AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರೇ ಎಚ್ಚರ! ಸತತ 12 ಗಂಟೆ ಸುತ್ತಾಡಿದ್ರು.. ಆಸ್ಪತ್ರೆಗಳಲ್ಲಿ ಸಿಗ್ತಿಲ್ಲ ಚಿಕಿತ್ಸೆ

ಬೆಂಗಳೂರು: ನಗರದಲ್ಲಿ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಕೊರೊನಾ ಅಟ್ಟಹಾಸ ಮಿತಿ ಮೀರುತ್ತಿದೆ. ಹೀಗಾಗಿ ವ್ಯಕ್ತಿಗೆ ಸೋಂಕು ದೃಢಪಟ್ಟ 8 ಗಂಟೆಗಳ ಒಳಗೆ ಅವರಿಗೆ ಚಿಕಿತ್ಸೆ ನೀಡುವುದಾಗಿ ಜೂನ್ 26ರಂದು ಬೆಂಗಳೂರು ಕೊವಿಡ್ ಉಸ್ತುವಾರಿ ಆರ್. ಅಶೋಕ್ ತಿಳಿಸಿದ್ರು. ಆದರೆ ಇಲ್ಲೊಬ್ಬ ಶಂಕಿತ ವ್ಯಕ್ತಿ 12 ಗಂಟೆಗಳ ಕಾಲ ಅನೇಕ ಆಸ್ಪತ್ರೆಗಳನ್ನು ಸುತ್ತಾಡಿದ್ರು ಯಾವ ಆಸ್ಪತ್ರೆ ಕೂಡ ಆತನಿಗೆ ಚಿಕಿತ್ಸೆ ನೀಡಿಲ್ಲ. ಆಸ್ಪತ್ರೆಗಳ ನಿರ್ಲಕ್ಷ್ಯದಿಂದ ರೋಗಿ ನರಕದರ್ಶನ ಕಂಡಿದ್ದಾರೆ. ಕಾಯಿಲೆ ಬಂದ್ರು ಟ್ರೀಟ್​ಮೆಂಟ್ ಕೊಡೋಕೆ ಆಸ್ಪತ್ರೆಗಳು ರೆಡಿಯಿಲ್ಲ. […]

ಬೆಂಗಳೂರಿಗರೇ ಎಚ್ಚರ! ಸತತ 12 ಗಂಟೆ ಸುತ್ತಾಡಿದ್ರು.. ಆಸ್ಪತ್ರೆಗಳಲ್ಲಿ ಸಿಗ್ತಿಲ್ಲ ಚಿಕಿತ್ಸೆ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on: Jun 29, 2020 | 10:05 AM

Share

ಬೆಂಗಳೂರು: ನಗರದಲ್ಲಿ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಕೊರೊನಾ ಅಟ್ಟಹಾಸ ಮಿತಿ ಮೀರುತ್ತಿದೆ. ಹೀಗಾಗಿ ವ್ಯಕ್ತಿಗೆ ಸೋಂಕು ದೃಢಪಟ್ಟ 8 ಗಂಟೆಗಳ ಒಳಗೆ ಅವರಿಗೆ ಚಿಕಿತ್ಸೆ ನೀಡುವುದಾಗಿ ಜೂನ್ 26ರಂದು ಬೆಂಗಳೂರು ಕೊವಿಡ್ ಉಸ್ತುವಾರಿ ಆರ್. ಅಶೋಕ್ ತಿಳಿಸಿದ್ರು. ಆದರೆ ಇಲ್ಲೊಬ್ಬ ಶಂಕಿತ ವ್ಯಕ್ತಿ 12 ಗಂಟೆಗಳ ಕಾಲ ಅನೇಕ ಆಸ್ಪತ್ರೆಗಳನ್ನು ಸುತ್ತಾಡಿದ್ರು ಯಾವ ಆಸ್ಪತ್ರೆ ಕೂಡ ಆತನಿಗೆ ಚಿಕಿತ್ಸೆ ನೀಡಿಲ್ಲ.

ಆಸ್ಪತ್ರೆಗಳ ನಿರ್ಲಕ್ಷ್ಯದಿಂದ ರೋಗಿ ನರಕದರ್ಶನ ಕಂಡಿದ್ದಾರೆ. ಕಾಯಿಲೆ ಬಂದ್ರು ಟ್ರೀಟ್​ಮೆಂಟ್ ಕೊಡೋಕೆ ಆಸ್ಪತ್ರೆಗಳು ರೆಡಿಯಿಲ್ಲ. ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದರು ಟ್ರೀಟ್​ಮೆಂಟ್ ಸಿಗಲಿಲ್ಲ. ಇಂತಹ ಮನಕಲಕುವ, ಹೃದಯವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸುಂಕದಕಟ್ಟೆಯ ವ್ಯಕ್ತಿಯೊಬ್ಬರಿಗೆ ತೀವ್ರ ಉಸಿರಾಟದ ತೊಂದರೆ ಉಂಟಾಗಿದೆ. ಹೀಗಾಗಿ 45 ವರ್ಷದ ಈ ವ್ಯಕ್ತಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿದ್ದಾರೆ. ಆದ್ರೆ ಅವರಿಗೆ ಚಿಕಿತ್ಸೆ ಸಿಕ್ಕಿಲ್ಲ. ನಿನ್ನೆ ನಸುಕಿನ ಜಾವ 3 ಗಂಟೆಯಿಂದ ಮಧ್ಯಾಹ್ನ 3 ರವರೆಗೆ ಅಲೆದ್ರೂ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲೂ ಚಿಕಿತ್ಸೆ ಕೊಡಲು ಹಿಂದೇಟು ಹಾಕುತ್ತಿದ್ದಾರೆ.

ಖಾಸಗಿ ಆಸ್ಪತ್ರೆಗಳಾದ ನಾಗರಬಾವಿಯ ಯುನಿಟಿ ಲೈಫ್ ಲೈನ್, ಯಶವಂತಪುರದ ಸ್ಪರ್ಶ್, ಎಂ.ಎಸ್. ರಾಮಯ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಲು ನಿರಾಕರಿಸಿದ್ದಾರೆ. ಕನಿಷ್ಠ ತುರ್ತು ಚಿಕಿತ್ಸೆಯನ್ನೂ ನೀಡದೆ ಕಳಿಸಿದ್ದಾರೆ. ಬಳಿಕ ಸರ್ಕಾರಿ ಆಸ್ಪತ್ರೆಗಳಾದ ವಿಕ್ಟೋರಿಯಾ, ಸಂಜಯ್ ಗಾಂಧಿ, ರಾಜೀವ್ ಗಾಂಧಿ ಆಸ್ಪತ್ರೆಗಳಿಗೆ ತೆರಳಿದ್ರೂ ಚಿಕಿತ್ಸೆ ನೀಡಿಲ್ಲ.

ವಿಕ್ಟೋರಿಯಾದಲ್ಲಿ ಪಾಸಿಟಿವ್ ರೋಗಿಗಳನ್ನು ಮಾತ್ರ ನೋಡೋದು ಅಂತಾ ವಾಪಸ್ ಕಳಿಸಿದ್ದಾರೆ. ಬಳಿಕ ಸೇಂಟ್ ಜಾನ್ಸ್ ಆಸ್ಪತ್ರೆಗೆ ತೆರಳಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೊನೆಗೆ ಅನಾರೋಗ್ಯ ಪೀಡಿತ ವ್ಯಕ್ತಿ ಟಿವಿ9ಬಳಿ ನೋವು ತೋಡಿಕೊಂಡಿದ್ದಾರೆ. ಕೂಡಲೇ ಕೆ.ಸಿ. ಜನರಲ್ ಆಸ್ಪತ್ರೆ ಆರ್​ಎಂಒ ಮೋಹನ್ ಜೊತೆ ಮಾತನಾಡಿ ಉಸಿರಾಟದ ತೊಂದರೆಯಿಂದ ಬಳಲ್ತಿದ್ದ ವ್ಯಕ್ತಿಯ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಯ್ತು. ಇದಕ್ಕೂ ಮುನ್ನ ಸತತ 12 ಗಂಟೆಗಳ ಕಾಲ ರೋಗಿಯನ್ನು ಸುತ್ತಾಡಿಸಿದ ಖಾಸಗಿ, ಸರ್ಕಾರಿ ಆಸ್ಪತ್ರೆಗಳು ಅಮಾನವೀಯತೆ ಮೆರೆದಿವೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ