ಮೃತಪಟ್ಟು 2 ದಿನವಾದ್ರೂ ಸೋಂಕಿತನ ಮೃತದೇಹ ನೀಡದ ಆಸ್ಪತ್ರೆ -ಕುಟುಂಬಸ್ಥರ ಆರೋಪ

ಬೆಂಗಳೂರು: ಆಸ್ಪತ್ರೆಯ ಬಿಲ್ ಕಟ್ಟಿಲ್ಲವೆಂದು ಸೋಂಕಿತ ಮೃತಪಟ್ಟು ಎರಡು ದಿನಗಳಾಗಿದ್ದರೂ ಸಂಬಂಧಿಕರಿಗೆ ಮೃತದೇಹ ಹಸ್ತಾಂತರಿಸದ ಘಟನೆ ನಗರದಲ್ಲಿ ನಡೆದಿದೆ. ಕುಮಾರಸ್ವಾಮಿ ಲೇಔಟ್​ನಲ್ಲಿರುವ ಖಾಸಗಿ ಆಸ್ಪತ್ರೆಯೊಂದರ ವಿರುದ್ಧ ಈ ಆರೋಪ ಕೇಳಿಬಂದಿದೆ. ಜುಲೈ 19ರಂದು ಸೋಂಕಿತ ಅಸ್ಪತ್ರೆಗೆ ಚಿಕಿತ್ಸೆಗೆಂದು ಅಡ್ಮಿಟ್ ಆಗಿದ್ದ. ಕಳೆದ 20ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತ 2 ದಿನಗಳ ಹಿಂದೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಆಸ್ಪತ್ರೆಯ ಆಡಳಿತ ಮಂಡಳಿ 9 ಲಕ್ಷ ರೂಪಾಯಿಯ ಬಿಲ್ ನೀಡಿದ್ದು, ಇದನ್ನು ಕಟ್ಟಿದ ನಂತರ ಮೃತದೇಹ ಕೊಡುವುದಾಗಿ ತಿಳಿಸಿದ್ದಾರೆ. ಇದರಿಂದ […]

ಮೃತಪಟ್ಟು 2 ದಿನವಾದ್ರೂ ಸೋಂಕಿತನ ಮೃತದೇಹ ನೀಡದ ಆಸ್ಪತ್ರೆ -ಕುಟುಂಬಸ್ಥರ ಆರೋಪ
ಸಾಧು ಶ್ರೀನಾಥ್​ Edited By:

Updated on: Aug 09, 2020 | 2:13 PM

ಬೆಂಗಳೂರು: ಆಸ್ಪತ್ರೆಯ ಬಿಲ್ ಕಟ್ಟಿಲ್ಲವೆಂದು ಸೋಂಕಿತ ಮೃತಪಟ್ಟು ಎರಡು ದಿನಗಳಾಗಿದ್ದರೂ ಸಂಬಂಧಿಕರಿಗೆ ಮೃತದೇಹ ಹಸ್ತಾಂತರಿಸದ ಘಟನೆ ನಗರದಲ್ಲಿ ನಡೆದಿದೆ. ಕುಮಾರಸ್ವಾಮಿ ಲೇಔಟ್​ನಲ್ಲಿರುವ ಖಾಸಗಿ ಆಸ್ಪತ್ರೆಯೊಂದರ ವಿರುದ್ಧ ಈ ಆರೋಪ ಕೇಳಿಬಂದಿದೆ.

ಜುಲೈ 19ರಂದು ಸೋಂಕಿತ ಅಸ್ಪತ್ರೆಗೆ ಚಿಕಿತ್ಸೆಗೆಂದು ಅಡ್ಮಿಟ್ ಆಗಿದ್ದ. ಕಳೆದ 20ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತ 2 ದಿನಗಳ ಹಿಂದೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಆಸ್ಪತ್ರೆಯ ಆಡಳಿತ ಮಂಡಳಿ 9 ಲಕ್ಷ ರೂಪಾಯಿಯ ಬಿಲ್ ನೀಡಿದ್ದು, ಇದನ್ನು ಕಟ್ಟಿದ ನಂತರ ಮೃತದೇಹ ಕೊಡುವುದಾಗಿ ತಿಳಿಸಿದ್ದಾರೆ.

ಇದರಿಂದ ಕಂಗಾಲಾದ ಮೃತನ ಕುಟುಂಬಸ್ಥರು ಆಸ್ಪತ್ರೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆ ಸಿಬ್ಬಂದಿ ಸರಿಯಾದ ಚಿಕಿತ್ಸೆ ನೀಡಲಿಲ್ಲ. ಹಾಗಾಗಿ, ನಮ್ಮಣ್ಣ ಮೃತಪಟ್ಟಿದ್ದಾನೆ ಎಂದು ಮೃತ ಸೋಂಕಿತನ ತಮ್ಮ ಅಳಲು ತೋಡಿಕೊಂಡರು.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us