AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರು ದಿನದಿಂದ ಆಸ್ಪತ್ರೆ ಅಲೆದಾಡಿ ಪ್ರಾಣ ಬಿಟ್ಟ ನಿವೃತ್ತ ಸಬ್​ಇನ್ಸ್​ಪೆಕ್ಟರ್

ಬೆಂಗಳೂರು: ಕೊರೊನಾ ಎಲ್ಲವನ್ನೂ ಬದಲಾಯಿಸಿದೆ. ಹಣ ಇದ್ದರು ಚಿಕಿತ್ಸೆ ಸಿಗುವುದು ಕಷ್ಟವಾಗಿದೆ. ಕೊರೊನಾ ಸೋಂಕುಪೀಡಿತರಿಗೆ ಯಮಯಾತನೆ ತೂರಿಸುತ್ತಿದೆ. ಅನಾರೋಗ್ಯಕ್ಕೊಳಗಾದ್ರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆಯೇ ಸಿಗ್ತಿಲ್ಲ. ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಅಮಾನವೀಯತೆ ಎದ್ದು ಕಾಣುತ್ತಿದೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ರೂ ಡೋಂಟ್​ಕೇರ್ ಎನ್ನುವಂತಾಗಿದೆ. ಸರ್ಕಾರಿ, ಖಾಸಗಿ ಆಸ್ಪತ್ರೆಗಳ ನಿರ್ಲಕ್ಷ್ಯಕ್ಕೆ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ನಿವೃತ್ತ ಸಬ್​ಇನ್ಸ್​ಪೆಕ್ಟರ್ ಬಲಿಯಾಗಿದ್ದಾರೆ. ತಡರಾತ್ರಿ 3 ಗಂಟೆ ಸುಮಾರಿಗೆ ನಿವೃತ್ತ ಸಬ್​ಇನ್ಸ್​ಪೆಕ್ಟರ್ ಕೊನೆಯುಸಿರೆಳೆದಿದ್ದಾರೆ. ಇವರು ಕಳೆದ ಮೂರು ದಿನಗಳಿಂದ ಆಸ್ಪತ್ರೆಗಳಿಗೆ ಅಲೆದಾಡಿದ್ದಾರೆ. ಆದ್ರೆ ಎಲ್ಲೂ ಚಿಕಿತ್ಸೆ ಸಿಕ್ಕಿಲ್ಲ. […]

ಮೂರು ದಿನದಿಂದ ಆಸ್ಪತ್ರೆ ಅಲೆದಾಡಿ ಪ್ರಾಣ ಬಿಟ್ಟ ನಿವೃತ್ತ ಸಬ್​ಇನ್ಸ್​ಪೆಕ್ಟರ್
ಆಯೇಷಾ ಬಾನು
|

Updated on: Jul 03, 2020 | 9:33 AM

Share

ಬೆಂಗಳೂರು: ಕೊರೊನಾ ಎಲ್ಲವನ್ನೂ ಬದಲಾಯಿಸಿದೆ. ಹಣ ಇದ್ದರು ಚಿಕಿತ್ಸೆ ಸಿಗುವುದು ಕಷ್ಟವಾಗಿದೆ. ಕೊರೊನಾ ಸೋಂಕುಪೀಡಿತರಿಗೆ ಯಮಯಾತನೆ ತೂರಿಸುತ್ತಿದೆ. ಅನಾರೋಗ್ಯಕ್ಕೊಳಗಾದ್ರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆಯೇ ಸಿಗ್ತಿಲ್ಲ. ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಅಮಾನವೀಯತೆ ಎದ್ದು ಕಾಣುತ್ತಿದೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ರೂ ಡೋಂಟ್​ಕೇರ್ ಎನ್ನುವಂತಾಗಿದೆ.

ಸರ್ಕಾರಿ, ಖಾಸಗಿ ಆಸ್ಪತ್ರೆಗಳ ನಿರ್ಲಕ್ಷ್ಯಕ್ಕೆ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ನಿವೃತ್ತ ಸಬ್​ಇನ್ಸ್​ಪೆಕ್ಟರ್ ಬಲಿಯಾಗಿದ್ದಾರೆ. ತಡರಾತ್ರಿ 3 ಗಂಟೆ ಸುಮಾರಿಗೆ ನಿವೃತ್ತ ಸಬ್​ಇನ್ಸ್​ಪೆಕ್ಟರ್ ಕೊನೆಯುಸಿರೆಳೆದಿದ್ದಾರೆ. ಇವರು ಕಳೆದ ಮೂರು ದಿನಗಳಿಂದ ಆಸ್ಪತ್ರೆಗಳಿಗೆ ಅಲೆದಾಡಿದ್ದಾರೆ. ಆದ್ರೆ ಎಲ್ಲೂ ಚಿಕಿತ್ಸೆ ಸಿಕ್ಕಿಲ್ಲ. ಜ್ವರ, ಉಸಿರಾಟದ ಸಮಸ್ಯೆಯಿಂದ ಕಂಗಾಲಾಗಿದ್ದ 67 ವರ್ಷದ ವೃದ್ಧ ಮೃತಪಟ್ಟಿದ್ದಾರೆ.

ಹೆಬ್ಬಾಳದ ವೈದ್ಯರು ಆಸ್ಪತ್ರೆಗೆ ದಾಖಲಾಗುವಂತೆ ಸೂಚನೆ ನೀಡಿದ್ರು. ಮೃತ ನಿವೃತ್ತ ಸಬ್​ಇನ್ಸ್​ಪೆಕ್ಟರ್ ವಿಲ್ಸನ್ ಗಾರ್ಡನ್ ಅಗಡಿ ಆಸ್ಪತ್ರೆಗೆ ತೆರಳಿದ್ರೂ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ. ಕೇವಲ ಕೊರೊನಾ ಟೆಸ್ಟ್ ಮಾಡಿ ₹4,500 ಪಾವತಿಸಿಕೊಂಡಿದ್ದಾರೆ. ಆದರೆ ಚಿಕಿತ್ಸೆ ನೀಡಿಲ್ಲ. ನಂತರ ವೊಕಾರ್ಡ್ ಆಸ್ಪತ್ರೆ, ತೆರಳಿದ್ರೂ ಅಲ್ಲೂ ಕೂಡ ಇದೇ ಪರಿಸ್ಥಿತಿ. ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಬೆಡ್ ಖಾಲಿ ಇಲ್ಲ ಎಂದು 3 ಗಂಟೆ ಕಾಯಿಸಿದ್ದಾರೆ ಚಿಕಿತ್ಸೆಗೆ ನಿರಾಕರಿಸಿದ್ದಾರೆ. ಸೇಂಟ್ ಜಾನ್ಸ್ ಆಸ್ಪತ್ರೆಗೆ ತೆರಳಿದ್ರೆ ಅಲ್ಲೂ ದಾಖಲಿಸಿಕೊಂಡಿಲ್ಲ. ಮೂರು ದಿನಗಳಿಂದ ಚಿಕಿತ್ಸೆಯೂ ಸಿಕ್ಕಿಲ್ಲ, ಕೊವಿಡ್ ರಿಪೋರ್ಟ್ ಕೂಡ ಬಂದಿಲ್ಲ. ಮೂರು ದಿನ ಆಸ್ಪತ್ರೆಗಳನ್ನು ಅಲೆದಾಡಿ ಇಂದು ಪ್ರಾಣ ಬಿಟ್ಟಿದ್ದಾರೆ.

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ