AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope ದಿನ ಭವಿಷ್ಯ | ಈ ರಾಶಿಯವರು ಅಪವಾದಕ್ಕೆ ಗುರಿಯಾಗುವ ಸಂಭವವಿದೆ

Today Horoscope ಮಾರ್ಚ್ 17, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope ದಿನ ಭವಿಷ್ಯ | ಈ ರಾಶಿಯವರು ಅಪವಾದಕ್ಕೆ ಗುರಿಯಾಗುವ ಸಂಭವವಿದೆ
ದಿನ ಭವಿಷ್ಯ
ಆಯೇಷಾ ಬಾನು
|

Updated on: Mar 17, 2021 | 6:26 AM

Share

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲಪಕ್ಷ, ಚೌತಿ ತಿಥಿ, ಬುಧವಾರ, ಮಾರ್ಚ್ 17, 2021. ಅಶ್ವಿನಿ ನಕ್ಷತ್ರ, ರಾಹುಕಾಲ : ಇಂದು ಬೆಳಿಗ್ಗೆ 12.23 ರಿಂದ ಇಂದು ಮಧ್ಯಾಹ್ನ 1.53ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.22. ಸೂರ್ಯಾಸ್ತ: ಸಂಜೆ 6.26.

ತಾ.17-03-2021 ರ ಬುಧವಾರದ ರಾಶಿಭವಿಷ್ಯ

ಮೇಷ: ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ. ಶುಭ ಸಂಖ್ಯೆ: 8

ವೃಷಭ: ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಸ್ವಂತ ಉದ್ಯಮಿಗಳು ಹಾನಿ ತಪ್ಪಿಸುವ ಉಪಾಯ ಮಾಡಿ. ವ್ಯಾಪಾರದ ವಿಷಯದಲ್ಲಿ ಮೋಸವಾಗುವ ಸಾಧ್ಯತೆ ಇದೆ. ಸಾಲಗಾರರು ಸಹಕಾರ ತೋರುವರು. ಶುಭ ಸಂಖ್ಯೆ: 4

ಮಿಥುನ: ವಿಶೇಷ ರೀತಿಯ ಕಾರ್ಯ ಒದಗಿ ಬಂದು ಸಂತಸ ಉಂಟಾಗುತ್ತದೆ. ಸ್ಥಾನಮಾನಗಳಿಗೂ ಕೊರತೆ ಇಲ್ಲ. ವಿಶೇಷ ವಸ್ತು ಸಂಗ್ರಹ. ಅನಾರೋಗ್ಯ ತೋರಿಬಂದು ಕಿರಿಕಿರಿ ಎನಿಸಬಹುದು. ಶುಭ ಸಂಖ್ಯೆ: 7

ಕರ್ಕ: ಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ ಇದೆ. ಸಮಾಧಾನ ಚಿತ್ತದಿಂದ ವರ್ತಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವುದು. ಹಾನಿ ಇಲ್ಲ ಆದರೆ ಲಾಭವೂ ಇಲ್ಲದ ಸ್ಥಿತಿ ಇರುವುದು. ಶುಭ ಸಂಖ್ಯೆ: 1

ಸಿಂಹ: ಅಗೌರವ ಆಗುವ ಸಂಭವ ಇರುವುದರಿಂದ ಸೂಕ್ಷ್ಮವಾಗಿರುವುದು ಉತ್ತಮ. ಅನಪೇಕ್ಷಿತರಿಗೆ ಉಪಕಾರ ಮಾಡುವುದು ಸರಿಯಲ್ಲ. ಮಕ್ಕಳ ಚಿಂತೆ ಇರುವುದು. ವಧುವರರಿಗೆ ಮದುವೆಯ ಯೋಗ ಕೂಡಿಬರುವುದು. ಶುಭ ಸಂಖ್ಯೆ: 6

ಕನ್ಯಾ: ಗೊಂದಲಕ್ಕೆ ಒಳಗಾಗದೇ ಮುನ್ನುಗ್ಗಿರಿ. ಕೆಲಸದಲ್ಲಿ ಸ್ಪಷ್ಟತೆ ಇರಲಿ. ಅಲ್ಪಧನಲಾಭವಾದರೂ ಹಳೆಯ ಸಾಲ ತೀರುವುದು. ಹಿರಿಯರ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 2

ತುಲಾ: ನಿಧಾನವಾಗಿ ಕಾರ್ಯಸಿದ್ಧಿಯಾಗುವುದು. ಮಕ್ಕಳಲ್ಲಿ ಹೊಸ ಹುರುಪು ಕಂಡು ಬರುವುದು. ವ್ಯಾಪಾರಿಗಳಿಗೆ ಮಧ್ಯಮಫಲ. ಸೀಮಿತ ಆದಾಯ, ಸೀಮಿತ ಕಾರ್ಯಗಳಿಂದ ಬೇಸರ ಇರುವುದು. ಮಂದಗತಿಯ ಕೆಲಸಗಳು ನಿರಾಸೆ ಮೂಡಿಸುವ ಸಾಧ್ಯತೆ ಇದೆ. ಶಾಂತಚಿತ್ತರಾಗಿ ವ್ಯವಹರಿಸಿರಿ. ಶುಭ ಸಂಖ್ಯೆ: 9

ವೃಶ್ಚಿಕ: ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು. ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಆರ್ಥಿಕ ಸಂಕಷ್ಟ ದೂರಾಗುವುದು. ಶುಭ ಸಂಖ್ಯೆ: 5

ಧನು: ಶುಭ ಕರ್ಮ ಸಂಪ್ರಾಪ್ತಿಯಿದ್ದು, ಗುರುವರ್ಗ ಸಂತೋಷ, ಸಂಸಾರ ಸುಖ. ನೂತನ ಮಿತ್ರಭೇಟಿ, ಅರ್ಥಾರ್ಜನೆಯು ಉತ್ತಮವಿದೆ. ಆದರೂ ಗೃಹಕಲಹ, ಬಂಧು ಜನರಲ್ಲಿ ಅಸಮಾಧಾನ ಕಂಡುಬರುವುದು. ಶುಭ ಸಂಖ್ಯೆ: 3

ಮಕರ: ವ್ಯಾಪಾರದಲ್ಲಿ ಅದೃಷ್ಟಲಾಭವಿದೆ. ವಿದ್ಯಾರ್ಥಿಗಳ ಮನೋಭಿಲಾಷೆ ಈಡೇರುವುದು. ಮನೆಯ ಜವಾಬ್ದಾರಿಗಳು ಹೆಚ್ಚುವವು. ಹಿರಿಯರ ಆರೋಗ್ಯದಲ್ಲಿ ಏರುಪೇರಾಗುವ ಸಂಭವವಿದೆ. ಶುಭ ಸಂಖ್ಯೆ: 5

ಕುಂಭ: ಅತಿಯಾದ ಮಾತು ಅಪಾಯಕ್ಕೆ ಕಾರಣ. ಆಲಸ್ಯದಿಂದ ಕಾರ್ಯಹಾನಿಯಾಗುವ ಸಾಧ್ಯತೆ ಇದೆ. ಆಸ್ತಿ ವ್ಯವಹಾರಗಳಲ್ಲಿ ತಜ್ಞರ ಸಹಾಯ ಪಡೆಯಿರಿ. ನೌಕರರಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆಯ ಆಗುವ ಯೋಗವಿದೆ. ಶುಭ ಸಂಖ್ಯೆ: 8

ಮೀನ: ನೆನೆಗುದಿಗೆ ಬಿದ್ದ ಕೆಲಸಗಳಿಗೆ ಚಾಲನೆ ದೊರೆಯುವುದು. ಮಾನಸಿಕ ಉತ್ಸಾಹ ಕಂಡುಬರುವುದು. ಆತ್ಮೀಯರಿಗೆ ಉನ್ನತ ಅಧಿಕಾರ ದೊರೆಯುವುದು. ಕಾರಣಾಂತರ ಅಧಿಕ ಖರ್ಚುಬರಬಹುದು. ಶುಭ ಸಂಖ್ಯೆ: 1 ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

‘ಬಂದೂಕ್’ ಸಿನಿಮಾದಲ್ಲಿ ಪೊಲೀಸ್ ಪಾತ್ರ ಮಾಡಿದ ನಟಿ ಶ್ವೇತಾ ಪ್ರಸಾದ್
‘ಬಂದೂಕ್’ ಸಿನಿಮಾದಲ್ಲಿ ಪೊಲೀಸ್ ಪಾತ್ರ ಮಾಡಿದ ನಟಿ ಶ್ವೇತಾ ಪ್ರಸಾದ್
ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ