AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರು ದಿನದಿಂದ ಆಸ್ಪತ್ರೆ ಅಲೆದಾಡಿ ಪ್ರಾಣ ಬಿಟ್ಟ ನಿವೃತ್ತ ಸಬ್​ಇನ್ಸ್​ಪೆಕ್ಟರ್

ಬೆಂಗಳೂರು: ಕೊರೊನಾ ಎಲ್ಲವನ್ನೂ ಬದಲಾಯಿಸಿದೆ. ಹಣ ಇದ್ದರು ಚಿಕಿತ್ಸೆ ಸಿಗುವುದು ಕಷ್ಟವಾಗಿದೆ. ಕೊರೊನಾ ಸೋಂಕುಪೀಡಿತರಿಗೆ ಯಮಯಾತನೆ ತೂರಿಸುತ್ತಿದೆ. ಅನಾರೋಗ್ಯಕ್ಕೊಳಗಾದ್ರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆಯೇ ಸಿಗ್ತಿಲ್ಲ. ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಅಮಾನವೀಯತೆ ಎದ್ದು ಕಾಣುತ್ತಿದೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ರೂ ಡೋಂಟ್​ಕೇರ್ ಎನ್ನುವಂತಾಗಿದೆ. ಸರ್ಕಾರಿ, ಖಾಸಗಿ ಆಸ್ಪತ್ರೆಗಳ ನಿರ್ಲಕ್ಷ್ಯಕ್ಕೆ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ನಿವೃತ್ತ ಸಬ್​ಇನ್ಸ್​ಪೆಕ್ಟರ್ ಬಲಿಯಾಗಿದ್ದಾರೆ. ತಡರಾತ್ರಿ 3 ಗಂಟೆ ಸುಮಾರಿಗೆ ನಿವೃತ್ತ ಸಬ್​ಇನ್ಸ್​ಪೆಕ್ಟರ್ ಕೊನೆಯುಸಿರೆಳೆದಿದ್ದಾರೆ. ಇವರು ಕಳೆದ ಮೂರು ದಿನಗಳಿಂದ ಆಸ್ಪತ್ರೆಗಳಿಗೆ ಅಲೆದಾಡಿದ್ದಾರೆ. ಆದ್ರೆ ಎಲ್ಲೂ ಚಿಕಿತ್ಸೆ ಸಿಕ್ಕಿಲ್ಲ. […]

ಮೂರು ದಿನದಿಂದ ಆಸ್ಪತ್ರೆ ಅಲೆದಾಡಿ ಪ್ರಾಣ ಬಿಟ್ಟ ನಿವೃತ್ತ ಸಬ್​ಇನ್ಸ್​ಪೆಕ್ಟರ್
ಆಯೇಷಾ ಬಾನು
|

Updated on: Jul 03, 2020 | 9:33 AM

Share

ಬೆಂಗಳೂರು: ಕೊರೊನಾ ಎಲ್ಲವನ್ನೂ ಬದಲಾಯಿಸಿದೆ. ಹಣ ಇದ್ದರು ಚಿಕಿತ್ಸೆ ಸಿಗುವುದು ಕಷ್ಟವಾಗಿದೆ. ಕೊರೊನಾ ಸೋಂಕುಪೀಡಿತರಿಗೆ ಯಮಯಾತನೆ ತೂರಿಸುತ್ತಿದೆ. ಅನಾರೋಗ್ಯಕ್ಕೊಳಗಾದ್ರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆಯೇ ಸಿಗ್ತಿಲ್ಲ. ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಅಮಾನವೀಯತೆ ಎದ್ದು ಕಾಣುತ್ತಿದೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ರೂ ಡೋಂಟ್​ಕೇರ್ ಎನ್ನುವಂತಾಗಿದೆ.

ಸರ್ಕಾರಿ, ಖಾಸಗಿ ಆಸ್ಪತ್ರೆಗಳ ನಿರ್ಲಕ್ಷ್ಯಕ್ಕೆ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ನಿವೃತ್ತ ಸಬ್​ಇನ್ಸ್​ಪೆಕ್ಟರ್ ಬಲಿಯಾಗಿದ್ದಾರೆ. ತಡರಾತ್ರಿ 3 ಗಂಟೆ ಸುಮಾರಿಗೆ ನಿವೃತ್ತ ಸಬ್​ಇನ್ಸ್​ಪೆಕ್ಟರ್ ಕೊನೆಯುಸಿರೆಳೆದಿದ್ದಾರೆ. ಇವರು ಕಳೆದ ಮೂರು ದಿನಗಳಿಂದ ಆಸ್ಪತ್ರೆಗಳಿಗೆ ಅಲೆದಾಡಿದ್ದಾರೆ. ಆದ್ರೆ ಎಲ್ಲೂ ಚಿಕಿತ್ಸೆ ಸಿಕ್ಕಿಲ್ಲ. ಜ್ವರ, ಉಸಿರಾಟದ ಸಮಸ್ಯೆಯಿಂದ ಕಂಗಾಲಾಗಿದ್ದ 67 ವರ್ಷದ ವೃದ್ಧ ಮೃತಪಟ್ಟಿದ್ದಾರೆ.

ಹೆಬ್ಬಾಳದ ವೈದ್ಯರು ಆಸ್ಪತ್ರೆಗೆ ದಾಖಲಾಗುವಂತೆ ಸೂಚನೆ ನೀಡಿದ್ರು. ಮೃತ ನಿವೃತ್ತ ಸಬ್​ಇನ್ಸ್​ಪೆಕ್ಟರ್ ವಿಲ್ಸನ್ ಗಾರ್ಡನ್ ಅಗಡಿ ಆಸ್ಪತ್ರೆಗೆ ತೆರಳಿದ್ರೂ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ. ಕೇವಲ ಕೊರೊನಾ ಟೆಸ್ಟ್ ಮಾಡಿ ₹4,500 ಪಾವತಿಸಿಕೊಂಡಿದ್ದಾರೆ. ಆದರೆ ಚಿಕಿತ್ಸೆ ನೀಡಿಲ್ಲ. ನಂತರ ವೊಕಾರ್ಡ್ ಆಸ್ಪತ್ರೆ, ತೆರಳಿದ್ರೂ ಅಲ್ಲೂ ಕೂಡ ಇದೇ ಪರಿಸ್ಥಿತಿ. ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಬೆಡ್ ಖಾಲಿ ಇಲ್ಲ ಎಂದು 3 ಗಂಟೆ ಕಾಯಿಸಿದ್ದಾರೆ ಚಿಕಿತ್ಸೆಗೆ ನಿರಾಕರಿಸಿದ್ದಾರೆ. ಸೇಂಟ್ ಜಾನ್ಸ್ ಆಸ್ಪತ್ರೆಗೆ ತೆರಳಿದ್ರೆ ಅಲ್ಲೂ ದಾಖಲಿಸಿಕೊಂಡಿಲ್ಲ. ಮೂರು ದಿನಗಳಿಂದ ಚಿಕಿತ್ಸೆಯೂ ಸಿಕ್ಕಿಲ್ಲ, ಕೊವಿಡ್ ರಿಪೋರ್ಟ್ ಕೂಡ ಬಂದಿಲ್ಲ. ಮೂರು ದಿನ ಆಸ್ಪತ್ರೆಗಳನ್ನು ಅಲೆದಾಡಿ ಇಂದು ಪ್ರಾಣ ಬಿಟ್ಟಿದ್ದಾರೆ.

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ