AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope ದಿನ ಭವಿಷ್ಯ | ಈ ರಾಶಿಯವರಿಗೆ ತಮ್ಮ ಜಿಪುಣತನವೇ ತೊಂದರೆ ಉಂಟು ಮಾಡುತ್ತದೆ

Today Horoscope ಮಾರ್ಚ್ 19, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope ದಿನ ಭವಿಷ್ಯ | ಈ ರಾಶಿಯವರಿಗೆ ತಮ್ಮ ಜಿಪುಣತನವೇ ತೊಂದರೆ ಉಂಟು ಮಾಡುತ್ತದೆ
ದಿನ ಭವಿಷ್ಯ
ಆಯೇಷಾ ಬಾನು
|

Updated on: Mar 19, 2021 | 6:21 AM

Share

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲಪಕ್ಷ, ಷಷ್ಠಿ ತಿಥಿ, ಶುಕ್ರವಾರ, ಮಾರ್ಚ್ 17, 2021. ಕೃತ್ತಿಕೆ ನಕ್ಷತ್ರ, ರಾಹುಕಾಲ : ಇಂದು ಬೆಳಿಗ್ಗೆ 10.52 ರಿಂದ ಇಂದು ಮಧ್ಯಾಹ್ನ 12.22ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.21. ಸೂರ್ಯಾಸ್ತ: ಸಂಜೆ 6.26.

ತಾ.19-03-2021 ರ ಶುಕ್ರವಾರದ ರಾಶಿಭವಿಷ್ಯ

ಮೇಷ: ಜಿಪುಣತನದಿಂದ ತೊಂದರೆಯಾಗುವ ಸಾಧ್ಯತೆ ಇದೆ. ಸಹೋದರ ಸಂಬಂಧದಲ್ಲಿ ಭಿನ್ನಾಭಿಪ್ರಾಯ ಬರುವ ಸಾಧ್ಯತೆ ಇದೆ. ಪರಸ್ಪರ ದೋಷಾರೋಪ ಬೇಡ. ಮಿತ್ರರ ಸಹಾಯ ದೊರೆಯುವುದು. ಶುಭ ಸಂಖ್ಯೆ: 4

ವೃಷಭ: ಸಹೋದ್ಯೋಗಿಗಳೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅಪೂರ್ಣ ನಿರ್ಣಯಗಳು ಅಪಾಯ ತರಬಹುದು. ಅತೀ ವಿಶ್ವಾಸಿಕರೇ ಮೋಸಮಾಡುವ ಸಂಭವವಿದೆ. ದೂರ ಪ್ರಯಾಣ ಅಥವಾ ಪರಸ್ಥಳವಾಸ ಸಂಭವ. ಶುಭ ಸಂಖ್ಯೆ: 9

ಮಿಥುನ: ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವುದು ಒಳಿತು. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವುದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ. ಶುಭ ಸಂಖ್ಯೆ: 2

ಕರ್ಕ: ಅತಿಯಾದ ಮಾತು ಅಪಾಯಕ್ಕೆ ಕಾರಣ. ಆಲಸ್ಯದಿಂದ ಕಾರ್ಯಹಾನಿಯಾಗುವ ಸಾಧ್ಯತೆ ಇದೆ. ಆಸ್ತಿ ವ್ಯವಹಾರಗಳಲ್ಲಿ ತಜ್ಞರ ಸಹಾಯ ಪಡೆಯಿರಿ. ನೌಕರರಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆಯ ಆಗುವ ಯೋಗವಿದೆ. ಶುಭ ಸಂಖ್ಯೆ: 7

ಸಿಂಹ: ವ್ಯವಹಾರದಲ್ಲಿ ಹಾನಿ ಕಂಡುಬರುವುದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವುದು. ಶುಭ ಸಂಖ್ಯೆ: 5

ಕನ್ಯಾ: ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ಶುಭ ಸಂಖ್ಯೆ: 8

ತುಲಾ: ಮಾತು ಹಿಡಿತದಲ್ಲಿರಲಿ. ಅನವಶ್ಯಕ ವಾಗ್ವಾದ ಉಂಟಾಗುವ ಸಂಭವವಿದೆ. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವುದು. ಹಿತೈಷಿಗಳ ಸಲಹೆಯಂತೆ ಮುಂದುವರೆಯಿರಿ. ಶುಭ ಸಂಖ್ಯೆ: 3

ವೃಶ್ಚಿಕ: ಚಂಚಲಚಿತ್ತದಿಂದ ಕಾರ್ಯಹಾನಿಯಾಗುವ ಲಕ್ಷಣಗಳಿವೆ. ಆಸ್ತಿ ಸಂಬಂಧಿತ ಕ್ರಯವಿಕ್ರಯ ವ್ಯವಹಾರಗಳು ಕುದುರುವವು. ಅನವಶ್ಯಕ ಮಾತಿನಿಂದ ಇಕ್ಕಟ್ಟಿಗೆ ಸಿಕ್ಕಿಕೊಳ್ಳುವ ಸಾಧ್ಯತೆ ಇದೆ. ತಜ್ಞರ ಸಹಾಯ ಪಡೆಯಿರಿ. ಶುಭ ಸಂಖ್ಯೆ: 4

ಧನು: ಕೆಲಸಕ್ಕೆ ತಕ್ಕ ಪ್ರೋತ್ಸಾಹ ದೊರೆಯುವುದು. ಶಾಂತಿ, ನೆಮ್ಮದಿಯುಕ್ತ ಜೀವನ ಇರುವದು. ನಡೆಯುತ್ತಿರುವ ದಾರಿ ಸರಿಯಾಗಿ ಇರುವುದರಿಂದ ಗುರಿ ಮುಟ್ಟುವುದು ನಿಶ್ಚಿತ. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವುದು. ಶುಭ ಸಂಖ್ಯೆ: 6

ಮಕರ: ಸಮಾಧಾನಕರ ಜೀವನವಿದೆ. ಅಧಿಕಾರಿಗಳ ಸಹಕಾರ ದೊರೆಯುವುದು. ಮನೆ ಕಟ್ಟುವ ಆಸೆ ಕೈಗೂಡುವ ಸಮಯ. ಬಂಧುಮಿತ್ರರ ಹಾರೈಕೆ ತಮ್ಮೊಂದಿಗಿದೆ. ದೂರ ಪ್ರಯಾಣ ಯೋಗವಿದೆ. ಶುಭ ಸಂಖ್ಯೆ: 9

ಕುಂಭ: ಅಪಮಾನ, ಅಪವಾದದಂತಹ ಸಮಸ್ಯೆಗೆ ಸಿಲುಕದಂತೆ ಜಾಗರೂಕರಾಗಿರಿ. ಈ ಸಮಯದಲ್ಲಿ ಮಾತನಾಡುವ ಬದಲು ಮಾತು ಕೇಳುವದು ಉತ್ತಮ. ಮಕ್ಕಳು ಶಾಲಾ ಕಾಲೇಜುಗಳಲ್ಲಿ ಸಾಧನೆ ತೋರುವುರು. ಶುಭ ಸಂಖ್ಯೆ: 1

ಮೀನ: ವ್ಯಥಾ ಚಿಂತೆ, ತಪ್ಪು ಕಲ್ಪನೆ, ನಿಷ್ಟುರ ಮಾತುಗಳನ್ನು ಕೇಳುವ ಸಂಭವ, ಜನ್ಮಸ್ಥ ಶುಕ್ರ ಇರುವುದರಿಂದ ಆರ್ಥಿಕ ಸುಭದ್ರತೆ ಇರುವುದು. ವಿದ್ಯಾರ್ಥಿಗಳಿಗೆ ಪರಿಶ್ರಮ ಅವಶ್ಯಕ. ಮನೆಯಲ್ಲಿ ಸಂತೋಷವಿರುವುದು. ಗೋಸೇವೆಯಿಂದ ಕಷ್ಟಪರಿಹಾರ. ಶುಭ ಸಂಖ್ಯೆ: 5 ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ