AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope ದಿನ ಭವಿಷ್ಯ | ಮಹತ್ವದ ಕೆಲಸಕ್ಕೆ ವಿಘ್ನ ಉಂಟಾಗುವ ಸಾಧ್ಯತೆ ಇದೆ ಈ ರಾಶಿಯವರಿಗೆ

Today Horoscope ಮಾರ್ಚ್ 22, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope ದಿನ ಭವಿಷ್ಯ | ಮಹತ್ವದ ಕೆಲಸಕ್ಕೆ ವಿಘ್ನ ಉಂಟಾಗುವ ಸಾಧ್ಯತೆ ಇದೆ ಈ ರಾಶಿಯವರಿಗೆ
ದಿನ ಭವಿಷ್ಯ
Follow us
ಆಯೇಷಾ ಬಾನು
|

Updated on: Mar 22, 2021 | 6:27 AM

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲಪಕ್ಷ, ಅಷ್ಟಮಿ ತಿಥಿ, ಸೋಮವಾರ, ಮಾರ್ಚ್ 22, 2021. ಆರ್ದ್ರೆ ನಕ್ಷತ್ರ, ರಾಹುಕಾಲ : ಇಂದು ಬೆಳಿಗ್ಗೆ 7.49 ರಿಂದ ಇಂದು ಬೆಳಿಗ್ಗೆ 9.20ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.18. ಸೂರ್ಯಾಸ್ತ: ಸಂಜೆ 6.27.

ತಾ.22-03-2021 ರ ಸೋಮವಾರದ ರಾಶಿಭವಿಷ್ಯ

ಮೇಷ: ಪೂರ್ಣವಿಶ್ವಾಸ ಇಲ್ಲದ ಅಥವಾ ತಿಳಿಯದ ಕೆಲಸದಲ್ಲಿ ಹಣವ್ಯಯ ಮಾಡಬೇಡಿ. ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಎಚ್ಚರಿಕೆ ಇರಲಿ. ದಿನದ ಕೆಲಸ ಬೇಸರ ಉಂಟುಮಾಡುವ ಸಾಧ್ಯತೆ ಇದೆ. ಶುಭ ಸಂಖ್ಯೆ: 3

ವೃಷಭ: ಮನಸ್ಸು ಹಿಡಿತದಲ್ಲಿರಲಿ. ಎಷ್ಟು ಪ್ರಯತ್ನಿಸಿದರೂ ಸಮಸ್ಯೆಗಳಿಗೆ ಪರಿಹಾರ ದೊರೆಯದೇ ಕ್ಲೇಷ ಉಂಟಾಗುವುದು. ತೋರಿಕೆಯ ಸ್ವಭಾವದಿಂದ ದೃಷ್ಟಿದೋಷ ಆಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 9

ಮಿಥುನ: ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು. ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಆರ್ಥಿಕ ಸಂಕಷ್ಟ ದೂರಾಗುವುದು. ಶುಭ ಸಂಖ್ಯೆ: 4

ಕರ್ಕ: ಪರಿವಾರದಲ್ಲಿ ಹೊಸಕಳೆ ಬರುವುದು. ಕುಟುಂಬದಲ್ಲಿ ಸೌಖ್ಯಯ ಇರುವುದು. ಮಹತ್ವದ ಕೆಲಸಕ್ಕೆ ವಿಘ್ನ ಬರುವ ಸಾಧ್ಯತೆ ಇದೆ ಎಚ್ಚರಿಕೆವಹಿಸಿರಿ. ವ್ಯವಹಾರಗಳು ಲಾಭದಾಯಕವಾಗಿ ಇರುವವು. ಶುಭ ಸಂಖ್ಯೆ: 6

ಸಿಂಹ: ವ್ಯವಹಾರದಲ್ಲಿ ಹಾನಿ ಕಂಡುಬರುವುದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವುದು. ಶುಭ ಸಂಖ್ಯೆ: 1

ಕನ್ಯಾ: ಕುಟುಂಬದಲ್ಲಿ ವಾದ ಬೇಡ. ಉತ್ತಮ ಸಾಧನೆಯಿಂದ ಬಂಧುವರ್ಗದ ಪ್ರಶಂಸೆಗೆ ಪಾತ್ರರಾಗುವಿರಿ. ವ್ಯವಹಾರದಲ್ಲಿಯ ಚತುರತೆ ಒಳ್ಳೆಯ ಆದಾಯವನ್ನು ತಂದು ಕೊಡುವುದು. ಸಮತೋಲಿತ ಜೀವನವಿರುವುದು. ಶುಭ ಸಂಖ್ಯೆ: 5

ತುಲಾ: ಹಾನಿ ತಪ್ಪಿಸಲು ಪ್ರಯತ್ನಿಸುವಿರಿ. ಕಠಿಣ ಆತಂಕದಿಂದ ಪಾರಾಗುವಿರಿ. ಅಧಿಕಾರಿಗಳ ಉಪದ್ರವಕ್ಕೆ ಮಣಿಯದೇ ಡಿಟ್ಟತನದಿಂದ ಕೆಲಸ ನಿರ್ವಹಿಸಿ. ವ್ಯಾಪಾರವೃದ್ಧಿಯಾಗುವುದು. ಆರ್ಥಿಕ ಸಂಕಷ್ಟ ದೂರಾಗುವುದು. ಶುಭ ಸಂಖ್ಯೆ: 7

ವೃಶ್ಚಿಕ: ಶತ್ರುಗಳ ಉಪಟಳವು ಆಗಾಗ ಕಂಡುಬಂದರೂ ಧೈರ್ಯದಿಂದ ಕಾರ್ಯ ಸಾಧಿಸುವಿರಿ. ಇಷ್ಟಸಿದ್ಧಿಯ ಕಾಲ ಇರುವುದರಿಂದ ಅನೇಕ ರೀತಿಯ ಭೋಗಭಾಗ್ಯಗಳು ಕೂಡಿಬರಲಿವೆ. ಸಾಂಸಾರಿಕ ಸಮಸ್ಯೆಗಳು ಪರಿಹಾರವಾಗುವವು. ಶುಭ ಸಂಖ್ಯೆ: 4

ಧನು: ದೈಹಿಕ ಸಮಸ್ಯೆಗಳು ಉಲ್ಬಣವಾಗಿ ಕೆಲಸಕ್ಕೆ ತೊಂದರೆ ಉಂಟುಮಾಡುವ ಸಾಧ್ಯತೆ ಇದೆ. ಮನೆಯಲ್ಲಿ ಕಾರ್ಯ ವಿರೋಧ ಇರುವುದು. ಹಣಕಾಸಿನ ವಿಷಯದಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಮಾತಿಗಿಂತ ಕೃತಿಗೆ ಮಹತ್ವ ಕೊಡಿ. ಶುಭ ಸಂಖ್ಯೆ: 1

ಮಕರ: ಹೊಸ ಯೋಜನೆಗೆ ಸಂಬಂಧಿಸಿದಂತೆ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ. ಶುಭ ಸಂಖ್ಯೆ: 2

ಕುಂಭ: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ. ಶುಭ ಸಂಖ್ಯೆ: 8

ಮೀನ: ಯುವಕರಿಗೆ ನವಿರಾದ ಮಾತುಗಳಿಂದ ಸಂಗಾತಿಗಳನ್ನು ಗೆಲ್ಲುವ ಛಾತಿ. ಆಕರ್ಷಕ ನಿರ್ಧಾರಗಳಿಂದ ಮನ್ನಣೆ. ಯಜಮಾನನಿಗೆ ಬಲವಂತದಲ್ಲಿ ಜವಾಬ್ದಾರಿ ನಿರ್ವಹಣೆ. ವೈಯಕ್ತಿಕ ಬದುಕಿನತ್ತ ಗಮನಹರಿಸಲು ವ್ಯವಧಾನ. ಶುಭ ಸಂಖ್ಯೆ: 3 ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ