AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope – ದಿನ ಭವಿಷ್ಯ: ಈ ರಾಶಿಯವರಿಗಿಂದು ಸಂಗಾತಿಯು ಬಹುದಿನಗಳ ಬೇಡಿಕೆ ಈಡೇರಿಸಲಿದ್ದಾರೆ

Today Horoscope: ಮಾರ್ಚ್ 03, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Daily Horoscope - ದಿನ ಭವಿಷ್ಯ: ಈ ರಾಶಿಯವರಿಗಿಂದು ಸಂಗಾತಿಯು ಬಹುದಿನಗಳ ಬೇಡಿಕೆ ಈಡೇರಿಸಲಿದ್ದಾರೆ
ದಿನ ಭವಿಷ್ಯ
ಆಯೇಷಾ ಬಾನು
| Edited By: |

Updated on:Mar 03, 2021 | 9:31 AM

Share

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣಪಕ್ಷ, ಪಂಚಮಿ ತಿಥಿ, ಬುಧವಾರ, ಮಾರ್ಚ್ 03, 2021. ಸ್ವಾತಿ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 12.27 ರಿಂದ ಮಧ್ಯಾಹ್ನ 1.55. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.33. ಸೂರ್ಯಾಸ್ತ: ಸಂಜೆ 6.22.

ತಾ.03-03-2021 ರ ಬುಧವಾರದ ರಾಶಿಭವಿಷ್ಯ

ಮೇಷ: ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಗೆ ಅವಕಾಶವಿದ್ದರೂ ಉದಾಸೀನ ಪ್ರವೃತ್ತಿ ತೋರಿಬರಲಿದೆ. ಆರ್ಥಿಕವಾಗಿ ಹಣಕಾಸಿನ ವಿಚಾರದಲ್ಲಿ ಚಿಂತೆಯಾದೀತು. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಪಡೆಯಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಶುಭ ಸಂಖ್ಯೆ: 5

ವೃಷಭ: ನಿಮ್ಮ ಖಾಸಗಿ ಬದುಕಿನಲ್ಲಿ ಮೂಗು ತೂರಿಸುವವರನ್ನು ನಿರ್ಲ್ಷ್ಯಕ್ಷಿಸುವುದೇ ಉತ್ತಮ. ನಿಮ್ಮ ಮನಸ್ಸಿಗೆ ಹಿಡಿಸಿದವರ ಜತೆ ಸುಂದರ ಕ್ಷಣ ಕಳೆಯಲಿದ್ದಾರೆ. ಅಧಿಕಾರಿ ವರ್ಗದವರಿಗೆ ಸ್ಥಾನಪಲ್ಲಟ ಭೀತಿಯಿರಲಿದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ. ಶುಭ ಸಂಖ್ಯೆ: 4

ಮಿಥುನ: ಶುಭ ಮಂಗಲ ಕಾರ್ಯಕ್ಕಾಗಿ ಓಡಾಟ ನಡೆಸಲಿದ್ದೀರಿ. ಮನೆಗೆ ಅನಿರೀಕ್ಷಿತ ಬಂಧು ಮಿತ್ರರ ಆಗಮನವಾಗಲಿದೆ. ಆರ್ಥಿಕವಾಗಿ ಧನ ಗಳಿಕೆಗೆ ಉತ್ತಮ ದಾರಿ ತೋರಿಬರಲಿದೆ. ವ್ಯಾಪಾರಿಗಳಿಗೆ ಮುನ್ನಡೆಯ ಯೋಗವಿದೆ. ಕಿರು ಓಡಾಟ ನಡೆಸುವಿರಿ. ಶುಭ ಸಂಖ್ಯೆ: 7

ಕರ್ಕ: ಆತ್ಮವಿಶ್ವಾಸದ ಕೊರತೆಯಿಂದ ಹೊಸ ನಿರ್ಧಾರ ಕೈಗೊಳ್ಳಲು ಹಿಂದೇಟು ಹಾಕಲಿದ್ದೀರಿ. ಸ್ವಯಂ ವ್ಯಾಪಾರಿಗಳಿಗೆ ಲಾಭಕರ ದಿನಗಳು. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆಯ ಕೊರತೆ ಉಂಟಾಗಿದೆ. ದೇವತಾ ಪ್ರಾರ್ಥನೆ ಮಾಡಿ. ಶುಭ ಸಂಖ್ಯೆ: 3

ಸಿಂಹ: ಕೌಟುಂಬಿಕವಾಗಿ ನಿಮಗೆ ಅನುಕೂಲಕರವಲ್ಲದ ಪರಿಸ್ಥಿತಿಯಿರಲಿದ್ದು, ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ ವಹಿಸಿ. ಕಾರ್ಯನಿಮಿತ್ತ ದೂರ ಸಂಚಾರದಿಂದ ದೇಹಾಯಾಸವಾದೀತು. ಹಿರಿಯರಿಗೆ ಲಾಭಾಪೇಕ್ಷೆಯಿಲ್ಲದೇ ಮಾಡುವ ಕೆಲಸದಿಂದ ನೆಮ್ಮದಿ ಸಿಗಲಿದೆ. ಶುಭ ಸಂಖ್ಯೆ: 1

ಕನ್ಯಾ: ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಮುನ್ನಡೆಯ ಯೋಗವಿದೆ. ಆದರೆ ಮಹಿಳೆಯರಿಂದ ಅಪವಾದದ ಭೀತಿಯಿದೆ. ಎಚ್ಚರಿಕೆಯಿಂದಿರಿ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆಬರಲಿದೆ. ಅನಗತ್ಯ ಚಿಂತೆ ಬೇಡ. ಶುಭ ಸಂಖ್ಯೆ: 9

ತುಲಾ: ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗದೇ ಮನಸ್ಸಿಗೆ ಬೇಸರವಾದೀತು. ಪೋಷಕರ ಮನಸ್ಸಿಗೆ ನೋವುಂಟುಮಾಡಬೇಡಿ. ಕಳೆದು ಹೋದ ವಸ್ತು ಮರಳಿ ಪಡೆಯಲು ಪ್ರಯತ್ನ ನಡೆಸುವಿರಿ. ಇಷ್ಟದೇವರ ಪ್ರಾರ್ಥನೆ ಮಾಡಿ. ಶುಭ ಸಂಖ್ಯೆ: 5

ವೃಶ್ಚಿಕ: ಸಂಗಾತಿಯು ನಿಮ್ಮ ಬಹುದಿನಗಳ ಬೇಡಿಕೆ ಈಡೇರಿಸಲಿದ್ದಾರೆ. ಆರ್ಥಿಕವಾಗಿ ಖರ್ಚು ವೆಚ್ಚಗಳಿಗೆ ಕೊಂಚ ಕಡಿವಾಣ ಹಾಕುವುದು ಉತ್ತಮ. ಗೃಹ ಸಂಬಂಧಿ ಕೆಲಸಗಳಿಗೆ ಅಡಚಣೆಗಳು ತೋರಿಬಂದೀತು. ನಿಧಾನವಾಗಿ ಯೋಚಿಸಿ ಹೆಜ್ಜೆಯಿಡಿ. ಶುಭ ಸಂಖ್ಯೆ: 8

ಧನು: ಅನಗತ್ಯ ವಿಚಾರಗಳಿಗೆ ತಲೆಕೆಡಿಸಿಕೊಂಡು ಸಂಗಾತಿಯ ಮನಸ್ಸೂ ಹಾಳುಮಾಡಬೇಡಿ. ದಾಂಪತ್ಯದಲ್ಲಿ ಹೊಂದಾಣಿಕೆ ಮುಖ್ಯ. ಮಾತಿನ ಮೇಲೆ ಕೊಂಚ ನಿಗಾ ಇರಲಿ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳೊಂದಿಗೆ ಸಂಘರ್ಷವಾಗದಂತೆ ಎಚ್ಚರಿಕೆವಹಿಸಿ. ಶುಭ ಸಂಖ್ಯೆ: 4

ಮಕರ: ಕಾರ್ಯರಂಗದಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಂಡುಬರಲಿದ್ದು, ಆರ್ಥಿಕವಾಗಿ ಚೇತರಿಕೆ ಕಂಡುಬರಲಿದೆ. ಮನೋಭಾವನೆಗಳನ್ನು ಹತೋಟಿಯಲ್ಲಿಡುವುದು ಮುಖ್ಯ. ನೂತನ ದಂಪತಿಗಳಿಗೆ ಮಧುಚಂದ್ರದ ಭಾಗ್ಯ ಒದಗಿಬರಲಿದೆ. ಶುಭ ಸಂಖ್ಯೆ: 7

ಕುಂಭ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಬಡ್ತಿ ಯೋಗವಿದೆ. ಕೌಟುಂಬಿಕವಾಗಿ ಸುಖ ಶಾಂತಿಗೆ ಕೊರತೆಯಿರದು. ಆದರೆ ಮಕ್ಕಳ ಆರೋಗ್ಯದ ಬಗ್ಗೆ ಜಾಗ್ರತೆ ವಹಿಸುವುದು ಉತ್ತಮ. ವಿದ್ಯಾರ್ಥಿಗಳಿಗೆ ಮುನ್ನಡೆಯ ಯೋಗವಿದೆ. ದಿನದಂತ್ಯಕ್ಕೆ ಸಂತೋಷದ ಸುದ್ದಿ. ಶುಭ ಸಂಖ್ಯೆ: 6

ಮೀನ: ಬಹಳ ದಿನಗಳ ನಂತರ ನಿಮ್ಮ ಇಷ್ಟದ ವ್ಯಕ್ತಿಗಳನ್ನು ಭೇಟಿಯಾದ ಖುಷಿ ಸಿಗಲಿದೆ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಉದರ ಸಂಬಂಧೀ ಆರೋಗ್ಯ ಸಮಸ್ಯೆ ಕಾಡೀತು. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ಶುಭ ಸಂಖ್ಯೆ: 3

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Published On - 6:39 am, Wed, 3 March 21

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?