AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope ದಿನ ಭವಿಷ್ಯ | ಈ ರಾಶಿಯವರಿಗೆ ಉದ್ಯೋಗ ಪ್ರಾಪ್ತಿ ಭಾಗ್ಯವಿದೆ

Today Horoscope ಮಾರ್ಚ್ 12, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope ದಿನ ಭವಿಷ್ಯ | ಈ ರಾಶಿಯವರಿಗೆ ಉದ್ಯೋಗ ಪ್ರಾಪ್ತಿ ಭಾಗ್ಯವಿದೆ
ದಿನ ಭವಿಷ್ಯ
ಆಯೇಷಾ ಬಾನು
|

Updated on:Mar 12, 2021 | 6:27 AM

Share

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣಪಕ್ಷ, ಚತುರ್ದಶಿ ತಿಥಿ, ಶುಕ್ರವಾರ, ಮಾರ್ಚ್ 10, 2021. ಶತಭಿಷೆ ನಕ್ಷತ್ರ, ರಾಹುಕಾಲ : ಇಂದು ಬೆಳಿಗ್ಗೆ 10.55 ರಿಂದ ಇಂದು ಬೆಳಿಗ್ಗೆ 12.24ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.26. ಸೂರ್ಯಾಸ್ತ: ಸಂಜೆ 6.25.

ತಾ.12-03-2021 ರ ಶುಕ್ರವಾರದ, ರಾಶಿಭವಿಷ್ಯ

ಮೇಷ: ವಿನಾಕಾರಣ ನಿಂದನೆಯ ಸಂಭವವಿದೆ. ಖರ್ಚುಹೆಚ್ಚಾಗುವುದು ಯೋಗ ಇರುವುದರಿಂದ ಉಳಿತಾಯದ ಯೋಜನೆ ಮಾಡಿರಿ. ಮನೆಯಲ್ಲಿ ಶಾಂತಿಯುತ ನೆಮ್ಮದಿಯ ವಾತಾವರಣ ಇರುವುದು. ಶುಭ ಸಂಖ್ಯೆ: 9

ವೃಷಭ: ಕಾಯಕನಿಷ್ಠೆ ನಿಮಗೇ ಹೊರೆಯಾಗದಂತೆ ನೋಡಿಕೊಳ್ಳಿರಿ. ನಿರಂತರ ದುಡಿಮೆಯಿಂದ ಅನಾರೋಗ್ಯ ಅಥವಾ ಮಾನಸಿಕ ಕಿರಿಕಿರಿ ಆಗುವ ಸಂಭವವಿದೆ. ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆವಹಿಸಿರಿ. ಶುಭ ಸಂಖ್ಯೆ: 2

ಮಿಥುನ: ಉದ್ಯೋಗ ಪ್ರಾಪ್ತಿ, ಉದ್ಯಮದಲ್ಲಿ ಪ್ರಗತಿ ಇರುವುದು. ಹಳೆಯ ಸಾಲ ತೀರುವುದು. ಅನೇಕ ಮೂಲಗಳಿಂದ ಧನಪ್ರಾಪ್ತಿಯ ಯೋಗವಿದೆ. ಬಂಧುವರ್ಗದಲ್ಲಿಯ ಅಸಮಾಧಾನಗಳು ಪರಿಹಾರವಾಗುವವು. ಶುಭ ಸಂಖ್ಯೆ: 6

ಕರ್ಕ: ಜವಾಬ್ದಾರಿಯ ನಿಮಿತ್ತ ದೂರ ಪ್ರಯಾಣದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ ಇರುವುದು. ಅಹಂಭಾವದಿಂದ ಕಠಿಣ ಪರಿಸ್ಥಿತಿಯನ್ನು ಎದುರಿಸುವ ಪ್ರಸಂಗವಿದೆ ಎಚ್ಚರಿಕೆ ವಹಿಸಿರಿ. ನಮೃತೆಗೆ ಯೋಗ್ಯ ಸಮ್ಮಾನ ದೊರೆಯುವುದು. ಶುಭ ಸಂಖ್ಯೆ: 6

ಸಿಂಹ: ಒಂದೇ ಮನಸಿನ ಕ್ರೀಯಾಶೀಲವಾದ ಬದುಕು ಸಾಧನೆಗೆ ಕಾರಣವಾಗುವುದು. ಅಡೆತಡೆಗಳ ನಿವಾರಣೆಯಾಗುವುದು. ನಿಶ್ಚಿತ ಅವಧಿಯ ಪರೀಕ್ಷೆಗಳು ಎದುರಾದರೂ ಬಲಗುಂದುವುದಿಲ್ಲ. ಹಿರಿಯರ ಸಲಹೆ ದೊರೆಯುವುದು. ಶುಭ ಸಂಖ್ಯೆ: 8

ಕನ್ಯಾ: ಅಪೇಕ್ಷಿತ ಸ್ಥಾನಮಾನಗಳು ದೊರೆಯುವವು. ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಭಂಗವಿಲ್ಲ. ಆದಾಯಕ್ಕಿಂತ ಅಧಿಕ ಖರ್ಚು ಇರುವುದು. ಶುಭ ಸಂಖ್ಯೆ: 4

ತುಲಾ: ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವುದು ಒಳಿತು. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವುದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ. ಶುಭ ಸಂಖ್ಯೆ: 1

ವೃಶ್ಚಿಕ: ವೃತ್ತಿಪರತೆಯಿಂದ ಕಾರ್ಯ ಕೈಗೂಡುವುದು. ಪರಿವಾರದೊಂದಿಗೆ ದೂರ ಪ್ರವಾಸದ ಯೋಗವಿದೆ. ಉತ್ತಮವಾದ ಸಮಯ ಇರುವುದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಶುಭ ಸಂಖ್ಯೆ:7

ಧನು: ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಅಪೇಕ್ಷಿತ ಧನಸಹಾಯ ದೊರೆಯುವುದು. ಶುಭ ಸಂಖ್ಯೆ: 3

ಮಕರ: ತಾಪತ್ರಯಗಳೆಲ್ಲ ದೂರವಾಗಿದ್ದು ಆರ್ಥಿಕ ಸ್ಥಿತಿ ಸುಧಾರಣೆಯಾಗುತ್ತದೆ. ವ್ಯಾಪಾರಾದಿ ಉದ್ಯಮಗಳು ಇಷ್ಟದಂತೆ ನಡೆಯುತ್ತದೆ. ಕೆಲವೊಮ್ಮೆ ಸಣ್ಣ ವಿಷಯಗಳಿಗೂ ಭಯ ತೋರಿದರೂ ಹಾನಿಯಿಲ್ಲ. ಶುಭ ಸಂಖ್ಯೆ: 6

ಕುಂಭ: ಅತಿಯಾದ ಆತ್ಮವಿಶ್ವಾಸ, ಆಲಸ್ಯದಿಂದ ಬಹುವಿಧವಾದ ಕಷ್ಟನಷ್ಟಗಳ ಅನುಭವವಾಗುವುದು. ಸಹನೆಯಿಂದ ವ್ಯವಹರಿಸಿರಿ. ಗುರುಬಲ ವೃದ್ಧಿಸುವುದು. ಮದುವೆಯ ಸಂಭ್ರಮದ ವಾತಾವರಣ ಕಂಡುಬರುವುದು. ಹಿರಿಯರ ಮಾತಿನಂತೆ ನಡಯುವುದು ಉತ್ತಮ. ಶುಭ ಸಂಖ್ಯೆ: 2

ಮೀನ: ಆರಂಭದಲ್ಲಿ ಹರ್ಷ, ಉತ್ಸಾಹ ಇರುವುದು ಕೊನೆಗೆ ಮನೋವ್ಯಥೆ. ಮನೆಯಲ್ಲಿ ಸಂತೋಷದ ವಾತಾವರಣ ಇರುವುದು. ಗ್ರಹೋಪಯೋಗಿ ವಸ್ತುಗಳ ಖರೀದಿ, ಮನೆ ರಿಪೇರಿ ಮೊದಲಾದ ಕೆಲಸಗಳಾಗುವವು. ಶ್ರೀಲಕ್ಷ್ಮೀಸ್ತೋತ್ರ ಪಠಿಸಿರಿ. ಶುಭ ಸಂಖ್ಯೆ: 1 ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Published On - 6:27 am, Fri, 12 March 21

Follow Us
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ