AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope ದಿನ ಭವಿಷ್ಯ | ಈ ರಾಶಿಯ ಕಲಾ ಕ್ಷೇತ್ರದಲ್ಲಿರುವವರಿಗೆ ಒಳ್ಳೆಯ ಅವಕಾಶಗಳು ತೋರಿಬರಲಿವೆ

Today Horoscope ಮಾರ್ಚ್ 14, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope ದಿನ ಭವಿಷ್ಯ | ಈ ರಾಶಿಯ ಕಲಾ ಕ್ಷೇತ್ರದಲ್ಲಿರುವವರಿಗೆ ಒಳ್ಳೆಯ ಅವಕಾಶಗಳು ತೋರಿಬರಲಿವೆ
ದಿನ ಭವಿಷ್ಯ
ಆಯೇಷಾ ಬಾನು
|

Updated on: Mar 14, 2021 | 6:43 AM

Share

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲಪಕ್ಷ, ಪಾಡ್ಯ ತಿಥಿ, ಭಾನುವಾರ, ಮಾರ್ಚ್ 14, 2021. ಉತ್ತರಾಭಾದ್ರೆ ನಕ್ಷತ್ರ, ರಾಹುಕಾಲ : ಇಂದು ಸಂಜೆ 4.55 ರಿಂದ ಇಂದು ರಾತ್ರಿ 6.25ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.25. ಸೂರ್ಯಾಸ್ತ: ಸಂಜೆ 6.25.

ತಾ.14-03-2021 ರ ಭಾನುವಾರದ ರಾಶಿಭವಿಷ್ಯ

ಮೇಷ: ಮನಸ್ಸಿನಲ್ಲಿ ಸಣ್ಣದಾಗಿ ಹುಟ್ಟಿಕೊಂಡ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಯತ್ನಿಸಲಿದ್ದೀರಿ. ಹೊಸ ವಿಚಾರಗಳಿಗೆ ಮನಸ್ಸು ತೆರೆದುಕೊಳ್ಳಲಿದೆ. ಗೃಹಿಣಿಯರು ಗೃಹ ಕೃತ್ಯಗಳಿಂದ ಹೈರಾಣಾಗಲಿದ್ದಾರೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಶುಭ ಸಂಖ್ಯೆ: 4

ವೃಷಭ: ನಿಮ್ಮ ವೃತ್ತಿರಂಗದಲ್ಲಿ ದಿನೇ ದಿನೇ ಅಭಿವೃದ್ಧಿಯಾಗುತ್ತಿದ್ದೀರಿ ಎಂದು ನಿಮಗೆ ಅನಿಸಬಹುದು. ಆರ್ಥಿಕವಾಗಿ ಹಣಕಾಸಿನ ಖರ್ಚು ವೆಚ್ಚದ ಬಗ್ಗೆ ಮಿತಿಯಿರಲಿ. ಅನವಶ್ಯಕವಾಗಿ ಬೇಡದ ಸಮಸ್ಯೆಗಳನ್ನು ಮೈಮೇಲೆಳದುಕೊಳ್ಳಬೇಡಿ. ಶುಭ ಸಂಖ್ಯೆ: 7

ಮಿಥುನ: ಮನೆಗೆ ಅನಿರೀಕ್ಷಿತವಾಗಿ ಬಂಧುಮಿತ್ರರ ಆಗಮನವಾಗಲಿದ್ದು, ಸಂಭ್ರಮದ ವಾತಾವರಣವಿರಲಿದೆ. ಆದಾಯ ಹೆಚ್ಚಿಸಲು ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ವಿದ್ಯಾರ್ಥಿಗಳು ಆಲಸ್ಯತನ ಬಿಟ್ಟು ಕಠಿಣ ಪರಿಶ್ರಮ ಪಡಬೇಕಿದೆ. ಶುಭ ಸಂಖ್ಯೆ: 9

ಕರ್ಕ: ಎಷ್ಟೋ ದಿನಗಳಿಂದ ಭೇಟಿಯಾಗಬೇಕೆಂದಿದ್ದ ವ್ಯಕ್ತಿಗಳನ್ನು ಅನಿರೀಕ್ಷಿತವಾಗಿ ಭೇಟಿಯಾಗಲಿದ್ದೀರಿ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಒದಗಿಬರಲಿವೆ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದ ಐಡಿಯಾ ಬರಲಿದೆ. ಶುಭ ಸಂಖ್ಯೆ: 2

ಸಿಂಹ: ಕಲಾ ಕ್ಷೇತ್ರದಲ್ಲಿರುವವರಿಗೆ ಒಳ್ಳೆಯ ಅವಕಾಶಗಳು ತೋರಿಬರಲಿವೆ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಬೇರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಮನಸ್ಸು ಅಂದುಕೊಂಡಂತೆ ನಡೆದುಕೊಳ್ಳಿ. ಶುಭ ಸಂಖ್ಯೆ: 1

ಕನ್ಯಾ: ಸಂಗಾತಿಯ ಕಷ್ಟಗಳಿಗೆ ಹೆಗಲುಕೊಡಲಿದ್ದೀರಿ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಸರಕಾರಿ ಲೆಕ್ಕ ಪತ್ರಗಳನ್ನು ಜಾಗರೂಕತೆಯಿಂದ ಸಂರಕ್ಷಿಸಿ. ಕೃಷಿಕರಿಗೆ ಆದಾಯಕ್ಕೆ ಕೊರತೆಯಿರದು. ದೇವತಾ ಪ್ರಾರ್ಥನೆ ಮಾಡಿ. ಶುಭ ಸಂಖ್ಯೆ: 3

ತುಲಾ: ಮನಸ್ಸು ಅಂದುಕೊಂಡಂತೆ ನಿರ್ಧಾರ ತೆಗೆದುಕೊಳ್ಳಲು ಹೋಗಿ ಪ್ರೀತಿಪಾತ್ರರ ಮನಸ್ಸಿಗೆ ಬೇಸರವುಂಟು ಮಾಡಲಿದ್ದೀರಿ. ಆದಾಯದ ಮೂಲಕ್ಕೆ ಪೆಟ್ಟು ಬೀಳಲಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಶುಭ ಸಂಖ್ಯೆ: 5

ವೃಶ್ಚಿಕ: ನೆರೆಹೊರೆಯವರು ನಿಮ್ಮ ಗುಟ್ಟುಗಳನ್ನು ಬಯಲು ಮಾಡಲು ಕಾಯುತ್ತಿರುತ್ತಾರೆ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗುವುದು. ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ಪ್ರೀತಿ ಪಾತ್ರರ ಭೇಟಿ ಮಾಡಲಿದ್ದೀರಿ. ಶುಭ ಸಂಖ್ಯೆ: 6

ಧನು: ಉದ್ಯೋಗ ಸಂಬಂಧವಾಗಿ ಅನಿರೀಕ್ಷಿತವಾಗಿ ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಮನೆಗೆ ಬಂಧು ಮಿತ್ರರ ಆಗಮನವಾಗಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗುವುದು. ಶುಭ ಸಂಖ್ಯೆ: 7

ಮಕರ: ವೈಯಕ್ತಿಕ ಆರೋಗ್ಯದ ಬಗ್ಗೆ ಉಪೇಕ್ಷೆ ಸಲ್ಲದು. ನೂತನ ದಂಪತಿಗಳಲ್ಲಿ ಹೊಂದಾಣಿಕೆಯ ಕೊರತೆ ಕಂಡುಬಂದೀತು. ಸಾಂಸಾರಿಕ ವಿಚಾರದಲ್ಲಿ ಮೂರನೆಯವರ ಮಧ‍್ಯಪ್ರವೇಶಕ್ಕೆ ಅವಕಾಶ ಕೊಡಬೇಡಿ. ಗೃಹ ರಿಪೇರಿ ಕೆಲಸಗಳಿಗೆ ಮುಂದಾಗುವಿರಿ. ಶುಭ ಸಂಖ್ಯೆ: 8

ಕುಂಭ: ಆಪ್ತರ ಮಾತುಗಳಿಂದ ಮನಸ್ಸು ಭಾವುಕವಾಗುವುದು. ದೇಹಾರೋಗ್ಯದಲ್ಲಿ ಹಲವು ದಿನಗಳಿಂದ ಕಾಡುತ್ತಿದ್ದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ವಾದ ವಿವಾದಗಳಲ್ಲಿ ಮೇಲುಗೈ ಸಾಧಿಸಲಿದ್ದೀರಿ. ತಾಳ್ಮೆಯಿರಲಿ. ಶುಭ ಸಂಖ್ಯೆ: 6

ಮೀನ: ಹೆಚ್ಚಿನ ಧನಾರ್ಜನೆಗಾಗಿ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ಸ್ವಯಂ ವ್ಯಾಪಾರಿಗಳಿಗೆ ಮುನ್ನಡೆಯ ಯೋಗವಿದೆ. ಸಂಗಾತಿಯ ಸಲಹೆಗಳು ಉಪಯೋಗಕ್ಕೆ ಬರಲಿವೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಲಿದೆ. ಶುಭ ಸಂಖ್ಯೆ: 9

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

‘ಪವಿತ್ರಾ ಗೌಡ ಶ್ರೀಮಂತೆ ಅಲ್ಲ, ತುಂಬ ಕಷ್ಟ ಇದೆ’: ಲಾಯರ್ ಅಚ್ಚರಿಯ ಹೇಳಿಕೆ
‘ಪವಿತ್ರಾ ಗೌಡ ಶ್ರೀಮಂತೆ ಅಲ್ಲ, ತುಂಬ ಕಷ್ಟ ಇದೆ’: ಲಾಯರ್ ಅಚ್ಚರಿಯ ಹೇಳಿಕೆ
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದ ಸಚಿವ ಎಸ್. ಜೈಶಂಕರ್
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದ ಸಚಿವ ಎಸ್. ಜೈಶಂಕರ್
ನಮಸ್ತೇ ಸದಾ ವತ್ಸಲೇ: ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿಕೆ ಶಿವಕುಮಾರ್
ನಮಸ್ತೇ ಸದಾ ವತ್ಸಲೇ: ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿಕೆ ಶಿವಕುಮಾರ್
ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ