AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರೇ ಎಚ್ಚರ! ಸತತ 12 ಗಂಟೆ ಸುತ್ತಾಡಿದ್ರು.. ಆಸ್ಪತ್ರೆಗಳಲ್ಲಿ ಸಿಗ್ತಿಲ್ಲ ಚಿಕಿತ್ಸೆ

ಬೆಂಗಳೂರು: ನಗರದಲ್ಲಿ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಕೊರೊನಾ ಅಟ್ಟಹಾಸ ಮಿತಿ ಮೀರುತ್ತಿದೆ. ಹೀಗಾಗಿ ವ್ಯಕ್ತಿಗೆ ಸೋಂಕು ದೃಢಪಟ್ಟ 8 ಗಂಟೆಗಳ ಒಳಗೆ ಅವರಿಗೆ ಚಿಕಿತ್ಸೆ ನೀಡುವುದಾಗಿ ಜೂನ್ 26ರಂದು ಬೆಂಗಳೂರು ಕೊವಿಡ್ ಉಸ್ತುವಾರಿ ಆರ್. ಅಶೋಕ್ ತಿಳಿಸಿದ್ರು. ಆದರೆ ಇಲ್ಲೊಬ್ಬ ಶಂಕಿತ ವ್ಯಕ್ತಿ 12 ಗಂಟೆಗಳ ಕಾಲ ಅನೇಕ ಆಸ್ಪತ್ರೆಗಳನ್ನು ಸುತ್ತಾಡಿದ್ರು ಯಾವ ಆಸ್ಪತ್ರೆ ಕೂಡ ಆತನಿಗೆ ಚಿಕಿತ್ಸೆ ನೀಡಿಲ್ಲ. ಆಸ್ಪತ್ರೆಗಳ ನಿರ್ಲಕ್ಷ್ಯದಿಂದ ರೋಗಿ ನರಕದರ್ಶನ ಕಂಡಿದ್ದಾರೆ. ಕಾಯಿಲೆ ಬಂದ್ರು ಟ್ರೀಟ್​ಮೆಂಟ್ ಕೊಡೋಕೆ ಆಸ್ಪತ್ರೆಗಳು ರೆಡಿಯಿಲ್ಲ. […]

ಬೆಂಗಳೂರಿಗರೇ ಎಚ್ಚರ! ಸತತ 12 ಗಂಟೆ ಸುತ್ತಾಡಿದ್ರು.. ಆಸ್ಪತ್ರೆಗಳಲ್ಲಿ ಸಿಗ್ತಿಲ್ಲ ಚಿಕಿತ್ಸೆ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on: Jun 29, 2020 | 10:05 AM

Share

ಬೆಂಗಳೂರು: ನಗರದಲ್ಲಿ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಕೊರೊನಾ ಅಟ್ಟಹಾಸ ಮಿತಿ ಮೀರುತ್ತಿದೆ. ಹೀಗಾಗಿ ವ್ಯಕ್ತಿಗೆ ಸೋಂಕು ದೃಢಪಟ್ಟ 8 ಗಂಟೆಗಳ ಒಳಗೆ ಅವರಿಗೆ ಚಿಕಿತ್ಸೆ ನೀಡುವುದಾಗಿ ಜೂನ್ 26ರಂದು ಬೆಂಗಳೂರು ಕೊವಿಡ್ ಉಸ್ತುವಾರಿ ಆರ್. ಅಶೋಕ್ ತಿಳಿಸಿದ್ರು. ಆದರೆ ಇಲ್ಲೊಬ್ಬ ಶಂಕಿತ ವ್ಯಕ್ತಿ 12 ಗಂಟೆಗಳ ಕಾಲ ಅನೇಕ ಆಸ್ಪತ್ರೆಗಳನ್ನು ಸುತ್ತಾಡಿದ್ರು ಯಾವ ಆಸ್ಪತ್ರೆ ಕೂಡ ಆತನಿಗೆ ಚಿಕಿತ್ಸೆ ನೀಡಿಲ್ಲ.

ಆಸ್ಪತ್ರೆಗಳ ನಿರ್ಲಕ್ಷ್ಯದಿಂದ ರೋಗಿ ನರಕದರ್ಶನ ಕಂಡಿದ್ದಾರೆ. ಕಾಯಿಲೆ ಬಂದ್ರು ಟ್ರೀಟ್​ಮೆಂಟ್ ಕೊಡೋಕೆ ಆಸ್ಪತ್ರೆಗಳು ರೆಡಿಯಿಲ್ಲ. ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದರು ಟ್ರೀಟ್​ಮೆಂಟ್ ಸಿಗಲಿಲ್ಲ. ಇಂತಹ ಮನಕಲಕುವ, ಹೃದಯವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸುಂಕದಕಟ್ಟೆಯ ವ್ಯಕ್ತಿಯೊಬ್ಬರಿಗೆ ತೀವ್ರ ಉಸಿರಾಟದ ತೊಂದರೆ ಉಂಟಾಗಿದೆ. ಹೀಗಾಗಿ 45 ವರ್ಷದ ಈ ವ್ಯಕ್ತಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿದ್ದಾರೆ. ಆದ್ರೆ ಅವರಿಗೆ ಚಿಕಿತ್ಸೆ ಸಿಕ್ಕಿಲ್ಲ. ನಿನ್ನೆ ನಸುಕಿನ ಜಾವ 3 ಗಂಟೆಯಿಂದ ಮಧ್ಯಾಹ್ನ 3 ರವರೆಗೆ ಅಲೆದ್ರೂ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲೂ ಚಿಕಿತ್ಸೆ ಕೊಡಲು ಹಿಂದೇಟು ಹಾಕುತ್ತಿದ್ದಾರೆ.

ಖಾಸಗಿ ಆಸ್ಪತ್ರೆಗಳಾದ ನಾಗರಬಾವಿಯ ಯುನಿಟಿ ಲೈಫ್ ಲೈನ್, ಯಶವಂತಪುರದ ಸ್ಪರ್ಶ್, ಎಂ.ಎಸ್. ರಾಮಯ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಲು ನಿರಾಕರಿಸಿದ್ದಾರೆ. ಕನಿಷ್ಠ ತುರ್ತು ಚಿಕಿತ್ಸೆಯನ್ನೂ ನೀಡದೆ ಕಳಿಸಿದ್ದಾರೆ. ಬಳಿಕ ಸರ್ಕಾರಿ ಆಸ್ಪತ್ರೆಗಳಾದ ವಿಕ್ಟೋರಿಯಾ, ಸಂಜಯ್ ಗಾಂಧಿ, ರಾಜೀವ್ ಗಾಂಧಿ ಆಸ್ಪತ್ರೆಗಳಿಗೆ ತೆರಳಿದ್ರೂ ಚಿಕಿತ್ಸೆ ನೀಡಿಲ್ಲ.

ವಿಕ್ಟೋರಿಯಾದಲ್ಲಿ ಪಾಸಿಟಿವ್ ರೋಗಿಗಳನ್ನು ಮಾತ್ರ ನೋಡೋದು ಅಂತಾ ವಾಪಸ್ ಕಳಿಸಿದ್ದಾರೆ. ಬಳಿಕ ಸೇಂಟ್ ಜಾನ್ಸ್ ಆಸ್ಪತ್ರೆಗೆ ತೆರಳಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೊನೆಗೆ ಅನಾರೋಗ್ಯ ಪೀಡಿತ ವ್ಯಕ್ತಿ ಟಿವಿ9ಬಳಿ ನೋವು ತೋಡಿಕೊಂಡಿದ್ದಾರೆ. ಕೂಡಲೇ ಕೆ.ಸಿ. ಜನರಲ್ ಆಸ್ಪತ್ರೆ ಆರ್​ಎಂಒ ಮೋಹನ್ ಜೊತೆ ಮಾತನಾಡಿ ಉಸಿರಾಟದ ತೊಂದರೆಯಿಂದ ಬಳಲ್ತಿದ್ದ ವ್ಯಕ್ತಿಯ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಯ್ತು. ಇದಕ್ಕೂ ಮುನ್ನ ಸತತ 12 ಗಂಟೆಗಳ ಕಾಲ ರೋಗಿಯನ್ನು ಸುತ್ತಾಡಿಸಿದ ಖಾಸಗಿ, ಸರ್ಕಾರಿ ಆಸ್ಪತ್ರೆಗಳು ಅಮಾನವೀಯತೆ ಮೆರೆದಿವೆ.

Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ