AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರೇ ಎಚ್ಚರ! ಸತತ 12 ಗಂಟೆ ಸುತ್ತಾಡಿದ್ರು.. ಆಸ್ಪತ್ರೆಗಳಲ್ಲಿ ಸಿಗ್ತಿಲ್ಲ ಚಿಕಿತ್ಸೆ

ಬೆಂಗಳೂರು: ನಗರದಲ್ಲಿ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಕೊರೊನಾ ಅಟ್ಟಹಾಸ ಮಿತಿ ಮೀರುತ್ತಿದೆ. ಹೀಗಾಗಿ ವ್ಯಕ್ತಿಗೆ ಸೋಂಕು ದೃಢಪಟ್ಟ 8 ಗಂಟೆಗಳ ಒಳಗೆ ಅವರಿಗೆ ಚಿಕಿತ್ಸೆ ನೀಡುವುದಾಗಿ ಜೂನ್ 26ರಂದು ಬೆಂಗಳೂರು ಕೊವಿಡ್ ಉಸ್ತುವಾರಿ ಆರ್. ಅಶೋಕ್ ತಿಳಿಸಿದ್ರು. ಆದರೆ ಇಲ್ಲೊಬ್ಬ ಶಂಕಿತ ವ್ಯಕ್ತಿ 12 ಗಂಟೆಗಳ ಕಾಲ ಅನೇಕ ಆಸ್ಪತ್ರೆಗಳನ್ನು ಸುತ್ತಾಡಿದ್ರು ಯಾವ ಆಸ್ಪತ್ರೆ ಕೂಡ ಆತನಿಗೆ ಚಿಕಿತ್ಸೆ ನೀಡಿಲ್ಲ. ಆಸ್ಪತ್ರೆಗಳ ನಿರ್ಲಕ್ಷ್ಯದಿಂದ ರೋಗಿ ನರಕದರ್ಶನ ಕಂಡಿದ್ದಾರೆ. ಕಾಯಿಲೆ ಬಂದ್ರು ಟ್ರೀಟ್​ಮೆಂಟ್ ಕೊಡೋಕೆ ಆಸ್ಪತ್ರೆಗಳು ರೆಡಿಯಿಲ್ಲ. […]

ಬೆಂಗಳೂರಿಗರೇ ಎಚ್ಚರ! ಸತತ 12 ಗಂಟೆ ಸುತ್ತಾಡಿದ್ರು.. ಆಸ್ಪತ್ರೆಗಳಲ್ಲಿ ಸಿಗ್ತಿಲ್ಲ ಚಿಕಿತ್ಸೆ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on: Jun 29, 2020 | 10:05 AM

Share

ಬೆಂಗಳೂರು: ನಗರದಲ್ಲಿ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಕೊರೊನಾ ಅಟ್ಟಹಾಸ ಮಿತಿ ಮೀರುತ್ತಿದೆ. ಹೀಗಾಗಿ ವ್ಯಕ್ತಿಗೆ ಸೋಂಕು ದೃಢಪಟ್ಟ 8 ಗಂಟೆಗಳ ಒಳಗೆ ಅವರಿಗೆ ಚಿಕಿತ್ಸೆ ನೀಡುವುದಾಗಿ ಜೂನ್ 26ರಂದು ಬೆಂಗಳೂರು ಕೊವಿಡ್ ಉಸ್ತುವಾರಿ ಆರ್. ಅಶೋಕ್ ತಿಳಿಸಿದ್ರು. ಆದರೆ ಇಲ್ಲೊಬ್ಬ ಶಂಕಿತ ವ್ಯಕ್ತಿ 12 ಗಂಟೆಗಳ ಕಾಲ ಅನೇಕ ಆಸ್ಪತ್ರೆಗಳನ್ನು ಸುತ್ತಾಡಿದ್ರು ಯಾವ ಆಸ್ಪತ್ರೆ ಕೂಡ ಆತನಿಗೆ ಚಿಕಿತ್ಸೆ ನೀಡಿಲ್ಲ.

ಆಸ್ಪತ್ರೆಗಳ ನಿರ್ಲಕ್ಷ್ಯದಿಂದ ರೋಗಿ ನರಕದರ್ಶನ ಕಂಡಿದ್ದಾರೆ. ಕಾಯಿಲೆ ಬಂದ್ರು ಟ್ರೀಟ್​ಮೆಂಟ್ ಕೊಡೋಕೆ ಆಸ್ಪತ್ರೆಗಳು ರೆಡಿಯಿಲ್ಲ. ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದರು ಟ್ರೀಟ್​ಮೆಂಟ್ ಸಿಗಲಿಲ್ಲ. ಇಂತಹ ಮನಕಲಕುವ, ಹೃದಯವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸುಂಕದಕಟ್ಟೆಯ ವ್ಯಕ್ತಿಯೊಬ್ಬರಿಗೆ ತೀವ್ರ ಉಸಿರಾಟದ ತೊಂದರೆ ಉಂಟಾಗಿದೆ. ಹೀಗಾಗಿ 45 ವರ್ಷದ ಈ ವ್ಯಕ್ತಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿದ್ದಾರೆ. ಆದ್ರೆ ಅವರಿಗೆ ಚಿಕಿತ್ಸೆ ಸಿಕ್ಕಿಲ್ಲ. ನಿನ್ನೆ ನಸುಕಿನ ಜಾವ 3 ಗಂಟೆಯಿಂದ ಮಧ್ಯಾಹ್ನ 3 ರವರೆಗೆ ಅಲೆದ್ರೂ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲೂ ಚಿಕಿತ್ಸೆ ಕೊಡಲು ಹಿಂದೇಟು ಹಾಕುತ್ತಿದ್ದಾರೆ.

ಖಾಸಗಿ ಆಸ್ಪತ್ರೆಗಳಾದ ನಾಗರಬಾವಿಯ ಯುನಿಟಿ ಲೈಫ್ ಲೈನ್, ಯಶವಂತಪುರದ ಸ್ಪರ್ಶ್, ಎಂ.ಎಸ್. ರಾಮಯ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಲು ನಿರಾಕರಿಸಿದ್ದಾರೆ. ಕನಿಷ್ಠ ತುರ್ತು ಚಿಕಿತ್ಸೆಯನ್ನೂ ನೀಡದೆ ಕಳಿಸಿದ್ದಾರೆ. ಬಳಿಕ ಸರ್ಕಾರಿ ಆಸ್ಪತ್ರೆಗಳಾದ ವಿಕ್ಟೋರಿಯಾ, ಸಂಜಯ್ ಗಾಂಧಿ, ರಾಜೀವ್ ಗಾಂಧಿ ಆಸ್ಪತ್ರೆಗಳಿಗೆ ತೆರಳಿದ್ರೂ ಚಿಕಿತ್ಸೆ ನೀಡಿಲ್ಲ.

ವಿಕ್ಟೋರಿಯಾದಲ್ಲಿ ಪಾಸಿಟಿವ್ ರೋಗಿಗಳನ್ನು ಮಾತ್ರ ನೋಡೋದು ಅಂತಾ ವಾಪಸ್ ಕಳಿಸಿದ್ದಾರೆ. ಬಳಿಕ ಸೇಂಟ್ ಜಾನ್ಸ್ ಆಸ್ಪತ್ರೆಗೆ ತೆರಳಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೊನೆಗೆ ಅನಾರೋಗ್ಯ ಪೀಡಿತ ವ್ಯಕ್ತಿ ಟಿವಿ9ಬಳಿ ನೋವು ತೋಡಿಕೊಂಡಿದ್ದಾರೆ. ಕೂಡಲೇ ಕೆ.ಸಿ. ಜನರಲ್ ಆಸ್ಪತ್ರೆ ಆರ್​ಎಂಒ ಮೋಹನ್ ಜೊತೆ ಮಾತನಾಡಿ ಉಸಿರಾಟದ ತೊಂದರೆಯಿಂದ ಬಳಲ್ತಿದ್ದ ವ್ಯಕ್ತಿಯ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಯ್ತು. ಇದಕ್ಕೂ ಮುನ್ನ ಸತತ 12 ಗಂಟೆಗಳ ಕಾಲ ರೋಗಿಯನ್ನು ಸುತ್ತಾಡಿಸಿದ ಖಾಸಗಿ, ಸರ್ಕಾರಿ ಆಸ್ಪತ್ರೆಗಳು ಅಮಾನವೀಯತೆ ಮೆರೆದಿವೆ.

ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ