AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರು ದಿನದಿಂದ ಆಸ್ಪತ್ರೆ ಅಲೆದಾಡಿ ಪ್ರಾಣ ಬಿಟ್ಟ ನಿವೃತ್ತ ಸಬ್​ಇನ್ಸ್​ಪೆಕ್ಟರ್

ಬೆಂಗಳೂರು: ಕೊರೊನಾ ಎಲ್ಲವನ್ನೂ ಬದಲಾಯಿಸಿದೆ. ಹಣ ಇದ್ದರು ಚಿಕಿತ್ಸೆ ಸಿಗುವುದು ಕಷ್ಟವಾಗಿದೆ. ಕೊರೊನಾ ಸೋಂಕುಪೀಡಿತರಿಗೆ ಯಮಯಾತನೆ ತೂರಿಸುತ್ತಿದೆ. ಅನಾರೋಗ್ಯಕ್ಕೊಳಗಾದ್ರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆಯೇ ಸಿಗ್ತಿಲ್ಲ. ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಅಮಾನವೀಯತೆ ಎದ್ದು ಕಾಣುತ್ತಿದೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ರೂ ಡೋಂಟ್​ಕೇರ್ ಎನ್ನುವಂತಾಗಿದೆ. ಸರ್ಕಾರಿ, ಖಾಸಗಿ ಆಸ್ಪತ್ರೆಗಳ ನಿರ್ಲಕ್ಷ್ಯಕ್ಕೆ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ನಿವೃತ್ತ ಸಬ್​ಇನ್ಸ್​ಪೆಕ್ಟರ್ ಬಲಿಯಾಗಿದ್ದಾರೆ. ತಡರಾತ್ರಿ 3 ಗಂಟೆ ಸುಮಾರಿಗೆ ನಿವೃತ್ತ ಸಬ್​ಇನ್ಸ್​ಪೆಕ್ಟರ್ ಕೊನೆಯುಸಿರೆಳೆದಿದ್ದಾರೆ. ಇವರು ಕಳೆದ ಮೂರು ದಿನಗಳಿಂದ ಆಸ್ಪತ್ರೆಗಳಿಗೆ ಅಲೆದಾಡಿದ್ದಾರೆ. ಆದ್ರೆ ಎಲ್ಲೂ ಚಿಕಿತ್ಸೆ ಸಿಕ್ಕಿಲ್ಲ. […]

ಮೂರು ದಿನದಿಂದ ಆಸ್ಪತ್ರೆ ಅಲೆದಾಡಿ ಪ್ರಾಣ ಬಿಟ್ಟ ನಿವೃತ್ತ ಸಬ್​ಇನ್ಸ್​ಪೆಕ್ಟರ್
ಆಯೇಷಾ ಬಾನು
|

Updated on: Jul 03, 2020 | 9:33 AM

Share

ಬೆಂಗಳೂರು: ಕೊರೊನಾ ಎಲ್ಲವನ್ನೂ ಬದಲಾಯಿಸಿದೆ. ಹಣ ಇದ್ದರು ಚಿಕಿತ್ಸೆ ಸಿಗುವುದು ಕಷ್ಟವಾಗಿದೆ. ಕೊರೊನಾ ಸೋಂಕುಪೀಡಿತರಿಗೆ ಯಮಯಾತನೆ ತೂರಿಸುತ್ತಿದೆ. ಅನಾರೋಗ್ಯಕ್ಕೊಳಗಾದ್ರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆಯೇ ಸಿಗ್ತಿಲ್ಲ. ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಅಮಾನವೀಯತೆ ಎದ್ದು ಕಾಣುತ್ತಿದೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ರೂ ಡೋಂಟ್​ಕೇರ್ ಎನ್ನುವಂತಾಗಿದೆ.

ಸರ್ಕಾರಿ, ಖಾಸಗಿ ಆಸ್ಪತ್ರೆಗಳ ನಿರ್ಲಕ್ಷ್ಯಕ್ಕೆ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ನಿವೃತ್ತ ಸಬ್​ಇನ್ಸ್​ಪೆಕ್ಟರ್ ಬಲಿಯಾಗಿದ್ದಾರೆ. ತಡರಾತ್ರಿ 3 ಗಂಟೆ ಸುಮಾರಿಗೆ ನಿವೃತ್ತ ಸಬ್​ಇನ್ಸ್​ಪೆಕ್ಟರ್ ಕೊನೆಯುಸಿರೆಳೆದಿದ್ದಾರೆ. ಇವರು ಕಳೆದ ಮೂರು ದಿನಗಳಿಂದ ಆಸ್ಪತ್ರೆಗಳಿಗೆ ಅಲೆದಾಡಿದ್ದಾರೆ. ಆದ್ರೆ ಎಲ್ಲೂ ಚಿಕಿತ್ಸೆ ಸಿಕ್ಕಿಲ್ಲ. ಜ್ವರ, ಉಸಿರಾಟದ ಸಮಸ್ಯೆಯಿಂದ ಕಂಗಾಲಾಗಿದ್ದ 67 ವರ್ಷದ ವೃದ್ಧ ಮೃತಪಟ್ಟಿದ್ದಾರೆ.

ಹೆಬ್ಬಾಳದ ವೈದ್ಯರು ಆಸ್ಪತ್ರೆಗೆ ದಾಖಲಾಗುವಂತೆ ಸೂಚನೆ ನೀಡಿದ್ರು. ಮೃತ ನಿವೃತ್ತ ಸಬ್​ಇನ್ಸ್​ಪೆಕ್ಟರ್ ವಿಲ್ಸನ್ ಗಾರ್ಡನ್ ಅಗಡಿ ಆಸ್ಪತ್ರೆಗೆ ತೆರಳಿದ್ರೂ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ. ಕೇವಲ ಕೊರೊನಾ ಟೆಸ್ಟ್ ಮಾಡಿ ₹4,500 ಪಾವತಿಸಿಕೊಂಡಿದ್ದಾರೆ. ಆದರೆ ಚಿಕಿತ್ಸೆ ನೀಡಿಲ್ಲ. ನಂತರ ವೊಕಾರ್ಡ್ ಆಸ್ಪತ್ರೆ, ತೆರಳಿದ್ರೂ ಅಲ್ಲೂ ಕೂಡ ಇದೇ ಪರಿಸ್ಥಿತಿ. ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಬೆಡ್ ಖಾಲಿ ಇಲ್ಲ ಎಂದು 3 ಗಂಟೆ ಕಾಯಿಸಿದ್ದಾರೆ ಚಿಕಿತ್ಸೆಗೆ ನಿರಾಕರಿಸಿದ್ದಾರೆ. ಸೇಂಟ್ ಜಾನ್ಸ್ ಆಸ್ಪತ್ರೆಗೆ ತೆರಳಿದ್ರೆ ಅಲ್ಲೂ ದಾಖಲಿಸಿಕೊಂಡಿಲ್ಲ. ಮೂರು ದಿನಗಳಿಂದ ಚಿಕಿತ್ಸೆಯೂ ಸಿಕ್ಕಿಲ್ಲ, ಕೊವಿಡ್ ರಿಪೋರ್ಟ್ ಕೂಡ ಬಂದಿಲ್ಲ. ಮೂರು ದಿನ ಆಸ್ಪತ್ರೆಗಳನ್ನು ಅಲೆದಾಡಿ ಇಂದು ಪ್ರಾಣ ಬಿಟ್ಟಿದ್ದಾರೆ.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ