AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರೇ ಎಚ್ಚರ! ಸತತ 12 ಗಂಟೆ ಸುತ್ತಾಡಿದ್ರು.. ಆಸ್ಪತ್ರೆಗಳಲ್ಲಿ ಸಿಗ್ತಿಲ್ಲ ಚಿಕಿತ್ಸೆ

ಬೆಂಗಳೂರು: ನಗರದಲ್ಲಿ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಕೊರೊನಾ ಅಟ್ಟಹಾಸ ಮಿತಿ ಮೀರುತ್ತಿದೆ. ಹೀಗಾಗಿ ವ್ಯಕ್ತಿಗೆ ಸೋಂಕು ದೃಢಪಟ್ಟ 8 ಗಂಟೆಗಳ ಒಳಗೆ ಅವರಿಗೆ ಚಿಕಿತ್ಸೆ ನೀಡುವುದಾಗಿ ಜೂನ್ 26ರಂದು ಬೆಂಗಳೂರು ಕೊವಿಡ್ ಉಸ್ತುವಾರಿ ಆರ್. ಅಶೋಕ್ ತಿಳಿಸಿದ್ರು. ಆದರೆ ಇಲ್ಲೊಬ್ಬ ಶಂಕಿತ ವ್ಯಕ್ತಿ 12 ಗಂಟೆಗಳ ಕಾಲ ಅನೇಕ ಆಸ್ಪತ್ರೆಗಳನ್ನು ಸುತ್ತಾಡಿದ್ರು ಯಾವ ಆಸ್ಪತ್ರೆ ಕೂಡ ಆತನಿಗೆ ಚಿಕಿತ್ಸೆ ನೀಡಿಲ್ಲ. ಆಸ್ಪತ್ರೆಗಳ ನಿರ್ಲಕ್ಷ್ಯದಿಂದ ರೋಗಿ ನರಕದರ್ಶನ ಕಂಡಿದ್ದಾರೆ. ಕಾಯಿಲೆ ಬಂದ್ರು ಟ್ರೀಟ್​ಮೆಂಟ್ ಕೊಡೋಕೆ ಆಸ್ಪತ್ರೆಗಳು ರೆಡಿಯಿಲ್ಲ. […]

ಬೆಂಗಳೂರಿಗರೇ ಎಚ್ಚರ! ಸತತ 12 ಗಂಟೆ ಸುತ್ತಾಡಿದ್ರು.. ಆಸ್ಪತ್ರೆಗಳಲ್ಲಿ ಸಿಗ್ತಿಲ್ಲ ಚಿಕಿತ್ಸೆ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on: Jun 29, 2020 | 10:05 AM

Share

ಬೆಂಗಳೂರು: ನಗರದಲ್ಲಿ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಕೊರೊನಾ ಅಟ್ಟಹಾಸ ಮಿತಿ ಮೀರುತ್ತಿದೆ. ಹೀಗಾಗಿ ವ್ಯಕ್ತಿಗೆ ಸೋಂಕು ದೃಢಪಟ್ಟ 8 ಗಂಟೆಗಳ ಒಳಗೆ ಅವರಿಗೆ ಚಿಕಿತ್ಸೆ ನೀಡುವುದಾಗಿ ಜೂನ್ 26ರಂದು ಬೆಂಗಳೂರು ಕೊವಿಡ್ ಉಸ್ತುವಾರಿ ಆರ್. ಅಶೋಕ್ ತಿಳಿಸಿದ್ರು. ಆದರೆ ಇಲ್ಲೊಬ್ಬ ಶಂಕಿತ ವ್ಯಕ್ತಿ 12 ಗಂಟೆಗಳ ಕಾಲ ಅನೇಕ ಆಸ್ಪತ್ರೆಗಳನ್ನು ಸುತ್ತಾಡಿದ್ರು ಯಾವ ಆಸ್ಪತ್ರೆ ಕೂಡ ಆತನಿಗೆ ಚಿಕಿತ್ಸೆ ನೀಡಿಲ್ಲ.

ಆಸ್ಪತ್ರೆಗಳ ನಿರ್ಲಕ್ಷ್ಯದಿಂದ ರೋಗಿ ನರಕದರ್ಶನ ಕಂಡಿದ್ದಾರೆ. ಕಾಯಿಲೆ ಬಂದ್ರು ಟ್ರೀಟ್​ಮೆಂಟ್ ಕೊಡೋಕೆ ಆಸ್ಪತ್ರೆಗಳು ರೆಡಿಯಿಲ್ಲ. ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದರು ಟ್ರೀಟ್​ಮೆಂಟ್ ಸಿಗಲಿಲ್ಲ. ಇಂತಹ ಮನಕಲಕುವ, ಹೃದಯವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸುಂಕದಕಟ್ಟೆಯ ವ್ಯಕ್ತಿಯೊಬ್ಬರಿಗೆ ತೀವ್ರ ಉಸಿರಾಟದ ತೊಂದರೆ ಉಂಟಾಗಿದೆ. ಹೀಗಾಗಿ 45 ವರ್ಷದ ಈ ವ್ಯಕ್ತಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿದ್ದಾರೆ. ಆದ್ರೆ ಅವರಿಗೆ ಚಿಕಿತ್ಸೆ ಸಿಕ್ಕಿಲ್ಲ. ನಿನ್ನೆ ನಸುಕಿನ ಜಾವ 3 ಗಂಟೆಯಿಂದ ಮಧ್ಯಾಹ್ನ 3 ರವರೆಗೆ ಅಲೆದ್ರೂ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲೂ ಚಿಕಿತ್ಸೆ ಕೊಡಲು ಹಿಂದೇಟು ಹಾಕುತ್ತಿದ್ದಾರೆ.

ಖಾಸಗಿ ಆಸ್ಪತ್ರೆಗಳಾದ ನಾಗರಬಾವಿಯ ಯುನಿಟಿ ಲೈಫ್ ಲೈನ್, ಯಶವಂತಪುರದ ಸ್ಪರ್ಶ್, ಎಂ.ಎಸ್. ರಾಮಯ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಲು ನಿರಾಕರಿಸಿದ್ದಾರೆ. ಕನಿಷ್ಠ ತುರ್ತು ಚಿಕಿತ್ಸೆಯನ್ನೂ ನೀಡದೆ ಕಳಿಸಿದ್ದಾರೆ. ಬಳಿಕ ಸರ್ಕಾರಿ ಆಸ್ಪತ್ರೆಗಳಾದ ವಿಕ್ಟೋರಿಯಾ, ಸಂಜಯ್ ಗಾಂಧಿ, ರಾಜೀವ್ ಗಾಂಧಿ ಆಸ್ಪತ್ರೆಗಳಿಗೆ ತೆರಳಿದ್ರೂ ಚಿಕಿತ್ಸೆ ನೀಡಿಲ್ಲ.

ವಿಕ್ಟೋರಿಯಾದಲ್ಲಿ ಪಾಸಿಟಿವ್ ರೋಗಿಗಳನ್ನು ಮಾತ್ರ ನೋಡೋದು ಅಂತಾ ವಾಪಸ್ ಕಳಿಸಿದ್ದಾರೆ. ಬಳಿಕ ಸೇಂಟ್ ಜಾನ್ಸ್ ಆಸ್ಪತ್ರೆಗೆ ತೆರಳಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೊನೆಗೆ ಅನಾರೋಗ್ಯ ಪೀಡಿತ ವ್ಯಕ್ತಿ ಟಿವಿ9ಬಳಿ ನೋವು ತೋಡಿಕೊಂಡಿದ್ದಾರೆ. ಕೂಡಲೇ ಕೆ.ಸಿ. ಜನರಲ್ ಆಸ್ಪತ್ರೆ ಆರ್​ಎಂಒ ಮೋಹನ್ ಜೊತೆ ಮಾತನಾಡಿ ಉಸಿರಾಟದ ತೊಂದರೆಯಿಂದ ಬಳಲ್ತಿದ್ದ ವ್ಯಕ್ತಿಯ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಯ್ತು. ಇದಕ್ಕೂ ಮುನ್ನ ಸತತ 12 ಗಂಟೆಗಳ ಕಾಲ ರೋಗಿಯನ್ನು ಸುತ್ತಾಡಿಸಿದ ಖಾಸಗಿ, ಸರ್ಕಾರಿ ಆಸ್ಪತ್ರೆಗಳು ಅಮಾನವೀಯತೆ ಮೆರೆದಿವೆ.

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ