AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope ದಿನ ಭವಿಷ್ಯ | ಈ ರಾಶಿಯವರು ಕಾಯಕನಿಷ್ಠೆ ಹೊರೆಯಾಗದಂತೆ ನೋಡಿಕೊಳ್ಳಬೇಕಿದೆ, ಇಲ್ಲದಿದ್ದರೇ..

Today Horoscope ಮಾರ್ಚ್ 11, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope ದಿನ ಭವಿಷ್ಯ | ಈ ರಾಶಿಯವರು ಕಾಯಕನಿಷ್ಠೆ ಹೊರೆಯಾಗದಂತೆ ನೋಡಿಕೊಳ್ಳಬೇಕಿದೆ, ಇಲ್ಲದಿದ್ದರೇ..
ದಿನ ಭವಿಷ್ಯ
ಆಯೇಷಾ ಬಾನು
ಆಯೇಷಾ ಬಾನು|

Updated on: Mar 11, 2021 | 6:19 AM

Share

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣಪಕ್ಷ, ತ್ರಯೋದಶಿ ತಿಥಿ, ಗುರುವಾರ, ಮಾರ್ಚ್ 10, 2021. ಧನಿಷ್ಥೆ ನಕ್ಷತ್ರ, ರಾಹುಕಾಲ : ಇಂದು ಮಧ್ಯಾಹ್ನ 1.55 ರಿಂದ ಇಂದು ಸಂಜೆ 3.24ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.27. ಸೂರ್ಯಾಸ್ತ: ಸಂಜೆ 6.24.

ತಾ.11-03-2021 ರ ಗುರುವಾರದ ರಾಶಿಭವಿಷ್ಯ

ಮಹಾಶಿವರಾತ್ರಿಯ ಶುಭಾಶಯಗಳು. “ಓಂ ನಮಃ ಶಿವಾಯ”

ಮೇಷ: ವ್ಯಾಪಾರದಲ್ಲಿ ಅದೃಷ್ಟಲಾಭವಿದೆ. ವಿದ್ಯಾರ್ಥಿಗಳ ಮನೋಭಿಲಾಷೆ ಈಡೇರುವುದು. ಮನೆಯ ಜವಾಬ್ದಾರಿಗಳು ಹೆಚ್ಚುವವು. ಹಿರಿಯರ ಆರೋಗ್ಯದಲ್ಲಿ ಏರುಪೇರಾಗುವ ಸಂಭವವಿದೆ. ಶುಭ ಸಂಖ್ಯೆ: 8

ವೃಷಭ: ಹಿತವಾದ ಮಾತುಗಳು ಗೌರವವನ್ನು ವೃದ್ಧಿಸುವವು. ಆರ್ಥಿಕ ಸಂಕಷ್ಟಗಳು ಎದುರಾಗುವವು. ಸಮಾಧಾನ ಚಿತ್ತದಿಂದ ಕಾರ್ಯ ನಿರ್ವಹಿಸಿರಿ. ಹಿತೈಷಿಗಳಂತೆ ವರ್ತಿಸುವವರಿಂದ ದೂರವಿರಿ. ಶುಭ ಸಂಖ್ಯೆ: 2

ಮಿಥುನ: ಕಾಯಕನಿಷ್ಠೆ ನಿಮಗೇ ಹೊರೆಯಾಗದಂತೆ ನೋಡಿಕೊಳ್ಳಿರಿ. ನಿರಂತರ ದುಡಿಮೆಯಿಂದ ಅನಾರೋಗ್ಯ ಅಥವಾ ಮಾನಸಿಕ ಕಿರಿಕಿರಿ ಆಗುವ ಸಂಭವವಿದೆ. ಹಣಕಾಸಿನಿನ ವ್ಯವಹಾರದಲ್ಲಿ ಎಚ್ಚರಿಕೆವಹಿಸಿರಿ. ಶುಭ ಸಂಖ್ಯೆ: 6

ಕರ್ಕ: ಅಪಮಾನ, ಅಪವಾದದಂತಹ ಸಮಸ್ಸೆಗೆ ಸಿಲುಕದಂತೆ ಜಾಗರೂಕರಾಗಿರಿ. ಈ ಸಮಯದಲ್ಲಿ ಮಾತನಾಡುವ ಬದಲು ಮಾತು ಕೇಳುವುದು ಉತ್ತಮ. ಮಕ್ಕಳು ಶಾಲಾ ಕಾಲೇಜುಗಳಲ್ಲಿ ಸಾಧನೆ ತೋರುವರು. ಶುಭ ಸಂಖ್ಯೆ: 7

ಸಿಂಹ: ವ್ಯಕ್ತಿತ್ವಕ್ಕೆ ತಕ್ಕ ಗೌರವಗಳು ದೊರೆಯುವವು. ಚಾಣಾಕ್ಷತನದಿಂದ ಕಷ್ಟ ಪರಿಹರಿಸಿಕೊಳ್ಳುವಿರಿ. ಅಪೇಕ್ಷಿತ ಕಾರ್ಯಗಳು ಕೈಗೂಡುವವು. ಸಂಬಂಧಿಗಳಿಂದ ಸಹಕಾರ ದೊರೆಯುವುದು. ದೂರ ಪ್ರಯಾಣ, ಪರ ಸ್ಥಳವಾಸ ಸಂಭವ. ಶುಭ ಸಂಖ್ಯೆ: 3

ಕನ್ಯಾ: ಎಲ್ಲವನ್ನು ಹಗುರವಾಗಿ ಕಾಣುವುದರಿಂದ ಸಣ್ಣ ವಿಷಯವೂ ದೊಡ್ಡ ಸಮಸ್ಯೆಯಾಗುವುದು. ಹಣಕಾಸಿನ ತೊಂದರೆಗಳು ಕಂಡುಬರುವವು. ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ: 4

ತುಲಾ: ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯ ಪ್ರವೃತ್ತಿಯು ಉತ್ತಮ ಫಲಕೊಡುವುದು. ಹಳೆಯ ಬಾಕಿ ವಸೂಲಾಗುವುದು. ವ್ಯಾಜ್ಯಗಳು ಅಂತ್ಯಕಾಣುವವು. ಗ್ರಹ ಸೌಖ್ಯವಿರುವುದು. ಶುಭ ಸಂಖ್ಯೆ: 5

ವೃಶ್ಚಿಕ: ಪ್ರಮುಖ ಯೋಜನೆಗಳ ಜವಾಬ್ದಾರಿ ಹೆಚ್ಚುವುದು. ಆರ್ಥಿಕ ಅಭಿವೃದ್ಧಿ ಕಂಡುಬರುವುದು. ಸ್ನೇಹಿತರ ಭಿನ್ನಾಭಿಪ್ರಾಯ ಬಗೆಹರಿಯುವುದು. ಶತೃಗಳೂ ಸೌಮ್ಯರಾಗುವ ಕಾಲ ಇರುವುದರಿಂದ ಅಪೇಕ್ಷಿತ ಕಾರ್ಯವನ್ನು ಸಾಧಿಸುವಿರಿ. ಶುಭ ಸಂಖ್ಯೆ: 6

ಧನು: ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವದು. ಆಶೆ ಆಕಾಂಕ್ಷಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಉನ್ನತ ಶಿಕ್ಷಣದ ಕನಸು ಈಡೇರುವುದು. ಶುಭ ಸಂಖ್ಯೆ: 1

ಮಕರ: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ. ಶುಭ ಸಂಖ್ಯೆ: 3

ಕುಂಭ: ಹಲವು ರೀತಿಯಿಂದ ಧನಾಗಮನವಿದ್ದು ಐಶ್ವರ್ಯವೃದ್ಧಿ, ಸಂಸಾರ ಸುಖ. ಅಪೇಕ್ಷಿತ ವಸ್ತು, ಪ್ರಾಪ್ತಿ, ಮಿತ್ರಾಗಮನ, ವಿಶೇಷ ಸಂತೋಷ ಪ್ರಸಂಗಗಳು ಒದಗಿ ಬಂದು ಸಂಭ್ರಮವೆನಿಸುತ್ತದೆ. ಶುಭ ಸಂಖ್ಯೆ: 2

ಮೀನ: ಅಲ್ಪ ತ್ರಾಸದಾಯಕ. ಗಡಿಬಿಡಿಯ ವಾತಾವರಣ, ಆರೋಗ್ಯದಲ್ಲಿ ಏರುಪೇರು ಸಂಭವ. ಮಹತ್ವದ ಕೆಲಸಗಳನ್ನು ಮುಂದೂಡುವದು ಒಳ್ಳೆಯದು. ಮಂಗಲಕಾರ್ಯ, ಹೆಸರು, ಕಡಲೆ ದಾನ ಮಾಡಿರಿ. ಶುಭ ಸಂಖ್ಯೆ: 9 ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!