಿ ಮಂಗಲಕಾರ್ಯ ಜರುಗುವುದು. ಶುಭ ಸಂಖ್ಯೆ: 6

ಮಕರ: ಪ್ರತಿಯೊಂದು ಕೆಲಸದಲ್ಲಿಯೂ ವಿಳಂಬ ಉಂಟಾಗುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳು ಹೆಚ್ಚಾಗುವವು. ವೃಥಾ ತಿರುಗಾಟ ಇರುವದು ಆದರೂ ಕೀರ್ತಿದಾಯಕ ಫಲವಿದೆ. ಶುಭ ಸಂಖ್ಯೆ: 7

ಕುಂಭ: ಭವಿಷ್ಯತ್ತಿನ ಉಪೇಕ್ಷೆ ಮಾಡದೇ ಉಳಿತಾಯಕ್ಕೆ ಗಮನಹರಿಸಿರಿ. ಆಪತ್ತುಗಳ ಪರಿಹಾರಕ್ಕಾಗಿ ವ್ಯಥಾ ತಿರುಗಾಟದ ಸಂಭವವಿದೆ. ಹಿರಿಯರ ಸಲಹೆಗೆ ತಕ್ಕಂತೆ ಮುಂದುವರೆಯಿರಿ. ಶುಭ ಸಂಖ್ಯೆ: 8

ಮೀನ: ಪೂರ್ಣವಿಶ್ವಾಸ ಇಲ್ಲದ ಅಥವಾ ತಿಳಿಯದ ಕೆಲಸದಲ್ಲಿ ಹಣವ್ಯಯ ಮಾಡಬೇಡಿ. ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಎಚ್ಚರಿಕೆ ಇರಲಿ. ದಿನದ ಕೆಲಸ ಬೇಸರ ಉಂಟುಮಾಡುವ ಸಾಧ್ಯತೆ ಇದೆ. ಶುಭ ಸಂಖ್ಯೆ: 7

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Published On - 6:48 am, Fri, 26 February 21

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!