ಶ್ರೀರಾಮುಲುಗೆ ದೂರು ನೀಡಲು ಬಂದ ವ್ಯಕ್ತಿಗೆ ಆಸ್ಪತ್ರೆ ಸಿಬ್ಬಂದಿ ತಡೆ

ಚಿತ್ರದುರ್ಗ: ಆರೋಗ್ಯ & ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಜಿಲ್ಲಾಸ್ಪತ್ರೆಗೆ ತಡರಾತ್ರಿ ಭೇಟಿ ನೀಡಿದ್ದಾರೆ. ಈ ವೇಳೆ ಶ್ರೀರಾಮುಲುಗೆ ಭ್ರಷ್ಟಾಚಾರ ಮತ್ತು ಸಿಬ್ಬಂದಿ ನಿರ್ಲಕ್ಷ್ಯದ ಬಗ್ಗೆ ದೂರು ನೀಡಲು ಬಂದ ಸಿದ್ದೇಶ್ ಎಂಬ ವ್ಯಕ್ತಿಗೆ ಆಸ್ಪತ್ರೆ ಸಿಬ್ಬಂದಿ ತಡೆದಿದ್ದಾರೆ. ಕೆಲದಿನಗಳ ಹಿಂದೆ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದ ಸಿದ್ದೇಶ್ ತಂದೆ ವೀರಭದ್ರಪ್ಪ(61) ಮೃತಪಟ್ಟಿದ್ದರು. ಅಲ್ಲದೆ ಸೂಕ್ತ ಚಿಕಿತ್ಸೆ ನೀಡದ ಕಾರಣ ಸಿದ್ದೇಶ್ ಪತ್ನಿ ಶೈಲಾ(28) ಗರ್ಭದಲ್ಲೇ ಮಗು ಮೃತಪಟ್ಟಿತ್ತು ಎಂಬ ಆರೋಪ ಕೂಡ ಇದೆ. ಈ ಕುರಿತು ದೂರು […]

ಶ್ರೀರಾಮುಲುಗೆ ದೂರು ನೀಡಲು ಬಂದ ವ್ಯಕ್ತಿಗೆ ಆಸ್ಪತ್ರೆ ಸಿಬ್ಬಂದಿ ತಡೆ
ಸಾಧು ಶ್ರೀನಾಥ್​

Updated on: Jan 24, 2020 | 7:51 AM

ಚಿತ್ರದುರ್ಗ: ಆರೋಗ್ಯ & ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಜಿಲ್ಲಾಸ್ಪತ್ರೆಗೆ ತಡರಾತ್ರಿ ಭೇಟಿ ನೀಡಿದ್ದಾರೆ. ಈ ವೇಳೆ ಶ್ರೀರಾಮುಲುಗೆ ಭ್ರಷ್ಟಾಚಾರ ಮತ್ತು ಸಿಬ್ಬಂದಿ ನಿರ್ಲಕ್ಷ್ಯದ ಬಗ್ಗೆ ದೂರು ನೀಡಲು ಬಂದ ಸಿದ್ದೇಶ್ ಎಂಬ ವ್ಯಕ್ತಿಗೆ ಆಸ್ಪತ್ರೆ ಸಿಬ್ಬಂದಿ ತಡೆದಿದ್ದಾರೆ. ಕೆಲದಿನಗಳ ಹಿಂದೆ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದ ಸಿದ್ದೇಶ್ ತಂದೆ ವೀರಭದ್ರಪ್ಪ(61) ಮೃತಪಟ್ಟಿದ್ದರು.

ಅಲ್ಲದೆ ಸೂಕ್ತ ಚಿಕಿತ್ಸೆ ನೀಡದ ಕಾರಣ ಸಿದ್ದೇಶ್ ಪತ್ನಿ ಶೈಲಾ(28) ಗರ್ಭದಲ್ಲೇ ಮಗು ಮೃತಪಟ್ಟಿತ್ತು ಎಂಬ ಆರೋಪ ಕೂಡ ಇದೆ. ಈ ಕುರಿತು ದೂರು ನೀಡಲು ಬಂದ ಸಿದ್ದೇಶ್​ನನ್ನು ಆಸ್ಪತ್ರೆ ಸಿಬ್ಬಂದಿ ತಡೆದಿದ್ದಾರೆ. ನಂತರ ಮಾಧ್ಯಮಗಳ ಎದುರು ಆಸ್ಪತ್ರೆಯ ನಿರ್ಲಕ್ಷ್ಯದ ಬಗ್ಗೆ ಮಾತನಾಡಿದ ಬಳಿಕ ಆಸ್ಪತ್ರೆಯ ಸಿಬ್ಬಂದಿ ಸಚಿವ ಬಿ.ಶ್ರೀರಾಮುಲು ಭೇಟಿ ಮಾಡಿಸಿದ್ದಾರೆ. ಈ ವೇಳೆ ಸಿದ್ದೇಶ್ ಸಿಬ್ಬಂದಿ ವಿರುದ್ಧ ಸಚಿವರಿಗೆ ದೂರು ನೀಡಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us